ಕೃಷಿ ವಿವಿ ಅಕ್ರಮ ನೇಮಕ ತನಿಖೆಗೆ ಸಮಿತಿ ರಚನೆ


Team Udayavani, Feb 21, 2018, 12:43 PM IST

krushi-vv.jpg

ವಿಧಾನ ಪರಿಷತ್ತು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರು ಹಾಗೂ ಸಹ ಪ್ರಾಧ್ಯಾಪಕರ ನೇಮಕದಲ್ಲಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ವಾರದಲ್ಲಿ ಹಿರಿಯ ಅಧಿಕಾರಿ ನೇತೃತ್ವದ ಸಮಿತಿ ರಚಿಸಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಜೆಡಿಎಸ್‌ನ ಆರ್‌.ಚೌಡರೆಡ್ಡಿ ತೂಪಲ್ಲಿ ಪ್ರಶ್ನೆಗೆ ಉತ್ತರಿಸಿ, ಕಾನೂನಿನಲ್ಲಿ ಅವಕಾಶವಿದ್ದರೆ ನೇಮಕಾತಿ ಆದೇಶವನ್ನು ತಡೆಹಿಡಿಯಲು ಪ್ರಯತ್ನಿಸಲಾಗುವುದು. ದಕ್ಷ ಅಧಿಕಾರಿಯ ನೇತೃತ್ವದಲ್ಲಿ ಸಮಿತಿ ರಚಿಸಿ ಅಭ್ಯರ್ಥಿಗಳಿಂದಲೂ ಅಹವಾಲು ಆಲಿಸಿ, ಸೂಕ್ತ ದಾಖಲೆಗಳನ್ನು ಸರ್ಕಾರದಿಂದಲೂ ಒದಗಿಸಲು ಪ್ರಯತ್ನಿಸಲಾಗುವುದು. ಒಟ್ಟಾರೆ ಅಕ್ರಮ ನಡೆದಿದ್ದರೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಅನುಮಾನ ಬೇಡ ಎಂದು ಹೇಳಿದರು.

ಅಂಕ ಪ್ರಕಟಿಸಿಲ್ಲ: ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಕೆಲ ಅಭ್ಯರ್ಥಿಗಳು ದೂರು ನೀಡಿದ್ದಾರೆ. ಕೃಷಿ ವಿವಿಯು ಅಂಕ ವಿವರವನ್ನೂ ಪ್ರಕಟಿಸಿಲ್ಲ. ಕುಲಪತಿಗಳ ಅಧಿಕಾರಾವಧಿ ಪೂರ್ಣಗೊಳ್ಳುವ ಅಂಚಿನಲ್ಲಿದ್ದಾಗ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳಬಾರದು ಎಂಬ ನಿಯಮವಿದೆ. ಆದರೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ರಾಜ್ಯಪಾಲರು ಕಳೆದ ಜನವರಿಯಲ್ಲಿ ಸಹಜವಾಗಿ ಹೊರಡಿಸಿದ ಆದೇಶವನ್ನು ಆಧಾರವಾಗಿಟ್ಟುಕೊಂಡು ನೇಮಕಾತಿ ನಡೆಸಲಾಗಿದೆ ಎಂದು ಹೇಳಿದರು.

ವಿವಿಗಳ ಉತ್ತಮ ಕಾರ್ಯ ನಿರ್ವಹಣೆಗೆ ಸ್ವಾಯತ್ತತೆ ನೀಡಲಾಗಿದೆ. ಆದರೆ ಇದು ಮೂಲ ಉದ್ದೇಶ ಪಾಲನೆಗಿಂತ ಇತರೆ ಕಾರ್ಯಗಳಿಗೆ ಹೆಚ್ಚಾಗಿ ಬಳಕೆಯಾಗುತ್ತಿದೆ. ಅಕ್ರಮ ನಡೆದಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾದರೆ ಮುಂದೆ ಸೂಕ್ತ ಕ್ರಮ ಜರುಗಿಸಲು ಅವಕಾಶವಾಗಲಿದೆ ಎಂದು ತಿಳಿಸಿದರು.

107 ಹುದ್ದೆ ಅಕ್ರಮ: ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಚೌಡರೆಡ್ಡಿ ತೂಪಲ್ಲಿ, ಸರ್ಕಾರ 49 ಹುದ್ದೆ ನೇಮಕಕ್ಕೆ ಅನುಮತಿ ನೀಡಿದ್ದರೆ ವಿ.ವಿ.ಯು 107 ಹುದ್ದೆಗಳನ್ನು ಅಕ್ರಮವಾಗಿ ನೇಮಕ ಮಾಡಿದೆ. ಕುಲಪತಿಗಳ ಅಧಿಕಾರಾವಧಿ 6 ತಿಂಗಳು ಬಾಕಿ ಇರುವಾಗ ಯಾವುದೇ ನೇಮಕಾತಿ ಮಾಡಬಾರದು ಎಂಬುದಾಗಿ ರಾಜ್ಯಪಾಲರ ಆದೇಶ ಉಲ್ಲಂಘನೆ ಆಗಿರುವುದು ಖಂಡನೀಯ ಎಂದು ಹೇಳಿದರು.

ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಮಾತನಾಡಿ, ಕುಲಪತಿಗಳು ನಿವೃತ್ತಿಯಾಗುವ ಮುನ್ನ ಲೂಟಿ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೂಡಲೇ ನೇಮಕವನ್ನು ರದ್ದುಪಡಿಸಿ ಎಂದು ಒತ್ತಾಯಿಸಿದರು. ಜೆಡಿಎಸ್‌ನ ಬಸವರಾಜ ಹೊರಟ್ಟಿ ಮಾತನಾಡಿ, ನಿಯಮಬಾಹಿರವಾಗಿ ನೇಮಕ ನಡೆಸಿರುವುದು ಹಾಗೂ ಮುಖ್ಯಮಂತ್ರಿಗಳು, ಸಚಿವರ ಸೂಚನೆಯನ್ನೂ ಪಾಲಿಸದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.