ಬಾಹುಬಲಿ ದರ್ಶನಕ್ಕೆ ದೈಹಿಕ ಅಶಕ್ತರಿಗಾಗಿ ಡೋಲಿ ಸೇವೆ 


Team Udayavani, Feb 16, 2018, 6:20 AM IST

Bahubali-Mahamasthakabhishe.jpg

ಹಾಸನ: ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿ ನೆಲೆ ನಿಂತಿರುವ ಭಗವಾನ್‌ ಶ್ರೀ ಬಾಹುಬಲಿ ಮೂರ್ತಿಯ ದರ್ಶನ ಮಾಡುವ ಬಯಕೆ ಎಲ್ಲರಿಗೂ ಸಾಮಾನ್ಯ. ಆದರೆ ರೋಗಿಗಳು, ಅಂಗವಿಕಲರು ಹಾಗೂ ವಯೋವೃದ್ಧರಿಗೆ 3,347 ಅಡಿ ಎತ್ತರದ ವಿಂಧ್ಯಗಿರಿಯನ್ನು 618 ಮೆಟ್ಟಿಲು ಹತ್ತಿ ಬಾಹುಬಲಿ ದರ್ಶನ ಮಾಡುವುದು ಕಷ್ಟ. ಹಾಗೆಂದು ಅವರು ನಿರಾಶರಾಗಬೇಕಾಗಿಲ್ಲ. ಅಂತಹ ಅಸಹಾಯಕರಿಗೆ ಡೋಲಿ ವ್ಯವಸ್ಥೆಯಿದೆ.

ಬೆತ್ತದ ಕುರ್ಚಿಗೆ ಎರಡು ಗಳಗಳನ್ನು ಜೋಡಿಸಿಕೊಂಡು (ದೇವರ ಅಡ್ಡೆ ಮಾದರಿ) ಒಬ್ಬರನ್ನು ಕೂರಿಸಿಕೊಂಡು ನಾಲ್ವರು ಹೊತ್ತೂಕೊಂಡು ಬಾಹುಬಲಿಯ ಸನ್ನಿಧಿಗೆ ಬಿಟ್ಟು ದರ್ಶನ ಪಡೆದ ನಂತರ ಮತ್ತೆ ಬೆಟ್ಟದಿಂದ ಹೊತ್ತುಕೊಂಡು ಕೆಳಗಿಳಿಸುವುದು ಡೋಲಿ ವ್ಯವಸ್ಥೆ. ಆದರೆ ಡೋಲಿಯಲ್ಲಿ ಹೋಗಿ ಬರುವವರು ನಿಗದಿತ ಶುಲ್ಕ ಪಾವತಿ ಮಾಡಬೇಕು. ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಡೋಲಿ ಸೇವೆಯ ಶುಲ್ಕ ತುಸು ದುಬಾರಿ. ಸಾಮಾನ್ಯ ದಿನಗಳಲ್ಲಿ ಒಬ್ಬರನ್ನು ಬೆಟ್ಟಕ್ಕೆ ಕರೆದೊಯ್ದು ವಾಪಸ್‌ ಕರೆ ತರಲು 700ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಆದರೆ ಈಗ ಮಹಾಮಸ್ತಕಾಭಿಷೇಕದ ಸಂದರ್ಭವಾಗಿರುವುದರಿಂದ 1,250 ರೂ. ನಿಗದಿಪಡಿಸಲಾಗಿದೆ. ಶ್ರವಣಬೆಳಗೊಳದ ವಿಂಧ್ಯಗಿರಿ ಏರುವವರಿಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರಗೆ ಡೋಲಿ ವ್ಯವಸ್ಥೆ ಮಾಡಲಾಗಿದೆ.

ಸಾಮಾನ್ಯ ದಿನಗಳಲ್ಲಿ  ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿ 20 ಡೋಲಿವಾಲಾಗಳು ಕಾರ್ಯ ನಿರ್ವಹಿಸುತ್ತಾರೆ. ಆದರೆ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಹೆಚ್ಚು ಡೋಲಿಗಳು ಹಾಗೂ ಡೋಲಿವಾಲಾಗಳು ಅಗತ್ಯ. ಹಾಗಾಗಿ ಈ ಮೊದಲು ಸೇವೆ ಸಲ್ಲಿಸುತ್ತಿದ್ದ ಸ್ಥಳೀಯ ಡೋಲಿವಾಲಾಗಳೊಂದಿಗೆ ಜಾರ್ಖಂಡ್‌ನ‌ ಗಿರಿದ್‌ ಜಿಲ್ಲೆಯ ಮಧುವನದಿಂದ 80 ಡೋಲಿವಾಲಾಗಾಳು ಆಗಮಿಸಿ ಡೋಲಿ ಸೇವೆ ಸಲ್ಲಿಸುತ್ತಿದ್ದಾರೆ. ಫೆ.16 ರಿಂದ ಹೆಚ್ಚುವರಿಯಾಗಿ 300 ಡೋಲಿವಾಲಾಗಳು ಜಾರ್ಖಂಡ್‌ನಿಂದ ಆಗಮಿಸುತ್ತಿದ್ದಾರೆ. ಜಾರ್ಖಂಡ್‌ನ‌ವರು ತಾವೇ ಡೋಲಿ ಸಿದ್ಧಪಡಿಸಿಕೊಂಡು ಬಂದಿದ್ದರೆ, ಸ್ಥಳೀಯ ಡೋಲಿವಾಲಾಗಳು ತಮ್ಮ ಗ್ರಾಮದಲ್ಲಿಯೇ ಡೋಲಿ ಸಿದ್ಧಪಡಿಸಿಕೊಂಡು ಬರುತ್ತಾರೆ.

ಶ್ರವಣಬೆಳಗೊಳದ ಜೈನ ಮಠದಿಂದ ಡೋಲಿ ಸೇವೆ ನೀಡಲಾಗುತ್ತಿದ್ದು ಅವುಗಳನ್ನು ಬೆತ್ತದಿಂದ ನಿರ್ಮಿಸಲಾಗಿದೆ. ಈಗ ಹೆಚ್ಚುವರಿಯಾಗಿ 5 ಬೆತ್ತದ ಡೋಲಿಗಳನ್ನು ಶ್ರೀಮಠದ ಆಡಳಿತ ಮಂಡಳಿ ಒದಗಿಸುತ್ತಿದೆ. ಫೆ.25ಕ್ಕೆ ಮಹಾ ಮಸ್ತಕಾಭಿಷೇಕ ಮಹೋತ್ಸವ ಮುಗಿದರೂ ಯಾತ್ರಾರ್ಥಿಗಳು ಮಾರ್ಚ್‌ ಅಂತ್ಯದವರೆಗೂ ಬರುವ ಸಾಧ್ಯತೆಯಿದೆ. ಹಾಗಾಗಿ ಜಾರ್ಖಂಡ್‌ನ‌ ಡೋಲಿವಾಲಾಗಳು ಹೆಚ್ಚಿನ ವಹಿವಾಟು ನಡೆಸುವ ನಿರೀಕ್ಷೆಯಲ್ಲಿದ್ದಾರೆ.

ಜಾರ್ಖಂಡ್‌ನ‌ ಶಿಖರ್ಜಿ ಎಂಬಲ್ಲಿ ಜೈನಧರ್ಮದ 24 ತೀರ್ಥಂಕರರು ಮೋಕ್ಷ ಹೊಂದಿದ ಪವಿತ್ರ ಕ್ಷೇತ್ರವಿದೆ. ಅದೂ  ಭಾರಿ ಎತ್ತರದ ಬೆಟ್ಟ. ಅಲ್ಲಿನ ಯಾತ್ರಾರ್ಥಿಗಳು ಸುಮಾರು 29ಕಿ.ಮೀ. ವರೆಗೆ ಕ್ರಮಿಸಬೇಕಿರುವುದರಿಂದ ಸಾವಿರಾರು ಮಂದಿ ಡೋಲಿ ಕೆಲಸ ಮಾಡಿಕೊಂಡು ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಾರೆ. ಪರಿಣಿತ ಡೋಲಿವಾಲಾರು ಇರುವ ದೇಶದ ಏಕೈಕ ರಾಜ್ಯ ಜಾರ್ಖಂಡ್‌, ಹಾಗಾಗಿ ಅಲ್ಲಿಂದ ಡೋಲಿ ಸೇವಾಗಾರರನ್ನು ಕರೆಸಲಾಗಿದೆ.ಡೋಲಿ ಹೊರುವುದು ನಮಗೇನೂ ಕಷ್ಟವಲ್ಲ. ಜಾರ್ಖಂಡ್‌ನ‌ ತೀರ್ಥಂಕರ ಬೆಟ್ಟಕ್ಕೆ ಹೋಲಿಸಿದರೆ ಶ್ರವಣಬೆಳಗೊಳದ ವಿಂಧ್ಯಗಿರಿ ಅಷ್ಟೇನೂ ಕಷ್ಟವಲ್ಲ. ಈಗ ನಿತ್ಯ ಸರಾಸರಿ 200ಕ್ಕೂ ಹೆಚ್ಚು ಮಂದಿ ಡೋಲಿಯಲ್ಲಿ ಬೆಟ್ಟ ಏರುತ್ತಿದ್ದಾರೆ. ರಜಾ ದಿನಗಳಲ್ಲಿ ಇನ್ನೂ ಹೆಚ್ಚು ಜನರಿಗೆ ಡೋಲಿ ಅಗತ್ಯವಾಗಬಹುದು. ಫೆ.17ರಿಂದ ಡೋಲಿ ಬಳಸುವವರ ಸಂಖ್ಯೆ 500 ದಾಟಬಹುದು. ಅಮಯ್‌ಕುಮಾರ್‌, ಡೋಲಿವಾಲಾ, ಜಾರ್ಖಂಡ್‌ನಿಂದ ಆಗಮಿಸಿದವರು

– ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.