ಸಿದ್ದರಾಮಯ್ಯ ಮಾತಿಗೆ ಕಿಮ್ಮತ್ತಿಲ್ಲ! ರಾಹುಲ್ ಬಾಯ್ಬಿಡ್ತಾರಾ ?
Team Udayavani, Feb 24, 2018, 12:51 PM IST
ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಗೂಂಡಾಗಿರಿ ಕುರಿತು ಬಾಯಿ ಬಿಡುತ್ತಾರಾ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೋಭಾ ‘ಕಾಂಗ್ರೆಸ್ ದುರಹಂಕಾರ, ದರ್ಪದ ರಾಜಕಾರಣ ಮಾಡುತ್ತಿದೆ. ವಿದ್ವತ್ ಮೇಲೆ ಹಲ್ಲೆ ನಡೆಸಿದ ಗೂಂಡಾ ಮಹಮದ್ ಹ್ಯಾರಿಸ್ ನಲಪಾಡ್ನನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ ಬಳಿಕ 38 ಗಂಟೆಗಳು ಬೇಕಾಯಿತು. ಸಿಎಂ ಮಾತಿಗೆ ಬೆಲೆ ಇಲ್ಲವೆ? ಸಿಎಂ ಮಾತಿಗೆ ಅಧಿಕಾರಿಗಳು ಕಿಮ್ಮತ್ತು ನೀಡುತ್ತಿಲ್ಲವೆ’ ಎಂದು ಪ್ರಶ್ನಿಸಿದರು.
ಹಲ್ಲೆ ಆರೋಪಿ ಮಹಮದ್ ತಂದೆ ಹ್ಯಾರಿಸ್ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಏಕೆ ಪಡೆದಿಲ್ಲ ? ಕಳೆದ 10 ದಿನಗಳಲ್ಲಿ ಬೆಂಗಳೂರಿನ ಸುತ್ತಮುತ್ತ ಹಲವು ಗೂಂಡಾಗಿರಿ ಪ್ರಕರಣಗಳನ್ನು ಕಾಂಗ್ರೆಸ್ ಬೆಂಬಲಿತರು ಮಾಡಿದ್ದಾರೆ. ಈ ಬಗ್ಗೆ ರಾಹುಲ್ ಬಾಯ್ಬಿಡಬೇಕು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ