ರಾಹುಲ್ ಮಕ್ಕಳಾಟ ನಿಲ್ಲಿಸಲಿ
Team Udayavani, Feb 14, 2018, 8:17 AM IST
ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಲ್ಲಿಗೆ ಬೇಕಾದರೂ ಹೋಗಲಿ, ಏನು ಬೇಕಾದರೂ ತಿನ್ನಲಿ. ಅದನ್ನು ಪ್ರಶ್ನಿಸುವುದಿಲ್ಲ. ಆದರೆ ಮಕ್ಕಳಂತೆ ಆಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಗರಣಗಳ ಆರೋಪ ಹೊತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ರನ್ನು ಪಕ್ಕದಲ್ಲಿಟ್ಟುಕೊಂಡು ರಾಹುಲ್ ಗಾಂಧಿ ತಮ್ಮ ಹಾಗೂ ಬಿಜೆಪಿಯನ್ನು ಟೀಕಿಸುತ್ತಾರೆ. ಅವರ ಟೀಕೆಗಳಿಗೆ ಪ್ರತಿಕ್ರಿಯೆ ನೀಡಬೇಕಾದ ಅಗತ್ಯವಿಲ್ಲ. ಮುಂದೆ ಜನರೇ ಇದಕ್ಕೆಲ್ಲ ಸರಿಯಾದ ಪ್ರತಿಕ್ರಿಯೆ ನೀಡು ತ್ತಾರೆ ಎಂದು ಹೇಳಿದರು. ರಾಹುಲ್ ಗಾಂಧಿ ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲ ಕಾಂಗ್ರೆಸ್ ನೆಲ ಕಚ್ಚಿದೆ. ರಾಜ್ಯದಲ್ಲೂ ಪ್ರಚಾ ರದಲ್ಲಿ ಭಾಗಿಯಾಗುತ್ತಿದ್ದಾರೆ. ಆ ಫಲಿತಾಂಶ ರಾಜ್ಯದಲ್ಲೂ ಪುನರಾವರ್ತನೆಯಾಗಲಿದೆ. ಇನ್ನು ಕೆಲವೇ ತಿಂಗಳಲ್ಲಿ ರಾಜ್ಯದಲ್ಲೂ ಕಾಂಗ್ರೆಸ್ ತೊಲಗಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.