ರಾಹುಲ್ ಗಾಂಧಿ ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಹೋಗಿಲ್ವಂತೆ
Team Udayavani, Feb 13, 2018, 2:04 PM IST
ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೋಳಿ ತಿಂದು ದೇವಸ್ಥಾನಕ್ಕೆ ಹೋಗಿಲ್ಲ ಎಂದು ಕಾಂಗ್ರೆಸ್ ಶಾಸಕ , ಮಾಜಿ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.
ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಟ್ವೀಟ್ಗೆ ತಿರುಗೇಟು ನೀಡಿರುವ ತಂಗಡಗಿ ರಾಹುಲ್ ಗಾಂಧಿ ಅವರು ಚಪಾತಿ, ಆಲೂಗಡ್ಡೆ ಪಲ್ಯ, ದಾಲ್, ಶಾವಿಗೆ ಬಾತ್ ಮತ್ತು ಪಾಯಸ ಸೇವಿಸಿದ್ದರು. ಮಾಂಸಹಾರ ಮಾಡಿರಲ್ಲಿಲ್ಲ ಎಂದು ತಿಳಿಸಿದ್ದಾರೆ.
ರಾಗಾ ಉತ್ತರವಿಲ್ಲ.!
ಕಲಬುರಗಿಯಲ್ಲಿ ಸುದ್ದಿಗಾರರು ಕೋಳಿ ಸೇವಿಸಿ ದೇವಾಲಯಕ್ಕೆ ತೆರಳಿದ ಕುರಿತಾಗಿನ ಆರೋಪದ ಬಗ್ಗೆ ಪ್ರಶ್ನಿಸಿದಾಗ ರಾಹುಲ್ ಗಾಂಧಿ ಯಾವುದೇ ಉತ್ತರ ನೀಡಲಿಲ್ಲ.
ಇದು ಚರ್ಚಿಸುವ ವಿಷಯವಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿ ‘ಇದು ಚರ್ಚಿಸಬೇಕಾದ ವಿಷಯವೇ ಅಲ್ಲ ಎಂದಿದ್ದಾರೆ. ಅವರು ಮಾಂಸ ತಿಂದಿದ್ದಾರೊ ಬಿಟ್ಟಿದ್ದಾರೊ ಗೊತ್ತಿಲ್ಲ, ಮಾಂಸ ತಿನ್ನುವುದು ಬಿಡುವುದು ಅವರವರಿಗೆ ಬಿಟ್ಟಿದ್ದು’ಎಂದರು.
ರಾಹುಲ್ಗಾಂಧಿ ಕೊಪ್ಪಳದಲ್ಲಿ ನರಸಿಂಹ ಸ್ವಾಮಿ ದೇವಾಲಯ ಸೇರಿದಂದೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದರು.
ರಾಹುಲ್ ಭೇಟಿಯ ಬಳಿಕ ಟ್ವೀಟ್ ಮಾಡಿದ್ದ ಬಿಎಸ್ವೈ ‘ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ 10 ಪರ್ಸೆಂಟ್ ಸಿಎಂ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ಎಲೆಕ್ಷನ್ ಹಿಂದೂ ರಾಹುಲ್ ಗಾಂಧಿ ಮತ್ತೂಂದು ಕಡೆ. ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜಾವಾದ.’ ಎಂದು ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ