ಇಂದಿನಿಂದ ಜೈನಕಾಶಿಯಲ್ಲಿ ಹೆಲಿಟೂರಿಸಂ ಆರಂಭ


Team Udayavani, Feb 21, 2018, 6:00 AM IST

Hassan.jpg

ಹಾಸನ: ಶ್ರವಣಬೆಳಗೊಳದ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕವನ್ನು ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗೂ ಪೂರಕವಾಗಿ ಬಳಸಿಕೊಳ್ಳಲು ಜನಿವಾರ ಕೆರೆಯಲ್ಲಿ ದೋಣಿ ವಿಹಾರ ಹಾಗೂ ಜಲ ಸಾಹಸ ಕ್ರೀಡೆಯನ್ನು ಈಗಾಗಲೇ ಆರಂಭಿಸಲಾಗಿದೆ. ಬೆನ್ನ ಹಿಂದೆಯೇ ಈಗ ಶ್ರವಣಬೆಳಗೊಳದಲ್ಲಿ ಹೆಲಿ ಟೂರಿಸಂ ಬುಧವಾರದಿಂದ ಆರಂಭವಾಗಲಿದೆ.

ಶ್ರವಣಬೆಳಗೊಳದ ವಿಂಧ್ಯಗಿರಿಯ ಹಿಂಭಾಗ ಕೆ.ಆರ್‌.ಪೇಟೆ ರಸ್ತೆಯಲ್ಲಿರುವ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ ಆರಂಭವಾಗಲಿದೆ. ಮಂಗಳವಾರ ಹೆಲಿಕಾಪ್ಟರ್‌ ಪ್ರಾಯೋಗಿಕ ಹಾರಾಟ ಆರಂಭವಾಗಿದ್ದು, ಬುಧವಾರ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಹೆಲಿಟೂರಿಸಂ ಉದ್ಘಾಟಿಸುವರು. ಹುಬ್ಬಳ್ಳಿಯ ಕ್ಯಾಪ್ಟನ್‌ ಏವಿಯೇಷನ್‌ ಎರಡು ಹೆಲಿಕಾಪ್ಟರ್‌ಗಳನ್ನು ಬಳಸುತ್ತಿದೆ. ಪ್ರಥಮ ದಿನ ಒಂದು ಹೆಲಿಕಾಪ್ಟರ್‌ ಹಾರಲಿದ್ದು, ಒಂದೆರಡು ದಿನಗಳಲ್ಲಿಯೇ ಮತ್ತೂಂದು ಬಂದು ಸೇರಿಕೊಳ್ಳಲಿದೆ. ಒಟ್ಟು 6 ಸೀಟುಗಳಿರುವ ಎರಡು ಹೆಲಿಕಾಪ್ಟರ್‌ಗಳು ಜಿಲ್ಲೆಯ ಪ್ರಥಮ ಹೆಲಿಟೂರಿಸಂಗೆ ಬಳಕೆಯಾಗುತ್ತಿವೆ.

8 ನಿಮಿಷಕ್ಕೆ 2,100 ರೂ.:
ಶ್ರೀ ಗೊಮ್ಮಟೇಶ್ವರನ ನೆಲೆಯ ವಿಂಧ್ಯಗಿರಿಯನ್ನು ಒಂದು ಸುತ್ತು ಹಾಕಿಕೊಂಡು ಶ್ರವಣಬೆಳಗೊಳ ಪಟ್ಟಣದ ವ್ಯಾಪ್ತಿಯಲ್ಲಿ ಹಾರಾಟ ನಡೆಸುವ ಹೆಲಿಕಾಪ್ಟರ್‌ 8 ನಿಮಿಷಗಳ ಪ್ರಯಾಣಕ್ಕೆ 2,100 ರೂ. ನಿಗದಿಪಡಿಸಲಾಗಿದೆ. ಒಂದು ದಿನಕ್ಕೆ 10ಕ್ಕಿಂತ ಹೆಚ್ಚು ಸುತ್ತು ಹೆಲಿಕಾಪ್ಟರ್‌ ಹಾರಾಟದ ಮೂಲಕ ಅಂದರೆ ದಿನಕ್ಕೆ ಕನಿಷ್ಠ 100 ಜನರು ಹೆಲಿಕಾಪ್ಟರ್‌ನಲ್ಲಿ ಹಾರಾಟದ ಅನುಭವ ಪಡೆಯುವರೆಂದು ಅಂದಾಜಿಸಲಾಗಿದೆ.

ಮಹಾ ಮಸ್ತಕಾಭಿಷೇಕ ಮುಗಿದ ನಂತರವೂ ಒಂದು ತಿಂಗಳ ಕಾಲ ಹೆಲಿಟೂರಿಸಂ ನಡೆಸಲು ಪ್ರವಾಸೋದ್ಯಮ ಇಲಾಖೆ ಹುಬ್ಬಳ್ಳಿಯ ಕ್ಯಾಪ್ಟನ್‌ ಏವಿಯೇಷನ್‌ ಸಮ್ಮತಿ ನೀಡಿದೆ. ಹೆಲಿಟೂರಿಸಂನ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಹಾಸನ ಕಚೇರಿಯ ಉಪ ನಿರ್ದೇಶಕ ಜಿತೇಂದ್ರನಾಥ್‌ ತಿಳಿಸಿದ್ದಾರೆ.

ಪ್ರಥಮ ದಿನವೇ ಗಲಾಟೆ:
ಮಂಗಳವಾರ ಮಧ್ಯಾಹ್ನದಿಂದಲೇ ಹೆಲಿಟೂರಿಸಂ ಆರಂಭವಾಗಬೇಕಾಗಿತ್ತು. ಮಧ್ಯಾಹ್ನ 4 ಗಂಟೆಗೆ ಹೆಲಿಟೂರಿಸಂಗೆ ಚಾಲನೆ ನೀಡುವರೆಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಮಂದಿ ಹೆಲಿಕಾಪ್ಟರ್‌ ಹಾರಾಟದ ಖುಷಿ ಅನುಭವಿಸಲು ಟಿಕೆಟ್‌ಗಳನ್ನೂ ಖರೀದಿಸಿದ್ದರು. ಆದರೆ ಕೊನೇ ಗಳಿಗೆಯಲ್ಲಿ ಪ್ರಥಮ ದಿನ ಪ್ರಾಯೋಗಿಕ ಹಾರಾಟ ಆರಂಭಿಸಿ ಬುಧವಾರದಿಂದ ಅಧಿಕೃತವಾಗಿ ಹೆಲಿಕಾಪ್ಟರ್‌ ಹಾರಾಟ ನಡೆಸಲಾಗುವುದು ಎಂದು ಪ್ರಕಟಿಸಿದರು.

ಆದರೆ ಟಿಕೆಟ್‌ ಖರೀದಿಸಿದ್ದವರು ಗಲಾಟೆ ಆರಂಭಿಸಿದರು. ಅನಿವಾರ್ಯವಾಗಿ ಟಿಕೆಟ್‌ ಖರೀದಿಸಿದವರಿಗೆ ಎರಡು ಸುತ್ತು ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿ ಉಳಿದವರಿಗೆ ಬುಧವಾರ ಆದ್ಯತೆಯನುಸಾರ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿ, ಅನಂತರ ಹೊಸದಾಗಿ ಟಿಕೆಟ್‌ ನೀಡಲಾಗುವುದು ಎಂದು ಭರವಸೆ ನೀಡಿದ ನಂತರ ಪರಿಸ್ಥಿತಿ ಸುಧಾರಿಸಿತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.