ಪ್ರಶ್ನೆ ಕೇಳಿದ ಶಾಸಕರೇ ಗೈರು…!
Team Udayavani, Feb 21, 2018, 6:20 AM IST
ವಿಧಾನಸಭೆ: ಕಲಾಪಕ್ಕೆ ಶಾಸಕರು ಗೈರು ಹಾಜರಾಗುವುದು ಸಾಮಾನ್ಯ ಸಂಗತಿ. ಆದರೆ ಪ್ರಶ್ನೆ ಕೇಳಿದ ಶಾಸಕರೇ ಗೈರು ಹಾಜರಾಗತ್ತಿರುವುದು ಈಗ ಹೊಸ ವಿದ್ಯಮಾನ.
ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಸರ್ಕಾರಕ್ಕೆ ತಮ್ಮ ಕ್ಷೇತ್ರಗಳ ಬಗ್ಗೆ ಪ್ರಶ್ನೆ ಕೇಳಿದ ಬಹುತೇಕ ಶಾಸಕರು ಹಾಜರಾಗಿರಲಿಲ್ಲ. ಸಭಾಧ್ಯಕ್ಷ ಕೋಳಿವಾಡ ಎರಡು ಸುತ್ತು ಕರೆದರೂ ಶಾಸಕರು ಬಂದಿರಲಿಲ್ಲ. ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ, ಮಹಾಲಕ್ಷ್ಮಿ ಲೇಔಟ್ನ ಕೆ.ಗೋಪಾಲಯ್ಯ, ಅರಸೀಕೆರೆಯ ಶಿವಲಿಂಗೇಗೌಡ, ಚಿಂತಾಮಣಿಯ ಕೃಷ್ಣಾರೆಡ್ಡಿ, ನವಲಗುಂದದ ಎನ್.ಎಚ್.ಕೋನರೆಡ್ಡಿ, ಜಗಳೂರಿನ ರಾಜೇಶ್ ಎಚ್.ಪಿ., ಬಾಗೇಪಲ್ಲಿಯ ಸುಬ್ಟಾರೆಡ್ಡಿ, ಶ್ರವಣಬೆಳಗೊಳ ಶಾಸಕ ಸಿ.ಎನ್ ಬಾಲಕೃಷ್ಣ ತಾವು ಕೇಳಿದ ಪ್ರಶ್ನೆ ಬಗ್ಗೆ ಸರ್ಕಾರದಿಂದ ಉತ್ತರ ಪಡೆದು ಚರ್ಚಿಸಲು ಹಾಜರಿರಲಿಲ್ಲ. ಪ್ರಶ್ನೆ ಕೇಳಿ ಸದನಕ್ಕೆ ಗೈರು ಹಾಜರಾದವರಲ್ಲಿ ಜೆಡಿಎಸ್ ಶಾಸಕರೇ ಹೆಚ್ಚಾಗಿದ್ದರು.
ಹೆಚ್ಚಿನ ಶಾಸಕರ ಗೈರು ಹಾಜರಿ ಒಂದು ಕಡೆಯಾದರೆ, ಇನ್ನೊಂದೆಡೆ ಪ್ರಶ್ನೆ ಕೇಳಿದವರಲ್ಲಿ ಹಾಜರಿದ್ದ ಬೆರಳೆಣಿಕೆಯ
ಶಾಸಕರ ಪ್ರಶ್ನೆಗೆ ಉತ್ತರಿಸಲೂ ಕೆಲವು ಸಚಿವರು ಸದನದಲ್ಲಿ ಹಾಜರಿರಲಿಲ್ಲ. ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಪ್ರಶ್ನೆಗೆ ಉತ್ತರಿಸಲು ಗೃಹ ಸಚಿವ ರಾಮಲಿಂಗಾರೆಡ್ಡಿ, ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರ ಕೊಡಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಜರಿರಲಿಲ್ಲ. ಈ ಎರಡೂ ಪ್ರಶ್ನೆಗಳಿಗೆ ನಂತರ ಉತ್ತರ ಕೊಡಿಸುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿ ಪ್ರಶ್ನೆಗಳನ್ನು ತಡೆಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್