ಜೈಲಿಗೆ ಹೋದವರ ಮರೆತಿರಾ?
Team Udayavani, Feb 13, 2018, 8:15 AM IST
ದೇವದುರ್ಗ (ರಾಯಚೂರು): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರು ರಾಜ್ಯಕ್ಕೆ ಭೇಟಿ ನೀಡುವ ಮುನ್ನ ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದರು ಎಂಬ ವಿಚಾರ ಗೊತ್ತಿಲ್ಲವೇ? ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವ್ಯಂಗ್ಯವಾಡಿದರು.
ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಸೋಮವಾರ ಬುಡಕಟ್ಟು ಸಮುದಾಯಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದರು. “ಮೋದಿಯವರೇ, ನೀವು ಇಲ್ಲಿಗೆ ಬಂದಾಗ ವೇದಿಕೆಯ ಮೇಲೆ ಅತ್ತ ಇತ್ತ ನೋಡಿ. ಭ್ರಷ್ಟಾಚಾರ ಆರೋಪದಡಿ ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಸಹಿತ ಅನೇಕ ನಾಯಕರು ನಿಮಗೆ ಕಾಣಸಿಗುತ್ತಾರೆ. ಭ್ರಷ್ಟಾಚಾರದಲ್ಲಿ ಯಡಿಯೂರಪ್ಪ ದಾಖಲೆ ಮಾಡಿದ್ದಾರೆ. ಆದರೆ, ಐದು ವರ್ಷ ಅಧಿಕಾರ ನಡೆಸಿದರೂ ಕಾಂಗ್ರೆಸ್ ನಾಯಕರ ವಿರುದ್ಧ ಒಂದೇ ಒಂದು ಭ್ರಷ್ಟಾಚಾರ ಆರೋಪಗಳಿಲ್ಲ. ನೋಟು ಅಪಮೌಲ್ಯ, ಜಿಎಸ್ಟಿ ಜಾರಿಗೊಳಿಸಿ ದೇಶದಲ್ಲಿ ಭ್ರಷ್ಟಾ ಚಾರಕ್ಕೆ ಅನುವು ಮಾಡಿಕೊಟ್ಟವರು ನೀವು. ಅಮಿತ್ ಶಾ ಮಗ 50 ಸಾವಿರ ರೂ. ಬಂಡವಾಳ ಹೂಡಿ ಕೋಟ್ಯಂತರ ರೂ.ಗಳಿಸಿದ್ದು ಹೇಗೆ? ಇದಕ್ಕೆ ನಿಮ್ಮಲ್ಲಿ ಉತ್ತರವಿಲ್ಲವೇ? ಯುದ್ಧ ವಿಮಾನ ಖರೀದಿ ಯಲ್ಲಿ ಏನೆಲ್ಲ ಹಗರಣ ಮಾಡಿದ್ದೀರಿ ಎಂಬುದು ನಮಗೆ ಗೊತ್ತಿದೆ’ ಎಂದರು.
ದೇಶದಲ್ಲಿ ಎಲ್ಲಿ ನೋಡಿದರೂ ಕೇವಲ ಚೀನ ಉತ್ಪನ್ನಗಳೇ ಕಾಣಿಸುತ್ತಿವೆ. ಚೀನ ದಿನಕ್ಕೆ 50 ಸಾವಿರ ಉದ್ಯೋಗ ಸೃಷ್ಟಿಸಿದರೆ, ಮೋದಿ ದಿನಕ್ಕೆ 450 ಉದ್ಯೋಗ ಸೃಷ್ಟಿಸಿದ್ದಾರೆ. ಸಂಸತ್ನಲ್ಲಿ 1 ತಾಸು 40 ನಿಮಿಷ ಮಾತನಾಡಿದರೂ ಉದ್ಯೋಗ ಸೃಷ್ಟಿ ಬಗ್ಗೆಯಾಗಲಿ, ರೈತರ ಸಾಲ ಮನ್ನಾ ಬಗ್ಗೆಯಾಗಲಿ ಉಲ್ಲೇಖೀಸಿಲ್ಲ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!