ಹೈಕೋರ್ಟ್ನಲ್ಲಿ ನಲಪಾಡ್ ಜಾಮೀನು ಅರ್ಜಿ ಸಲ್ಲಿಕೆ
Team Udayavani, Mar 6, 2018, 9:15 AM IST
ಬೆಂಗಳೂರು: ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿರುವ ಮೊಹಮದ್ ನಲಪಾಡ್ ಜಾಮೀನು ಕೋರಿ ಹೈಕೋರ್ಟ್ ಮೊರೆಹೋಗಿದ್ದಾರೆ. ನಲಪಾಡ್ ಜಾಮೀನು ಅರ್ಜಿ ಮಾ.7ರಂದು ವಿಚಾರಣೆಗೆ ಬರಲಿದೆ. ವಿದ್ವತ್ ಮೇಲಿನ ಹಲ್ಲೆ ಆರೋಪ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ಅಲ್ಲದೆ ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ವಿದ್ವತ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿದ್ವತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಆಸ್ಪತ್ರೆಯಿಂದ ಡಿಸಾcರ್ಜ್ ಆಗಿದ್ದಾರೆ ಎಂಬ ಅಂಶಗಳನ್ನು ಸೇರಿದಂತೆ ಹಲವು ಕಾನೂನಾತ್ಮಕ ಅಂಶಗಳ ಆಧಾರದಲ್ಲಿ ಜಾಮೀನು ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ನಲಪಾಡ್ ಪರ ವಕೀಲರು ಸೋಮವಾರ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠಕ್ಕೆ ಮೆಮೊ ಸಲ್ಲಿಸಿದರು. ಆದರೆ, ನ್ಯಾಯಪೀಠ ರೋಸ್ಟರ್ ಆಧರಿಸಿ ಅರ್ಜಿ ವಿಚಾರಣೆ ನಡೆಯಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.