ಪ್ರಶ್ನೆ ಕೇಳಿದ ಶಾಸಕರೇ ಗೈರು…!
Team Udayavani, Feb 21, 2018, 6:20 AM IST
ವಿಧಾನಸಭೆ: ಕಲಾಪಕ್ಕೆ ಶಾಸಕರು ಗೈರು ಹಾಜರಾಗುವುದು ಸಾಮಾನ್ಯ ಸಂಗತಿ. ಆದರೆ ಪ್ರಶ್ನೆ ಕೇಳಿದ ಶಾಸಕರೇ ಗೈರು ಹಾಜರಾಗತ್ತಿರುವುದು ಈಗ ಹೊಸ ವಿದ್ಯಮಾನ.
ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಸರ್ಕಾರಕ್ಕೆ ತಮ್ಮ ಕ್ಷೇತ್ರಗಳ ಬಗ್ಗೆ ಪ್ರಶ್ನೆ ಕೇಳಿದ ಬಹುತೇಕ ಶಾಸಕರು ಹಾಜರಾಗಿರಲಿಲ್ಲ. ಸಭಾಧ್ಯಕ್ಷ ಕೋಳಿವಾಡ ಎರಡು ಸುತ್ತು ಕರೆದರೂ ಶಾಸಕರು ಬಂದಿರಲಿಲ್ಲ. ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ, ಮಹಾಲಕ್ಷ್ಮಿ ಲೇಔಟ್ನ ಕೆ.ಗೋಪಾಲಯ್ಯ, ಅರಸೀಕೆರೆಯ ಶಿವಲಿಂಗೇಗೌಡ, ಚಿಂತಾಮಣಿಯ ಕೃಷ್ಣಾರೆಡ್ಡಿ, ನವಲಗುಂದದ ಎನ್.ಎಚ್.ಕೋನರೆಡ್ಡಿ, ಜಗಳೂರಿನ ರಾಜೇಶ್ ಎಚ್.ಪಿ., ಬಾಗೇಪಲ್ಲಿಯ ಸುಬ್ಟಾರೆಡ್ಡಿ, ಶ್ರವಣಬೆಳಗೊಳ ಶಾಸಕ ಸಿ.ಎನ್ ಬಾಲಕೃಷ್ಣ ತಾವು ಕೇಳಿದ ಪ್ರಶ್ನೆ ಬಗ್ಗೆ ಸರ್ಕಾರದಿಂದ ಉತ್ತರ ಪಡೆದು ಚರ್ಚಿಸಲು ಹಾಜರಿರಲಿಲ್ಲ. ಪ್ರಶ್ನೆ ಕೇಳಿ ಸದನಕ್ಕೆ ಗೈರು ಹಾಜರಾದವರಲ್ಲಿ ಜೆಡಿಎಸ್ ಶಾಸಕರೇ ಹೆಚ್ಚಾಗಿದ್ದರು.
ಹೆಚ್ಚಿನ ಶಾಸಕರ ಗೈರು ಹಾಜರಿ ಒಂದು ಕಡೆಯಾದರೆ, ಇನ್ನೊಂದೆಡೆ ಪ್ರಶ್ನೆ ಕೇಳಿದವರಲ್ಲಿ ಹಾಜರಿದ್ದ ಬೆರಳೆಣಿಕೆಯ
ಶಾಸಕರ ಪ್ರಶ್ನೆಗೆ ಉತ್ತರಿಸಲೂ ಕೆಲವು ಸಚಿವರು ಸದನದಲ್ಲಿ ಹಾಜರಿರಲಿಲ್ಲ. ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಪ್ರಶ್ನೆಗೆ ಉತ್ತರಿಸಲು ಗೃಹ ಸಚಿವ ರಾಮಲಿಂಗಾರೆಡ್ಡಿ, ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರ ಕೊಡಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಜರಿರಲಿಲ್ಲ. ಈ ಎರಡೂ ಪ್ರಶ್ನೆಗಳಿಗೆ ನಂತರ ಉತ್ತರ ಕೊಡಿಸುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿ ಪ್ರಶ್ನೆಗಳನ್ನು ತಡೆಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ