ಆರೋಗ್ಯ ತಪಾಸಣೆಗಾಗಿ ಕುಮಾರ ರಕ್ಷಾ
Team Udayavani, Feb 22, 2018, 6:20 AM IST
ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷದ ವತಿಯಿಂದ ಸೇವಾ ಯೋಜನೆಗಳಿಗೂ ಚಾಲನೆ ದೊರೆಯುತ್ತಿದ್ದು, ಜೆಡಿಎಸ್ ವತಿಯಿಂದ ಆರೋಗ್ಯ ತಪಾಸಣೆಗಾಗಿ “ಕುಮಾರ ರಕ್ಷಣಾ ಜನಸೇವಾ’ ಸಂಚಾರಿ ವಾಹನ ಸಿದ್ಧಪಡಿಸಲಾಗಿದೆ.
ಜೆಡಿಎಸ್ ಹಿರಿಯ ಉಪಾಧ್ಯಕ್ಷ ಹಾಗೂ ಉದ್ಯಮಿಯೂ ಆಗಿರುವ ಉಮೇಶ್ಕುಮಾರ್ ಹಾಗೂ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ “ಕುಮಾರ ರಕ್ಷಣಾ ಜನಸೇವಾ’ ಯೋಜನೆಯ ರೂವಾರಿಗಳು. ಕುಮಾರ ರಕ್ಷಣಾ ಜನಸೇವಾ ಸಂಚಾರಿ ವಾಹನ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ ಮಧುಮೇಹ, ರಕ್ತದ ಒತ್ತಡ, ರಕ್ತ ಪರೀಕ್ಷೆ, ಎಕ್ಸ್ ರೇ ಸೇರಿ ಹಲವು ಸೇವೆ ಒದಗಿಸಲಿದೆ.
ವಾಹನದಲ್ಲಿ ತಜ್ಞ ವೈದ್ಯ ಹಾಗೂ ಸಿಬ್ಬಂದಿಯೂ ಇರಲಿದ್ದಾರೆ. ಪಕ್ಷದ ಕಚೇರಿಯಲ್ಲಿ ಬುಧವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ “ಕುಮಾರ ರಕ್ಷಾ ಜನಸೇವಾ’ ವಾಹನಕ್ಕೆ ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರು ಜನರಿಗೆ ಅನುಕೂಲ ಕಲ್ಪಿಸಲು ಈ ಸೇವೆಗೆ ಮುಂದಾಗಿದ್ದಾರೆ. ಸಂಚಾರಿ ವಾಹನದಲ್ಲಿ ಹಿರಿಯ ನಾಯಕರಿಗೆ ತಪಾಸಣೆ ಮತ್ತು ಔಷಧ ವಿತರಣೆ, ಮಕ್ಕಳ ಆರೋಗ್ಯ ತಪಾಸಣೆ, ಕಾರ್ಮಿಕರಿಗೆ ಅಪಘಾತ ವೇಳೆ ತುರ್ತು ಚಿಕಿತ್ಸೆ, ನೇತ್ರ ತಪಾಸಣೆ, ಅಸ್ತಮಾ ಅಲರ್ಜಿಗೆ ಚಿಕಿತ್ಸೆ ಸಹ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು