ನೀರು ತಿರುಗಿಸಲು ಬಿಡಲ್ಲ: ಗೋವಾ ಸಿಎಂ ಪರ್ರಿಕರ್
Team Udayavani, Feb 22, 2018, 6:35 AM IST
ಪಣಜಿ: ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ತಿರುಗಿಸಲು ಬಿಡುವುದಿಲ್ಲ. ಇದು ಗೋವಾ ಸರ್ಕಾರದ ಧೋರಣೆಯಾಗಿದ್ದು ನಮ್ಮ ಅಭಿಪ್ರಾಯವನ್ನು ನ್ಯಾಯಾಧಿಕರಣದ ಎದುರು ಮಂಡಿಸಿದ್ದೇವೆ ಎಂದು ಗೋವಾ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ.
ಪೊಂಡಾ ಕ್ಷೇತ್ರದ ಶಾಸಕ ರವಿ ನಾಯ್ಕ ಕೇಳಿದ್ದ ಪ್ರಶ್ನೆಗೆ ಮುಖ್ಯಮಂತ್ರಿ ಪರ್ರಿಕರ್ ಲಿಖೀತ ಉತ್ತರ ನೀಡಿದ್ದಾರೆ. ಮಹದಾಯಿ ನದಿಯಲ್ಲಿ 113.50 ಟಿಎಂಸಿ ನೀರಿದೆ. ಗೋವಾಕ್ಕೆ ಇದರಲ್ಲಿ ಎಷ್ಟು ಪಾಲಿದೆ ಎಂಬುದು
ನಿರ್ಧರಿಸಬೇಕಿದೆ.
ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡರೆ ಅದರ ವ್ಯತಿರಿಕ್ತ ಪರಿಣಾಮ ಗೋವಾದ ಮೇಲಾಗಲಿದೆ. ಗೋವಾ ಸರ್ಕಾರವು ಮಹದಾಯಿ ನದಿ ನೀರು ಹಾಗೂ ನದಿ ಹರಿಯುವ ಪ್ರದೇಶದ ಸಮಗ್ರ ಅಭ್ಯಾಸ ನಡೆಸಿದೆ. ಇದರಿಂದಾಗಿ ಮಹದಾಯಿ ನದಿ ನೀರಿನ ವಿಷಯದಲ್ಲಿ ಗೋವಾ ಸರ್ಕಾರದ ನಿರ್ಣಯ ದೃಢವಾಗಿದೆ. ನಾವು ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ತಿರುಗಿಸಿಕೊಳ್ಳಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ