ಗ್ರಾಮಸ್ಥರಿಟ್ಟ ಬೋನಿಗೆ ಬಿತ್ತು ಚಿರತೆ
Team Udayavani, Feb 12, 2018, 6:15 AM IST
ತರೀಕೆರೆ: ಗ್ರಾಮಸ್ಥರೇ ಇರಿಸಿದ್ದ ಬೋನಿನಲ್ಲಿ ಚಿರತೆಯೊಂದು ಶನಿವಾರ ತಡರಾತ್ರಿ ಬಂಧಿಯಾದ ಘಟನೆ ಅಜ್ಜಂಪುರ ಬಳಿಯ
ಗರಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಒಂದು ಚಿರತೆ ಬಿದ್ದಿತ್ತು.
ಈಗ ಮತ್ತೂಂದು ಚಿರತೆ ಸೆರೆ ಸಿಕ್ಕಿದೆ.
ಗ್ರಾಮದ ಸುತ್ತಮುತ್ತ ಸುಮಾರು ನಾಲ್ಕೈದು ಚಿರತೆಗಳು ಓಡಾಡುತ್ತಿದ್ದವು.ಕಾಡಿನಿಂದ ಆಗಾಗ ಸುತ್ತಮುತ್ತಲಿನ
ಗ್ರಾಮಗಳ ಹತ್ತಿರ ಇವು ಬರುತ್ತಿದ್ದವು. ಇದರಿಂದ ಗ್ರಾಮಸ್ಥರು ಕಂಗಾಲಾಗಿದ್ದರು.
ಗ್ರಾಮಕ್ಕೆ ಹತ್ತಿರವಿರುವ ಕಾಡಿನಲ್ಲಿ ಹಾಗೂ ಊರಿನ ಸಮೀಪವೇ ಚಿರತೆ ಸಂಚರಿ ಸುತ್ತಿರುವುದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದ ಕೆಲವರು ಇದನ್ನು ಸೆರೆ ಹಿಡಿ ಯುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೆ ಅರಣ್ಯ ಇಲಾಖೆ ಯವರು ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಪದೇಪದೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತ ಗರಗದ ಹಳ್ಳಿ ಗ್ರಾಮಸ್ಥರು ಅಜ್ಜಂಪುರಲ್ಲಿರುವ ಅರಣ್ಯ ಇಲಾಖೆ ಕಚೇರಿಗೆ ತೆರಳಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಬೋನು ಪಡೆದು ಊರಿಗೆ ತಂದಿದ್ದರು. ನಂತರ ಅದನ್ನು ಚಿರತೆಗಳು ಓಡಾಡುವ ಅರಣ್ಯ ಪ್ರದೇಶದಲ್ಲಿ ಇರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ