ಬಾಹುಬಲಿ ಮಜ್ಜನಕ್ಕೆ ಮೆರವಣಿಗೆ ಮೆರಗು


Team Udayavani, Feb 17, 2018, 8:15 AM IST

s-21.jpg

ಹಾಸನ: ಶ್ರವಣಬೆಳಗೊಳದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭ್ರಮದ ವಾತಾವರಣ, ಡೊಳ್ಳು, ಕಹಳೆ, ಭಜನೆ, ನೃತ್ಯ ತಂಡಗಳು ರಸ್ತೆಯುದ್ದಕ್ಕೂ ರಂಗು ಹರಿಸಿದ್ದವು. ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕದ ಮುನ್ನಾದಿನ ನಡೆದ ಮಹಾ ಮೆರವಣಿಗೆಯಲ್ಲಿ 200ಕ್ಕೂ ಹೆಚ್ಚು ಕಲಾತಂಡ ಹಾಗೂ 50ಕ್ಕೂ ಹೆಚ್ಚು ಸ್ತಬ್ಧಚಿತ್ರ ಪಾಲ್ಗೊಂಡು ಅವಿಸ್ಮರಣೀಯ ದೃಶ್ಯ ವೈಭವವನ್ನು ದಾಖಲಿಸಿದವು.
ಪಂಚಕಲ್ಯಾಣ ನಗರದಲ್ಲಿ ಮೆರವಣಿಗೆಗೆ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಚಾಲನೆ ನೀಡಿದರು. ಶಾಸಕ ಸಿ.ಎನ್‌.ಬಾಲಕೃಷ್ಣ ಹಾಗೂ ಮಹಾಮಸ್ತಕಾಭಿಷೆಕ ಮಹೋತ್ಸವದ ವಿಶೇಷಾಧಿಕಾರಿ ವರಪ್ರಸಾದರೆಡ್ಡಿ ಅವರೂ ಲಾತಂಡಗಳೊಂದಿಗೆ ಹೆಜ್ಜೆ ಹಾಕಿ ವಾದ್ಯವೃಂದಳೊಂದಿಗೆ ಮೈಮರೆತು ನೃತ್ಯ ಮಾಡಿದರು.ಸುಮಾರು 500 ಮಂದಿ ಜೈನಧರ್ಮ ಧ್ವಜ ಹಿಡಿದು ಹೆಜ್ಜೆ ಹಾಕಿದರು, 2500ಕ್ಕೂ ಹೆಚ್ಚು ಕಲಾವಿದರು ವಿವಿಧ ಕಲಾತಂಡದಲ್ಲಿದ್ದರು, 24 ತೀರ್ಥಂಕರರ ಅಡ್ಡಪಲ್ಲಕ್ಕಿ, ಮಹಾ ಮಸ್ತಕಾಭಿಷೇಕ ಮಹೋತ್ಸವ ಲಾಂಛನ, ಕೋಲಾಟ, ಡೊಳ್ಳು ಕುಣಿತ, ಚಂಡೆವಾದ್ಯ, ಕರಾವಳಿ ಭಾಗದ ಯಕ್ಷಗಾನ ವೇಷಧಾರಿ, ಹುಲಿ ಕುಣಿತ ಹೀಗೆ ನಾನಾ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದರು.

ಮೆರವಣಿಗೆ ಸಂಚರಿಸುವ ಮಾರ್ಗಮಧ್ಯೆ ಸ್ವಯಂಸೇವರಕು ಹಾಗೂ ಸ್ಥಳೀಯರು ಉಚಿತವಾಗಿ ನೀರು, ಮಜ್ಜಗೆ ವಿತರಿಸಿದರು. ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಮಾತಾಜಿಯವರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿತ್ತು, ಮೆರವಣಿಗೆ ಸಾಗುವ ರಸ್ತೆ ಬದಿಯಲ್ಲಿ ಸಾವಿರಾರು ಮಂದಿ ನಿಂತು ಕಲಾವಿದರ ಕಲಾಪ್ರದರ್ಶನ ಹಾಗೂ ಸ್ತಬ್ಧ ಚಿತ್ರವನ್ನು ಕಣ್ತುಂಬಿಕೊಂಡರು.

ದೇವೇಗೌಡ ವೃತ್ತ, ಬಾಹುಬಲಿ ತಾಂತ್ರಿಕ ಕಾಲೇಜು, ಹಾಗೂ ಪಂಚಕಲ್ಯಾಣ ನಗರಗಳಿಂದ 3 ರಸ್ತೆಗಳಲ್ಲಿ ಏಕಕಾಲಕ್ಕೆ  ಮೆರವಣಿಗೆಯು ವಿಂಧ್ಯಗಿರಿಯತ್ತ ಸಾಗಿತು. ಕಲಾತಂಡಗಳು ಸುಮಾರು 2 ತಾಸಿನಲ್ಲಿ 6 ಕಿಮೀ ಕ್ರಮಿಸಿ ವಿಂಧ್ಯಗಿರಿ ಬೆಟ್ಟದ ತಪ್ಪಲಿನಲ್ಲಿ ಸೇರುವು ಮೂಲಕ ಮೆರವಣಿಗೆ ಸಮಾಪ್ತಿಯಾಯಿತು. ಮಹಾ ಮಸ್ತಕಾಭಿಷೇಕ ಸಮಿತಿ ರಾಷ್ಟ್ರೀಯ ಅಧ್ಯಕ್ಷೆ ಸರಿತಾಜೈನ್‌, ರಾಜ್ಯ ಕಾಯಾಧ್ಯಕ್ಷ ಜಿತೇಂದ್ರಕುಮಾರ್‌, ಕಾರ್ಯದರ್ಶಿ ಸತೀಶ್‌ಚಂದ್‌ಜೈನ್‌  ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಶ್ರವಣಬೆಳಗೊಳದಲ್ಲಿ ಇಂದು
ಶ್ರವಣಬೆಳಗೊಳ: ವಿಂಧ್ಯಗಿರಿಯ ಶ್ರೀ ಗೊಮ್ಮಟೇಶ್ವರನಿಗೆ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಮಹಾಮಸ್ತಾಕಾಭಿಷೇಕ ನಡೆಯುವ ಮುನ್ನ ಮುಂಜಾನೆಯಿಂದ ಪ್ರಧಾನ ಅರ್ಚಕರು ಧಾರ್ಮಿಕ ಆಚರಣೆ ನಡೆಸುವರು. ಮುಂಜಾನೆಯಿಂದ ಮಧ್ಯಾಹ್ನದವರೆಗೆ ಮಹಾಮೂರ್ತಿಗೆ ಮಹಾ ಅಭಿಷೇಕ ಮಾಡುವ ದ್ರವ್ಯಗಳನ್ನು ವಿಂಧ್ಯಗಿರಿಗೆ ಸಾಗಣಿಗೆ ಮಾಡಲಾಗುತ್ತದೆ. ಜೈನ ಮುನಿಗಳು, ಮಾತೆಯರು, ಕಳಶ ಪಡೆದಿರುವವರು ಮಧ್ಯಾಹ್ನ 1 ಗಂಟೆಯೊಳಗೆ ವಿಂಧ್ಯಗಿರಿಯ ಮೇಲೇರುವರು. ಆನಂತರ ಮಧ್ಯಾಹ್ನ 2 ಗಂಟೆಗೆ ಸರಿಯಾಗಿ 108 ಕಲಶಗಳ ಪೈಕಿ ಮೊದಲ ಕಳಶದಿಂದ ಜಲಾಭಿಷೇಕ ನಡೆಯಲಿದ್ದು, ಆನಂತರ 107 ಕಲಶಗಳ ಅಭಿಷೇಕ ನಡೆಯುವುದು. ಆನಂತರ ಪಂಚಾಮೃತ ಅಭಿಷೇಕ ನಡೆಯಲಿದೆ.

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.