ಜೈಲಿಗೆ ಕಳುಹಿಸಿದರೂ ಹೆದರುವುದಿಲ್ಲ: ಡಿಕೆಶಿ
Team Udayavani, Feb 16, 2018, 12:11 PM IST
ಬೆಂಗಳೂರು: ನ್ಯಾಯ, ಧರ್ಮ ಬಿಟ್ಟು ರಾಜಕಾರಣ ಮಾಡಿಲ್ಲ. ನಾನು ಯಾರಿಗೂ ವಂಚನೆ ಮಾಡಿಲ್ಲ. ಯಾರು ಏನು ಬೇಕಾದರೂ ಮಾಡಲಿ, ಎಫ್ಐಆರ್ ಹಾಕಲಿ, ಕೋರ್ಟ್ಗೆ ಹೋಗಲಿ, ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದರೂ ನಾನು ಹೆದರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಂದಿದ್ದು ನಿಜ. ಅವರು ಏನೇನು ದಾಖಲೆ ತೆಗೆದುಕೊಂಡು ಹೋಗಿದ್ದಾರೋ ಗೊತ್ತಿಲ್ಲ.
ನಾನು ಯಾವುದೇ ತಪ್ಪು ಮಾಡಿಲ್ಲ. ಆದರೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಮಗ್ರ ವರದಿ ಕೊಡಬಹುದು. ಈವರೆಗೆ ಇಡಿಯಾಗಲಿ, ಐಟಿಯಾಗಲಿ ನೋಟಿಸ್ ನೀಡಿಲ್ಲ. ನಾನಾಗಲೀ ಆದಾಯ ತೆರಿಗೆ ಇಲಾಖೆಯಾಗಲೀ ಯಾವುದೇ ಮಾಹಿತಿ ಬಹಿರಂಗ ಪಡಿಸುವಂತಿಲ್ಲ ಎಂದರು.