ನೀರಿಗಾಗಿ ವಾರ್‌: ಅಧಿಕಾರಿಗಳಿಂದ ಸಂಧಾನ ಸೂತ್ರ


Team Udayavani, Feb 11, 2018, 6:20 AM IST

Chikmagalur.jpg

ಚಿಕ್ಕಮಗಳೂರು: ಕೆರೆ ನೀರು ಬಿಡುವ ವಿಚಾರವಾಗಿ ಸಖರಾಯಪಟ್ಟಣದಲ್ಲಿ ಉಂಟಾಗಿದ್ದ ಗಲಭೆ ನಿಯಂತ್ರಣಕ್ಕೆ ಬಂದಿದ್ದು, ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಶನಿವಾರ ಶಾಂತಿ ಸಭೆ ನಡೆಸಿದ್ದಾರೆ. ಅಯ್ಯನಕೆರೆಯಲ್ಲಿ ಇರುವ ನೀರನ್ನು ಬ್ರಹ್ಮಸಮುದ್ರ ಕೆರೆಗೆ ಶೇ.50 ಹಾಗೂ ಸಖರಾಯಪಟ್ಟಣ ಕೆರೆಗೆ ಶೇ.50ರಷ್ಟು ಹಂಚಿಕೆ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬ್ರಹ್ಮಸಮುದ್ರ ಕೆರೆಗೆ ಅಯ್ಯನಕೆರೆಯಿಂದ ನೀರು ಬಿಡುವ ವಿಚಾರವಾಗಿ ವಿವಿಧ ಗ್ರಾಮಗಳ ಗ್ರಾಮಸ್ಥರು ಹಾಗೂ ಸಖರಾಯಪಟ್ಟಣದ ಗ್ರಾಮಸ್ಥರ ನಡುವೆ ಶುಕ್ರವಾರ ಮಾರಾಮಾರಿ ನಡೆದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ತರೀಕೆರೆ ಉಪವಿಭಾಗಾಧಿಕಾರಿ ಬಿ.ವಿ. ಸರೋಜ, ಕಡೂರು ತಹಶೀಲ್ದಾರ್‌ ಭಾಗ್ಯ, ತರೀಕೆರೆ ಡಿವೈಎಸ್‌ಪಿ ತಿರುಮಲೇಶ್‌, ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್‌ ಯು.ವಿ.ನಾರಾಯಣ್‌, ಎಇಇ ಚನ್ನಬಸಪ್ಪ ಅಯ್ಯನಕೆರೆಗೆ ತೆರಳಿ ಅಲ್ಲಿ ಇರುವ ನೀರಿನ ಪ್ರಮಾಣ ಕುರಿತು ಪರಿಶೀಲನೆ ನಡೆಸಿದರು. ನಂತರ ಸಖರಾಯಪಟ್ಟಣ ಪೊಲೀಸ್‌ ಠಾಣೆಯಲ್ಲಿ ಎರಡೂ ಕಡೆಯ ಮುಖಂಡರೊಂದಿಗೆ ಶಾಂತಿಸಭೆ ನಡೆಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್‌ ಯು.ವಿ. ನಾರಾಯಣ್‌ ಮಾತನಾಡಿ , ಕೆರೆಯಲ್ಲಿ ಈಗ 4 ಅಡಿ ನೀರು ಲಭ್ಯವಿದೆ. ಕಳೆದ ವರ್ಷ ಮಳೆಗಾಲದ ನಂತರ ಕೆರೆಯಲ್ಲಿ 32 ಅಡಿ ನೀರಿತ್ತು. ಆದರೆ ಈ ವರ್ಷ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಕೇವಲ 22 ಅಡಿ ನೀರಿತ್ತು.  ಫೆ.7ರಂದು ಸಖರಾಯಪಟ್ಟಣ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಕೆರೆಯಲ್ಲಿ ನೀರು ಕಡಿಮೆ ಇದೆ. ಅದನ್ನೂ ಬಿಟ್ಟರೆ ಸಖರಾಯಪಟ್ಟಣ ಗ್ರಾಮಕ್ಕೆ ಕುಡಿವ ನೀರಿಗೆ ತೊಂದರೆಯಾಗುತ್ತದೆ ಎಂದು ತಿಳಿಸಿದ್ದರು. ಆಗ ಜಿಲ್ಲಾಧಿಕಾರಿಗಳು ನಾಲೆಗೆ ನೀರು ಬಿಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದರು ಎಂದು ತಿಳಿಸಿದರು.

ಈಗ ಕೆರೆಯಲ್ಲಿ ಕೇವಲ 4 ಅಡಿ ನೀರಿದೆ. ನೀರನ್ನು ನಾಲೆಯ ಮೂಲಕ ಬ್ರಹ್ಮಸಮುದ್ರ ಕೆರೆಗೆ ಬಿಟ್ಟರೂ ನೀರು ಇಂಗುವುದರಿಂದ ಪೂರ್ಣ ಪ್ರಮಾಣದ ನೀರು ಬ್ರಹ್ಮಸಮುದ್ರ ಕೆರೆ ತಲುಪುವುದಿಲ್ಲ. ಜತೆಗೆ ಮಾರ್ಗ ಮಧ್ಯೆ ಕೆಲವರು ಮೋಟರ್‌ ಮೂಲಕ ನೀರು ತೆಗೆಯುತ್ತಾರೆ. ನೀರು ಬಿಡುವುದರಿಂದ ಬ್ರಹ್ಮಸಮುದ್ರ ಕೆರೆಗೆ ನೀರು ತಲುಪುವುದೂ ಇಲ್ಲ. ಇತ್ತ ಸಖರಾಯಪಟ್ಟಣ ಗ್ರಾಮಕ್ಕೆ ಕುಡಿವ ನೀರು ಒದಗಿಸಲೂ ಆಗುವುದಿಲ್ಲ ಎಂದು ಹೇಳಿದರು.

ಇದಕ್ಕೆ ಒಪ್ಪದ ಬ್ರಹ್ಮಸಮುದ್ರ ಕೆರೆ ವ್ಯಾಪ್ತಿಯ ಗ್ರಾಮಸ್ಥರು,  ನಿರ್ಣಯದಂತೆ ಊರುಕಾಲುವೆ, ಬಸವನಕಾಲುವೆ, ಕಡೆಕಾಲುವೆಗಳಿಗೆ ನೀರು ಬಿಡಲಾಗಿದೆ. ಆದರೆ ಬ್ರಹ್ಮಸಮುದ್ರ ಕೆರೆಗೆ ಮಾತ್ರ ನೀರು ಬಿಟ್ಟಿಲ್ಲ. ಒಬ್ಬೊಬ್ಬರಿಗೊಂದು ನ್ಯಾಯ ಸರಿಯಲ್ಲ ಎಂದು ಕಿಡಿಕಾಡಿದರು. ಕುಡಿಯುವ ನೀರು ಟ್ಯಾಂಕರ್‌ ಆದರೂ ಸರಿ, ಕೆರೆಗೆ ನೀರು ಹರಿಸುವ ಮೂಲಕವಾದರೂ ಸರಿ, ಒಟ್ಟು ಕುಡಿವ ನೀರು ಬಿಡಿ. ಈವರೆಗೂ ಟ್ಯಾಂಕರ್‌ ಮೂಲಕ ನೀರು ಕೊಟ್ಟಿರುವುದಕ್ಕೆ ಗ್ರಾಪಂನಿಂದ ಹಣವನ್ನೇ ಕೊಟ್ಟಿಲ್ಲ. ಅಯ್ಯನಕೆರೆ ಕೇವಲ ಸಖರಾಯಪಟ್ಟಣಕ್ಕೆ ಮಾತ್ರ ಸೇರಿಲ್ಲ. ಸುತ್ತಲ ಎಲ್ಲ ಗ್ರಾಮಗಳಿಗೂ ಸೇರಿದೆ. ಕುಡಿವ ನೀರು ಕೊಡುವುದಾದರೂ ಎಲ್ಲರಿಗೂ ಕೊಡಿ, ಇಲ್ಲವೇ ಯಾರಿಗೂ ಕೊಡಬೇಡಿ ಎಂದು ಆಗ್ರಹಿಸಿದರು.

ಸಂಧಾನ ಸೂತ್ರ
ಶಾಂತಿಸಭೆಯಲ್ಲಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆದ ನಂತರ ಈಗ ಕೆರೆಯಲ್ಲಿ 4 ಅಡಿ ನೀರಿದೆ. ಅದರಲ್ಲಿ 2 ಅಡಿಯಷ್ಟು ನೀರು ಬ್ರಹ್ಮಸಮುದ್ರ ಕೆರೆಗೆ ಬಿಡುವುದು, ಉಳಿದ ನೀರನ್ನು ಸಖರಾಯಪಟ್ಟಣಕ್ಕೆ ಕುಡಿವ ನೀರಿಗಾಗಿ ಬಳಸಿಕೊಳ್ಳುವುದು. ಕೆರೆಯಲ್ಲಿ ಎಷ್ಟು ನೀರಿದೆ, ಎಷ್ಟು ನೀರನ್ನು ಬ್ರಹ್ಮಸಮುದ್ರ ಕೆರೆಗೆ ಬಿಡಬೇಕೆಂಬ ಬಗ್ಗೆ ಎಲ್ಲರೂ ಕೆರೆಯ ಬಳಿ ತೆರಳಿ ಗುರುತು ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.