ಬಿ.ಜಿ. ಬಣಕಾರ ನಿಧನ
Team Udayavani, Feb 8, 2018, 6:30 AM IST
ಹಿರೇಕೆರೂರ: ಹಿರಿಯ ಸಹಕಾರಿ ಧುರೀಣ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಬಿ.ಜಿ. ಬಣಕಾರ (91) ಬುಧವಾರ ರಾತ್ರಿ ನಿಧನರಾದರು.
ಮೃತರಿಗೆ ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಸೇರಿದಂತೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವಿದೆ. ಫೆ.8ರಂದು ಮಧ್ಯಾಹ್ನ 3 ಗಂಟೆಗೆ ಹಿರೇಕೆರೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಬಿ.ಜಿ. ಬಣಕಾರ ಕೆಲ ದಿನ ಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದರು.
ಬುಧವಾರ ರಾತ್ರಿ 9 ಗಂಟೆ ಹೊತ್ತಿಗೆ ಅಸ್ವಸ್ಥರಾಗುತ್ತಿದ್ದಂತೆ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾ ಗಿತ್ತು. ಬಿ.ಜಿ. ಬಣಕಾರ ಹಿರೇ ಕೆರೂರು ಕ್ಷೇತ್ರ ದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1972ರಲ್ಲಿ ಕಾಂಗ್ರೆಸ್, 1983ರಲ್ಲಿ ಪಕ್ಷೇತರ ಶಾಸಕ, 1985ರಲ್ಲಿ ಜನತಾ ದಳ ಶಾಸಕರಾಗಿದ್ದರು. ದೇವರಾಜ ಅರಸು ಸಂಪುಟದಲ್ಲಿ ಪಶುಸಂಗೋಪನೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.ದಿ.ರಾಮಕೃಷ್ಣ ಹೆಗಡೆಯವರ ಆಡಳಿತಾವಧಿಯಲ್ಲಿ ವಿಧಾನ ಸಭಾಧ್ಯಕ್ಷರಾಗಿ ಕಾರ್ಯನಿರ್ವ ಹಿಸಿದ್ದರು. ಉತ್ತಮ ಸಂಸದೀಯ ಪಟು, ರಾಜಕೀಯ ಮುತ್ಸದ್ದಿಯಲ್ಲದೆ, ಸಹಕಾರ ಕ್ಷೇತ್ರದಲ್ಲೂ ಬಣಕಾರ ಅಪಾರ ಕೊಡುಗೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ