ಸಿಎಂ ತಲೆಯಲ್ಲಿ ಶುಗರ್ ಕೋಟೆಡ್ ಯೂರಿಯಾ ತುಂಬಿದೆ
Team Udayavani, Mar 9, 2018, 6:05 AM IST
ಬಾಗಲಕೋಟೆ: ನನ್ನ ತಲೆಯಲ್ಲಿ ಬುದ್ಧಿಯಿಲ್ಲ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ತಲೆಯಲ್ಲಿ ಮೆದುಳು ಬಿಟ್ಟರೆ ಉಳಿದಿದ್ದು ಶುಗರ್ ಕೊಟೇಡ್ ಯೂರಿಯಾ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಟೀಕಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ತಲೆ ಇದೆಯೋ ಇಲ್ವೋ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ. ಆದರೆ, ಸಿದ್ದರಾಮಯ್ಯ ತಲೆಯಲ್ಲಿ ಮೆದುಳು ಬಿಟ್ಟರೆ ಶುಗರ್ ಕೊಟೇಡ್ ಯೂರಿಯಾ ಗೊಬ್ಬರ ತುಂಬಿಕೊಂಡಿದೆ. ಅದಕ್ಕೆ ಅವರು ಮಾತನಾಡುವ ಮಾತುಗಳೇ ಸಾಕ್ಷಿ ಎಂದರು.
ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಟೀಕಿಸುತ್ತಾರೆ. ಆದರೆ, ಹೊಸಪೇಟೆ ಶಾಸಕ ಆನಂದ ಸಿಂಗ್, ಕೂಡ್ಲಗಿ ಶಾಸಕ ನಾಗೇಂದ್ರ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡಿದ್ದಾರೆ. ಅವರೇನು ಸ್ವರ್ಗಕ್ಕೆ ಹೋಗಿ ಬಂದವರಾ? ಅಶೋಕ ಖೇಣಿ ಒಬ್ಬ ಮಹಾನ್ ಭ್ರಷ್ಟ. ಅಂತವರನ್ನು ಪಕ್ಷಕ್ಕೆ ಕರೆದುಕೊಂಡಿದ್ದಾರೆ. ಭ್ರಷ್ಟರನ್ನು ಪಕ್ಷಕ್ಕೆ ಬರ ಮಾಡಿಕೊಂಡರೆ ಇವರೂ ಭ್ರಷ್ಟರೇ ಅಲ್ವಾ? ಎಂದು ವ್ಯಂಗ್ಯವಾಡಿದರು.
ಕೂಡಲಸಂಗಮದಲ್ಲಿ ಮಾ.10ರಂದು ನಡೆಯಬೇಕಿದ್ದ ಬಿಜೆಪಿ ಒಬಿಸಿ ಸಮಾವೇಶವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಅಮಿತ್ ಶಾ ಅವರಿಗೆ ಸಮಯಾವಕಾಶದ ಅಭಾವ ಇರುವುದರಿಂದ ಸಮಾವೇಶ ಮುಂದೂಡಲಾಗಿದೆ. ಮಾ.25ರಂದು ಕಾಗಿನೆಲೆಯಲ್ಲಿ ಒಬಿಸಿ ಸಮಾವೇಶ ನಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ