ಜಗತ್ತಿಗೇ ಕನ್ನಡ ಕಂಪಿನ ಬಿತ್ತರ


Team Udayavani, Feb 13, 2018, 8:15 AM IST

a-16.jpg

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ| ಚಂದ್ರಶೇಖರ ಕಂಬಾರರು “ಉದಯವಾಣಿ’ ಜತೆ ಮಾತನಾಡಿ ದೇಶದ ಸಾಹಿತ್ಯ ವಲಯದ ಪ್ರತಿಷ್ಠಿತ ಸಂಸ್ಥೆಯ ಅಧ್ಯಕ್ಷ ಹುದ್ದೆಗೆ ಏರಿರುವ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಅವರ ಜತೆ  ನಡೆಸಿದ ಕಿರು ಸಂದರ್ಶನ ಇಲ್ಲಿದೆ.

ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿರುವ ಬಗ್ಗೆ ನಿಮ್ಮ ಅನಿಸಿಕೆ?
ದೇಶದ ಅತ್ಯುನ್ನತ ಸಾಹಿತ್ಯ ಸಂಸ್ಥೆ ಯನ್ನು ಮುನ್ನಡೆಸುವ ಭಾಗ್ಯ ಸಿಕ್ಕಿರುವುದು ನನ್ನ ಸೌಭಾಗ್ಯ. ಇದು ಅತೀ ದೊಡ್ಡ ಜವಾ
ಬ್ದಾರಿ. ಇಂಥ ಹೊಣೆಗಾರಿಕೆ ವಹಿಸಿಕೊಳ್ಳು ತ್ತಿರುವುದು ನನಗೆ ಸಂತಸ ತಂದಿದೆ.

ಈ ಹುದ್ದೆ ನಿರೀಕ್ಷೆ ಇತ್ತಾ?
ನನ್ನ ಆಯ್ಕೆ ಸಮಸ್ತ ಕನ್ನಡಿಗರಿಗೆ ಸಂದ ಗೌರವ. ಮೊದಲಿನಿಂದಲೂ ನೀವು ಅಧ್ಯಕ್ಷರಾಗ ಬೇಕು ಎಂದು ಸಾಕಷ್ಟು ಸಾಹಿತಿಗಳು ಹೇಳುತ್ತಾ ಬಂದಿದ್ದರು. ಈಗ ದೇಶದ ಎಲ್ಲ ಸಾಹಿತಿ ಗಣ್ಯರು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನಿಮ್ಮ ಆದ್ಯತೆ ಏನು?
ಕೇಂದ್ರ ಸಾಹಿತ್ಯ ಅಕಾಡೆಮಿಯು ದೇಶ‌ದ ನೂರಾರು ಭಾಷೆಗಳನ್ನು ಒಂದೇ ವೇದಿಕೆಗೆ ತರುವ ಸಂಸ್ಥೆ. ಈ ಸಂಸ್ಥೆಯ ಮೂಲಕ  ಭಾರತದ ಭಾಷೆಗಳು ವಿದೇಶೀ ಭಾಷೆಗಳಿಗೆ ಅನುವಾದಗೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು.

ಕನ್ನಡಕ್ಕೆ ನಿಮ್ಮ ಆದ್ಯತೆ ಏನು ?
ಒಂದೇ ಭಾಷೆ ಎಂದು ಟಾರ್ಗೆಟ್‌ ಮಾಡಿ ಕೆಲಸ ಮಾಡಲು ಆಗದು. ಆದರೆ, ಮುಖ್ಯವಾಗಿ ಕನ್ನಡ ಸಹಿತ  ಎಲ್ಲ ಪ್ರಾಂತೀಯ ಭಾಷೆಗಳಿಗೆ ಸಮಸ್ಯೆ ಎದು ರಾಗಿದೆ. ರಾಜ್ಯ ಭಾಷೆಗಳನ್ನು ಉಳಿಸುವ ಹಾಗೂ ಆಯಾ ರಾಜ್ಯಗಳಲ್ಲಿ ಮಾತೃ
ಭಾಷೆಗೆ ಹೆಚ್ಚು ಆದ್ಯತೆ ಸಿಗುವ ಕೆಲಸ ಆಗಬೇಕಿದೆ. ಆ ನಿಟ್ಟಿನಲ್ಲಿ ಖಂಡಿತ ವಾಗಿಯೂ ಕೆಲಸ ಮಾಡಲಿದ್ದೇನೆ.

ಹಿಂದೆಯೂ ಇದು ನಡೆದಿತ್ತಾ?
ಹೌದು, ಪ್ರಾಂತೀಯ ಭಾಷೆಗಳಿಗೆ ಆದ್ಯತೆ ಹಾಗೂ ಮಾತೃಭಾಷೆಯಲ್ಲಿ ಶಿಕ್ಷಣ ಕಡ್ಡಾಯ ವಿಚಾರದಲ್ಲಿ ಐದು ಲಕ್ಷ ಸಹಿ ಸಂಗ್ರಹಿಸಿ ಹಿಂದಿನ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಗೆ ಸಲ್ಲಿಸಲಾಗಿತ್ತು. ಕರ್ನಾಟಕ ಆ ವಿಚಾರದಲ್ಲಿ ದೇಶದ ಇತರ ರಾಜ್ಯಗಳ ಜತೆ ಮಾತುಕತೆ ನಡೆಸುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ಕೇಂದ್ರ ಸಾಹಿತ್ಯ ಅಕಾಡೆಮಿಯು ಮುಂದೆಯೂ ಇದಕ್ಕೆ ಪೂರಕವಾಗಿಯೇ ತನ್ನ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದೆ.

ಈ ಹುದ್ದೆಗೇರಿದ ಮೂರನೇ ಕನ್ನಡಿಗರು ನೀವು?
ಹೌದು, ನಾನು ಆಗಲೇ ಹೇಳಿ ದಂತೆ ಇದು ಕನ್ನಡಿಗರಿಗೆಲ್ಲವೂ ಹೆಮ್ಮೆ. ವಿ.ಕೃ. ಗೋಕಾಕ್‌, ಡಾ| ಅನಂತಮೂರ್ತಿ ಸೇವೆ ಸಲ್ಲಿಸಿರುವ ಸಂಸ್ಥೆ. ಅನೇಕ ಹಿರಿಯ ಸಾಹಿತಿಗಳು ಸಾಹಿತ್ಯ ಅಕಾಡೆಮಿಯ ಹಿರಿಮೆ ಹೆಚ್ಚಿಸಿ ದ್ದಾರೆ. ಆ ಎಲ್ಲ ಹಿರಿಯರು ಹಾಕಿ ಕೊಟ್ಟ ಮಾರ್ಗದಲ್ಲಿ ಕೆಲಸ ಮಾಡು ತ್ತೇನೆ.

ಕಂಬಾರರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸಾರಥ್ಯ
ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ 25 ವರ್ಷಗಳ ಅನಂತರ ಕನ್ನಡಿಗರಿಗೆ ದೊರೆತಿದ್ದು, ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಕಾಡೆಮಿಯ 89 ಗವರ್ನಿಂಗ್‌ ಕೌನ್ಸಿಲ್‌ ಸದಸ್ಯರು ಕಂಬಾರ, ನೆಮಾಡೆ ಮತ್ತು ಪ್ರತಿಭಾ ಅವರನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಿದ್ದರು. ಅಂತಿಮವಾಗಿ ಗೌಪ್ಯ ಮತದಾನ ನಡೆದು ಕಂಬಾರರು 89 ಮತಗಳ ಪೈಕಿ 56 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು. ಒರಿಯಾ ಲೇಖಕಿ ಪ್ರತಿಭಾ ರೊಯ್‌ 29 ಹಾಗೂ ಮರಾಠಿ ಲೇಖಕ ಬಾಲಚಂದ್ರ ನೆಮಾಡೆ 4 ಮತಗಳನ್ನು ಮಾತ್ರ ಗಳಿಸಿದರು. ಕಂಬಾರರು ಐದು ವರ್ಷಗಳ ಕಾಲ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಕಾಡೆಮಿ ಉಪಾಧ್ಯಕ್ಷರಾಗಿದ್ದ ಕಂಬಾರರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರಿಂದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದಿ ಲೇಖಕ ಮಾಧವ ಕೌಶಿಕ್‌ ಆಯ್ಕೆಯಾಗಿದ್ದಾರೆ.

ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.