ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರ
Team Udayavani, Feb 11, 2018, 6:40 AM IST
ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ನಾಯಕತ್ವ ವಹಿಸಿಕೊಂಡು ಅಖೀಲ ಭಾರತ ವೀರಶೈವ ಮಹಾಸಭೆಯ ಮಹಾದಾನಿ ಸದಸ್ಯತ್ವಕ್ಕೆ ಹಿರಿಯ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ.
ಅ.ಭಾ.ವೀರಶ್ವವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಹೊರಟ್ಟಿಯವರ ರಾಜೀನಾಮೆ ಅಂಗೀಕರಿಸಿದ್ದಾರೆ. ಈ ಸಂಬಂಧ ಹೊರಡಿಸಲಾದ ಪತ್ರದಲ್ಲಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಲು ತಮಗೆ ವಿಷಾಧವಾಗುತ್ತದೆ ಎಂದು ತಿಳಿಸಿದ್ದಾರೆ. ಜತೆಗೆ “ನಿಮ್ಮ ಮುಂದಿನ ಕೆಲಸ ಕಾರ್ಯಗಳಿಗೆ ಬಸವಾದಿಶರಣರು ತಮ್ಮ ಕೈ ಹಿಡಿದು ನಡೆಸಲಿ ಎಂದು ಮಹಾಸಭೆಯು ಪ್ರಾರ್ಥಿಸುತ್ತದೆ ‘ ಎಂದು ತಿಳಿಸುವ ಮೂಲಕ ಹೊರಟ್ಟಿಯವರು ನಡೆಸುತ್ತಿರುವ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟವನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಹೋರಾಟವನ್ನು ತೀವ್ರಗೊಳಿಸಲು ವೀರಶೈವ ಮಹಾಸಭೆಗೆ ಪರ್ಯಾಯವಾಗಿ ಲಿಂಗಾಯತ ಮಹಾಸಭೆ ಸ್ಥಾಪಿಸುವ ನಿರ್ಣಯ ಕೈಗೊಂಡು ಬಸವರಾಜ ಹೊರಟ್ಟಿ ಹಾಗು ಲಿಂಗಾಯತ ಧರ್ಮ ಚಳುವಳಿಗಾರರು ವೀರಶೈವ ಮಹಾಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ