ಶಾ ವಿರುದ್ಧ ಮತ್ತೆ ಕಾಂಗ್ರೆಸ್‌ ನಾಯಕರ ವಾಗ್ಧಾಳಿ


Team Udayavani, Feb 4, 2018, 6:05 AM IST

3BNP-(4).jpg

ಬೆಂಗಳೂರು: ಕೇಂದ್ರ ಸರ್ಕಾರ ನೀಡಿದ ಹಣದ ಲೆಕ್ಕ ಕೇಳಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಿರುದ್ದ ರಾಜ್ಯ ಕಾಂಗ್ರೆಸ್‌ ನಾಯಕರು ಕನ್ನಡಿಗರ ಸ್ವಾಭಿಮಾನದ ಅಸ್ತ್ರ ಪ್ರಯೋಗಿಸಿದ್ದಾರೆ.

ಅಮಿತ್‌ ಶಾ ಸುಳ್ಳು ಹೇಳಿ ತೆರಿಗೆ ಕಟ್ಟುವ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ  ಉಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕೃಷಿ ಸಚಿವ ಕೃಷ್ಣಬೈರೇಗೌಡ ಆರೋಪಿಸಿದ್ದಾರೆ.

ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಅನುದಾನದ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, ಕೇಂದ್ರ ಸರ್ಕಾರ 3 ಲಕ್ಷ ಕೋಟಿ ರೂ. ಹಣ ನೀಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಸುಳ್ಳುಗಳನ್ನೇ ಹೇಳುವ ಅಮಿತ್‌ ಶಾಗೆ ಸುಳ್ಳಿನ ಸಾರ್ವಭೌಮ ಎಂದು ಬಿರುದು ಕೊಡುವುದು ಸೂಕ್ತ ಎಂದು ಲೇವಡಿ ಮಾಡಿದರು.

14ನೇ ಹಣಕಾಸು ಆಯೋಗದ ಪ್ರಕಾರ ಐದು ವರ್ಷಗಳಲ್ಲಿ ರಾಜ್ಯಕ್ಕೆ 2.2 ಲಕ್ಷ  ಕೋಟಿ ರೂ. ಹಣ ಬರಬೇಕು. ಅದರಲ್ಲಿ ಮೂರು ವರ್ಷದಲ್ಲಿ ಕೇಂದ್ರ ಸರ್ಕಾರದಿಂದ 95,204 ಕೋಟಿ ಹಣ ಬರಬೇಕಿತ್ತು. ಆದರೆ, ಇದುವರೆಗೂ ಬಂದಿರುವುದು 84,651 ಕೋಟಿ ರೂ. ಮಾತ್ರ.  ಇನ್ನೂ 10553 ಕೋಟಿ ರೂ. ಬಾಕಿ ಬರಬೇಕಿದೆ. ಹೀಗಾಗಿ, ಅಮಿತ್‌ ಶಾ  ರಾಜ್ಯಕ್ಕೆ ಕೊಡಬೇಕಾದ ಬಾಕಿ ಹಣದ ಲೆಕ್ಕ ಕೊಡಲಿ ಎಂದು ಆಗ್ರಹಿಸಿದರು.

ರಾಜ್ಯದಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ  ಒಂದು ರೂ. ಹೋದರೆ  ಅದರಲ್ಲಿ ರಾಜ್ಯಕ್ಕೆ 47 ಪೈಸೆ ಮಾತ್ರ ವಾಪಸ್‌ ಬರುತ್ತದೆ. ಉಳಿದ ಹಣ ಹಿಂದುಳಿದ ರಾಜ್ಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕೊಡುಗೆ ನೀಡುತ್ತಿದೆ. ಆದರೆ, ಅಮಿತ್‌ ಶಾ ರಾಜ್ಯ ಸರ್ಕಾರಕ್ಕೆ ಭಿಕ್ಷೆ ನೀಡಿದ ರೀತಿಯಲ್ಲಿ ರಾಜ್ಯಕ್ಕೆ ಬಂದಾಗಲೆಲ್ಲಾ ಹೇಳಿ, ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ನೀವು ಹಣ ಕೊಟ್ಟಿದ್ದೇವೆ ಎಂದು ಹೇಳಲು ಕನ್ನಡಿಗರೇನು ಭಿಕ್ಷುಕರಾ ? ನಿಮ್ಮ ಸುಳ್ಳಿನ ಮಾತುಗಳನ್ನು ಕೇಳಲು ನಾವು ಕೈ ಕಟ್ಟಿ ಕುಳಿತಿಲ್ಲ ಎಂದು  ವಾಗ್ಧಾಳಿ ನಡೆಸಿದರು.

ಅಮಿತ್‌ ಶಾ ಸುಳ್ಳು ಹೇಳುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ಕೇಂದ್ರ ಸರ್ಕಾರ ನೀಡಿದ 3 ಲಕ್ಷ ಕೋಟಿ ರೂ. ಆದೇಶದ ಪ್ರತಿಯನ್ನು ಪ್ರಧಾನಿ ಭಾನುವಾರ ರಾಜ್ಯಕ್ಕೆ ಬಂದಾಗ ಸಾರ್ವಜನಿಕರಿಗೆ ಬಿಡುಗಡೆ ಮಾಡಲಿ. ಇಲ್ಲದಿದ್ದರೆ ಅಮಿತ್‌ ಶಾ ಸುಳ್ಳು ಹೇಳಿದ್ದಾರೆ ಎಂದು ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಕನ್ನಡಿಗರು ಕಟ್ಟುವ ತೆರಿಗೆಯಿಂದ ಕೇಂದ್ರ ಸರ್ಕಾರ ನಡೆಯುತ್ತಿದೆ. ಅಲ್ಲದೇ ಬಿಜೆಪಿ ಆಡಳಿತವಿರುವ ಅನೇಕ ಹಿಂದುಳಿದ ರಾಜ್ಯಗಳ ಅಭಿವೃದ್ದಿಗೆ ಕನ್ನಡಿಗರ ತೆರಿಗೆ ಹಣ ಬಳಕೆಯಾಗುತ್ತಿದೆ. ದೇಶದ ಅಭಿವೃದ್ಧಿಗೆ ತೆರಿಗೆ ನೀಡುತ್ತಿರುವ ಕನ್ನಡಿಗರಿಗೆ ಹೆಮ್ಮೆ ಇದೆ. ಅಮಿತ್‌ ಶಾ ಅಜ್ಞಾನದಿಂದ ಹೊರಬರಬೇಕು ಎಂದು ಹೇಳಿದರು.

ಮೊದಲು ಕೇಂದ್ರ ಸರ್ಕಾರದ  ಪುರಸ್ಕೃತ ಯೋಜನೆಗೆ ಶೇ. 60 ರಿಂದ 100 ರ ವರೆಗೂ ಕೇಂದ್ರದಿಂದಲೇ ಅನುದಾನ ಬರುತ್ತಿತ್ತು. ಆದರೆ, ಈಗ ಕೇಂದ್ರದ ಅನುದಾನ ಕಡಿಮೆಯಾಗಿದ್ದು, ಕೇಂದ್ರದ ಯೋಜನೆಗಳಿಗೂ ರಾಜ್ಯ ಸರ್ಕಾರವೇ ಹಣ ಭರಿಸಬೇಕಾಗಿದೆ ಎಂದು ದೂರಿದರು.

ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಆರ್ಥಿಕ ಸಮೀಕ್ಷೆ ಪ್ರಕಾರ ಕರ್ನಾಟಕ ಶೇ.  9.47 ರಷ್ಟು ತೆರಿಗೆ ನೀಡುತ್ತಿದ್ದು, ಹಣಕಾಸು ಆಯೋಗ ಶೇ. 4.713ರಷ್ಟು ಮಾತ್ರ ರಾಜ್ಯಕ್ಕೆ ನೀಡುತ್ತಿದೆ. ಕನ್ನಡಿಗರು ದೇಶದ ಪ್ರಗತಿಗೆ ಕೈ ಜೋಡಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರ ಅಭಿನಂದನೆ ಸಲ್ಲಿಸಬೇಕು ಎಂದು ಹೇಳಿದರು.

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಿಡುಗಡೆಯಾಗಿರುವ ಹಣ
                2013-14    14-15        15-16        16-17        17-18
ಕೇಂದ್ರದ ಪಾಲು        9099        14619        13929        15703        16082
ರಾಜ್ಯದ ಪಾಲು        7247        15819        15782        17873        27834
ಒಟ್ಟು ಖರ್ಚು        16346        30438        29711        33576        43916

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.