ಕಲಾಪದಲ್ಲಿ 10 & 90 ಪರ್ಸೆಂಟೇಜ್ ಕೋಲಾಹಲ, BJP ಆಕ್ರೋಶ, ಸಿಎಂ ಗರಂ
Team Udayavani, Feb 23, 2018, 2:58 PM IST
ಬೆಂಗಳೂರು: ರಾಜ್ಯದಲ್ಲಿರುವುದು 10 ಪರ್ಸೆಂಟೇಜ್ ಸರಕಾರ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಿಧಾನಮಂಡಲದ ಕೊನೆಯ ದಿನವಾದ ಶುಕ್ರವಾರವೂ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ, ಕೋಲಾಹಲಕ್ಕೆ ಕಾರಣವಾಯಿತು.
ಕೊನೆಯ ದಿನದ ಕಲಾಪದಲ್ಲಿ ಪರ್ಸೆಂಟೇಜ್ ವಿಷಯ ಸಿಎಂ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕ ಜಗದೀಶ್ ಶೆಟ್ಟರ ನಡುವೆ ಜಟಾಪಟಿಗೆ ಸಾಕ್ಷಿಯಾಯಿತು. ಕೇಂದ್ರದ ಯೋಜನೆಯಲ್ಲಿ ಮೋದಿ ಸರ್ಕಾರದ ಕಮಿಷನ್ ಎಷ್ಟು ಎಂಬ ಸಿಎಂ ಹೇಳಿಕೆಗೆ ಶೆಟ್ಟರ್ ತಿರುಗೇಟು ನೀಡಿದರು.
ಪ್ರಧಾನಿ ಮೋದಿಯವರು 10 ಪರ್ಸೆಂಟೇಜ್ ಸರಕಾರ ಎಂಬ ಹೇಳಿಕೆ ನೀಡಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಹುಳ ಬಿಟ್ಟಂತಾಗಿದೆ. ಬಿಜೆಪಿಯದ್ದು 90% ಸರಕಾರ ಎಂದು ಹೇಳಲು ನಿಮ್ಮ ಬಳಿ ಏನು ದಾಖಲೆ ಇದೆ ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿಯವರ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಅದಕ್ಕಾಗಿಯೇ ಅವರು ಹೋದಲ್ಲೆಲ್ಲಾ ಗೌರವ ಸಿಗುತ್ತಿದೆ. ಹೀಗಾಗಿ ನೀವು ಆಧಾರರಹಿತ ಆರೋಪ ಮಾಡುತ್ತಿದ್ದೀರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಕೆಎನ್ ರಾಜಣ್ಣನೀರವ್ ಮೋದಿ, ಕೊಠಾರಿ, ಮಲ್ಯ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗುತ್ತಾರೆ. , ರೈತರ ಸಾಲ ಮನ್ನಾ ಮಾಡೋದು ಬಿಟ್ಟು, ಬೇರೇಲ್ಲ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜಣ್ಣ ಹಾಗೂ ಸಿಎಂ ಆರೋಪದಿಂದ ಆಕ್ರೋಶಿತರಾದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಗೂಂಡಾ ಸರ್ಕಾರ, 10% ಸರ್ಕಾರಕ್ಕೆ ಧಿಕ್ಕಾರದ ಘೋಷಣೆ ಕೂಗಿದರು.
ಪರಸ್ಪರ ಕಾಲೆಳೆದ ಸಿಎಂ, ಶೆಟ್ಟರ್:
ಗದ್ದಲ, ಕೋಲಾಹಲದ ನಡುವೆಯೇ ಸಿಎಂ ಸಿದ್ದರಾಮಯ್ಯ, ಮೈಸೂರಿನಲ್ಲಿಯೇ ಈ ಬಾರಿ ಬಿಜೆಪಿ ಗೆಲ್ಲಲ್ಲ ಎಂದು ಸ್ವತಃ ನಾನೇ ಪ್ರಧಾನಿ ಬಳಿ ಹೇಳಿದ್ದೇನೆ, ಇದಕ್ಕೆ ಕೇಂದ್ರ ಸಚಿವ ಅನಂತ್ ಕುಮಾರ್ ಸಾಕ್ಷಿಯಾಗಿದ್ದಾರೆ. ಮತ್ತೆ ನಾವೇ ಆಡಳಿತ ಪಕ್ಷವಾಗಿ ನಾವೇ ಸದನಕ್ಕೆ ಬರ್ತೀವಿ. 5 ವರ್ಷ ಅಧಿಕಾರಾವಧಿ ಯಶಸ್ವಿಯಾಗಿ ಪೂರೈಸಿದ್ದೇವೆ.
ಅದಕ್ಕೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್, ಮೈಸೂರಲ್ಲಿ ನೀವೇ ಗೆಲ್ಲಲ್ಲ ಎಂದು ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ ಎಂದು ಕಾಲೆಳೆದರು.
ಗದ್ದಲದ ನಡುವೆಯೇ ವಿತ್ತ ವಿಧೇಯಕ ಅಂಗೀಕಾರ:
ಪ್ರತಿಪಕ್ಷಗಳ ಕೋಲಾಹಲದ ನಡುವೆಯೇ ಧನವಿನಿಯೋಗ ವಿಧೇಯಕ ಸೇರಿದಂತೆ ಹಲವು ವಿಧೇಯಕ ಅಂಗೀಕರಿಸಲಾಯಿತು. ಈ ಸಂದರ್ಭದಲ್ಲಿ ತೀವ್ರ ಆಕ್ರೊಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಪ್ರತಿಗಳನ್ನು ಹರಿದೆಸೆದು ಸದನದಿಂದ ಹೊರನಡೆದರು. ಬಳಿಕ ಸ್ಪೀಕರ್ ಕೆಬಿ ಕೋಳಿವಾಡ ಅವರು ಕಲಾಪವನ್ನು ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ