ಪ್ರತ್ಯೇಕ ನಾಡಧ್ವಜ ಕುರಿತು ಸಂಪುಟದಲ್ಲಿಂದು ತೀರ್ಮಾನ
Team Udayavani, Feb 27, 2018, 6:15 AM IST
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಎರಡು ಜತೆ ಸಮವಸ್ತ್ರ ನೀಡುವ ಬಗ್ಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜದ ವಿನ್ಯಾಸ ಸಿದಟಛಿಪಡಿಸಿ ಕಾನೂನಿನ ಸ್ವರೂಪ ನೀಡುವ ಕುರಿತು ಮಂಗಳವಾರ ನಡೆಯುವ ರಾಜ್ಯ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 2009-10 ರಿಂದ 2010-11, 2013-14 ರಿಂದ 2017-18 ರವರೆಗೆ ಅನುಮೋದನೆ ಯಾಗಿರುವ 173 ಕಾಮಗಾರಿಗಳಿಗೆ 433.20 ಕೋಟಿ ರೂ. ಹಣಕಾಸು ಒದಗಿಸುವ ವಿಷಯವೂ ಸಂಪುಟದ ಮುಂದೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
ಉಳಿದಂತೆ, ಮೈಸೂರಿನ ಪಿಕೆಟಿಬಿ ಆಸ್ಪತ್ರೆಯ ಆವರಣ ಹಾಗೂ ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಟ್ರಾಮಾಕೇರ್ ಕೇಂದ್ರಗಳ ಕಟ್ಟಡ ನಿರ್ಮಾಣ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮದಡಿ 23.10 ಕೋಟಿ ರೂ. ವೆಚ್ಚದ ಔಷಧ ಖರೀದಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿಗೆ 105.85 ಕೋಟಿ ರೂ. ಒದಗಿಸುವುದು.
ಅದಿರು ಗಣಿಗಾರಿಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳಿಂದ ಸಲ್ಲಿಸಿರುವ ಅರ್ಜಿ ಪರಿಗಣಿಸುವುದು, ಕರಾವಳಿ ಭಾಗದ ಸಿಆರ್ಜಡ್ ವ್ಯಾಪ್ತಿ ಹೊರತಾದ ಪ್ರದೇಶಗಳಲ್ಲಿ ಮರುಳು ಗಣಿಗಾರಿಕೆಗಾಗಿ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳಿಗೆ ತಿದ್ದುಪಡಿ ತರುವುದು, ಸಾಗರಮಾಲಾ ಯೋಜನೆಯಡಿ 65 ಕೋಟಿ ರೂ. ವೆಚ್ಚದಲ್ಲಿ ಹಳೇ ಮಂಗಳೂರು ಬಂದರಿನಲ್ಲಿ ಹಾಗೂ 61 ಕೋಟಿ ರೂ. ವೆಚ್ಚದಲ್ಲಿ ಕಾರವಾರ ಬಂದರಿನಲ್ಲಿ ಕೋಸ್ಟಲ್ ಬರ್ತ್ ನಿರ್ಮಾಣ, 29 ಕೋಟಿ ರೂ. ವೆಚ್ಚದಲ್ಲಿ ಹಳೇ ಮಂಗಳೂರು ಬಂದರು ಬೇಂಗ್ರೆ ಬದಿ ಹೂಳೆತ್ತುವ ಕಾಮಗಾರಿ, 215 ಕೋಟಿ ರೂ. ವೆಚ್ಚದಲ್ಲಿ ಕಾರವಾರ ಬಂದರಿನ ದಕ್ಷಿಣ ಹಾಗೂ ಉತ್ತರ ಭಾಗಕ್ಕೆ ಬ್ರೇಕ್ ವಾಟರ್ ನಿರ್ಮಿಸುವ ಪ್ರಸ್ತಾವನೆ, ಬೆಂಗಳೂರಿನಲ್ಲಿ ಒಂದು ಲಕ್ಷ ಬಹುಮಡಿ ವಸತಿ ಯೋಜನೆ ಅನುಷ್ಠಾನಗೊಳಿಸಲು 582.39 ಎಕರೆ ಸರ್ಕಾರಿ ಗೋಮಾಳ ಮತ್ತು ಖರಾಬು ಜಮೀನು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮಕ್ಕೆ ಮಂಜೂರು ಮಾಡುವುದು ಸಂಪುಟದಲ್ಲಿ ಚರ್ಚೆಗೆ ಬರಲಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ