ಫೆ.17: ಜೆಡಿಎಸ್‌ ವಿಕಾಸಪರ್ವ ಸಮಾವೇಶ


Team Udayavani, Feb 14, 2018, 8:48 AM IST

m-17.jpg

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಹಾಗೂ ಬೃಹತ್‌ ಸಮಾವೇಶ ಫೆ.17ರಂದು ಯಲಹಂಕ ಸಮೀಪ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಜ್ಯ ಪ್ರವಾಸದ ಬೆನ್ನಲ್ಲೇ ಜೆಡಿಎಸ್‌ ಅಧಿಕೃತ ಚುನಾವಣಾ ಪ್ರಚಾರ ಹಾಗೂ ಎರಡೂ ಪಕ್ಷಗಳಿಗಿಂತ ಮುಂಚಿತವಾಗಿ ಅಭ್ಯರ್ಥಿಗಳನ್ನು ಘೋಷಿಸಿ ಚುನಾವಣಾ “ಅಖಾಡ’ಕ್ಕೆ ಇಳಿಸಲು ಸಜ್ಜಾಗಿದೆ. ಬಿಎಸ್‌ಪಿ ಅಷ್ಟೇ ಅಲ್ಲದೆ  ಎಡಪಕ್ಷ, ರೈತ ಹಾಗೂ ಕನ್ನಡಪರ ಸಂಘಟನೆಗಳ ಜತೆಯೂ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್‌ ನಿರ್ಧರಿಸಿದ್ದು ಆ ಬಗ್ಗೆಯೂ ಸಮಾವೇಶದಲ್ಲಿ ಘೋಷಣೆ ಹೊರಬೀಳಲಿದೆ.

ಮಂಗಳವಾರ ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಇದೊಂದು ಐತಿಹಾಸಿಕ ಸಮಾವೇಶವಾಗಲಿದ್ದು ಕನಿಷ್ಠ ಹತ್ತು ಲಕ್ಷ ಜನ ಸೇರಲಿದ್ದಾರೆ ಎಂದು ತಿಳಿಸಿದರು. ಸಮಾವೇಶದಲ್ಲಿ ಕಾಂಗ್ರೆಸ್‌ ಅಥವಾ ಬಿಜೆಪಿ ಪಕ್ಷಗಳನ್ನು ಟೀಕೆ ಮಾಡುವುದಾಗಲಿ. ನರೇಂದ್ರಮೋದಿ, ಸಿದ್ದರಾಮಯ್ಯ ಸಹಿತ ಇತರ ಪಕ್ಷಗಳ ನಾಯಕರನ್ನು ದೂರುವುದಾಗಲಿ, ಭ್ರಷ್ಟಾಚಾರದ ಬಗ್ಗೆಯಾಗಲಿ ಮಾತನಾಡುವುದಿಲ್ಲ. ಬದಲಿಗೆ ಜೆಡಿಎಸ್‌ನ ಕಾರ್ಯಕ್ರಮಗಳು, ಅಧಿಕಾರಕ್ಕೆ ಬಂದರೆ ನಮ್ಮ ಬದ್ಧತೆ ಏನು ಎಂಬುದನ್ನು ಜನರ ಮುಂದಿಡಲಾಗುವುದು ಎಂದು ತಿಳಿಸಿದರು.

ಹಾಲಿ ಶಾಸಕರಿಗೆಲ್ಲಾ ಟಿಕೆಟ್‌ ಡೌಟ್‌?: ಮೊದಲ ಹಂತದ ಪಟ್ಟಿಯಲ್ಲಿ  ಜೆಡಿಎಸ್‌ನ ಹಾಲಿ ಶಾಸಕರಿಗೆಲ್ಲಾ ಟಿಕೆಟ್‌ ಅನುಮಾನ.  31 ಶಾಸಕರ ಪೈಕಿ ಐವರಿಗೆ ಟಿಕೆಟ್‌ ತಪ್ಪಲಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ ಭಾಗದ ಶಾಸಕರು ಟಿಕೆಟ್‌ ಕೈ ತಪ್ಪುವ ಪಟ್ಟಿಯಲ್ಲಿದ್ದಾರೆ ಎಂದು ಹೇಳಲಾಗಿದೆ.  

ರಾಜ್ಯದಲ್ಲಿ ಲೋಕೋಪಯೋಗಿ ಹಾಗೂ ಜಲ ಸಂಪನ್ಮೂಲ ಇಲಾಖೆಯ ಸಾವಿರಾರು ಕೋಟಿ ರೂ. ಮೊತ್ತದ ಗುತ್ತಿಗೆ ಕಾಮಗಾರಿ ಹೊರ ರಾಜ್ಯದವರಿಗೆ ನೀಡಲಾಗುತ್ತಿದೆ.  ಕರ್ನಾಟಕದಲ್ಲಿ ಒಳ್ಳೆಯ ಗುತ್ತಿಗೆದಾರರು ಇದ್ದರೂ ಬೇರೆ ರಾಜ್ಯದವರಿಗೆ ಕಾಮಗಾರಿ ಕೊಡುವ ಅವಶ್ಯಕತೆಯೇನು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.