ಮನೆ ನಿರ್ಮಾಣಕ್ಕಾಗಿ ರಾಜೀನಾಮೆ ಸವಾಲು
Team Udayavani, Feb 22, 2018, 6:20 AM IST
ವಿಧಾನಸಭೆ: ವಸತಿ ಇಲಾಖೆಯಲ್ಲಿ ನಿರ್ಮಿಸಿರುವ ಮನೆಗಳ ವಿಚಾರದಲ್ಲಿ ಬಿಜೆಪಿ ಸದಸ್ಯ ಯು.ಬಿ.ಬಣಕಾರ್ ಮತ್ತು ವಸತಿ ಸಚಿವ ಎಂ.ಕೃಷ್ಣಪ್ಪ ಪರಸ್ಪರ ರಾಜೀನಾಮೆ ನೀಡುವ ಸವಾಲು ಹಾಕಿಕೊಂಡ ಪ್ರಸಂಗ ಬುಧವಾರ ನಡೆಯಿತು.
ಬಜೆಟ್ ಲೇಖಾನುದಾನದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಬಸವರಾಜ ಬೊಮ್ಮಾಯಿ, ವಸತಿ ಇಲಾಖೆಯಡಿ 5 ವರ್ಷದಲ್ಲಿ 15.5 ಲಕ್ಷ ಮನೆ ಕಟ್ಟುವುದಾಗಿ ಸರ್ಕಾರ ಹೇಳಿತ್ತಾದರೂ ಅಷ್ಟು ಪ್ರಮಾಣದಲ್ಲಿ ಮನೆ ನಿರ್ಮಾಣವಾಗಿಲ್ಲ. ಕಳೆದ ತಿಂಗಳು ವಸತಿ ಸಚಿವರು ಕೊಟ್ಟ ಮಾಹಿತಿ ಪ್ರಕಾರ 13.69 ಲಕ್ಷ ಮನೆಗಳು ಮಾತ್ರ ಪೂರ್ಣಗೊಂಡಿವೆ. ಆದರೆ ವಾಸ್ತವದಲ್ಲಿ ಆ ಪರಿಸ್ಥಿತಿ ಇಲ್ಲ ಎಂದರು.
ಮಧ್ಯಪ್ರವೇಶಿಸಿದ ಸಚಿವ ಕೃಷ್ಣಪ್ಪ, ಸದ್ಯ 14.10 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ ಎಂದು ಹೇಳಿದಾಗ, ರಾಜ್ಯದಲ್ಲಿ 5.5 ಲಕ್ಷ ಮನೆಗಳು ಕೂಡ ನಿರ್ಮಾಣವಾಗಿಲ್ಲ. ಸಚಿವರು ಅಧಿಕಾರಿಗಳ ಮಾತು ಕೇಳಿ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಯು.ಬಿ.ಬಣಕಾರ್ ಆಕ್ಷೇಪಿಸಿದರು. ಈ ವೇಳೆ ತಮ್ಮ ಮಾಹಿತಿಯನ್ನು ಸಚಿವ ಕೃಷ್ಣಪ್ಪ ಸಮರ್ಥಿಸಿಕೊಂಡಾಗ, ಐದೂವರೆ ಲಕ್ಷಕ್ಕಿಂತ ಹೆಚ್ಚು ಮನೆ ನಿರ್ಮಾಣವಾಗಿದ್ದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ.
ಅದಕ್ಕಿಂತ ಕಡಿಮೆ ನಿರ್ಮಾಣವಾಗಿದ್ದರೆ ಸಚಿವರು ರಾಜೀನಾಮೆ ಕೊಡಬೇಕು ಎಂದು ಸವಾಲು ಹಾಕಿದರು. ಇದರಿಂದ ಸಿಟ್ಟುಗೊಂಡ ಸಚಿವ ಎಂ.ಕೃಷ್ಣಪ್ಪ, ನಾನು ಹೇಳಿದಷ್ಟು ಮನೆ ನಿರ್ಮಾಣವಾಗದಿದ್ದಲ್ಲಿ ರಾಜೀನಾಮೆ ನೀಡಲು ಸಿದಟಛಿನಿದ್ದೇನೆ. ಈಗಾಗಲೇ ಸದನದಲ್ಲಿ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದು, ಬಣಕಾರ್ ರಾಜೀನಾಮೆ ನೀಡಲಿ ಎಂದು ಕಿಡಿ ಕಾರಿದರು. ಅಷ್ಟರಲ್ಲಿ ಬಸವರಾಜ ಬೊಮ್ಮಾಯಿ ಸಚಿವರನ್ನು ಸಮಾಧಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ