ನೀರಿನ ವಿಚಾರದಲ್ಲಿ ಎಲ್ಲರೂ ಒಂದಾಗಬೇಕಿದೆ 


Team Udayavani, Mar 11, 2018, 6:00 AM IST

17.jpg

ಬೆಂಗಳೂರು: ಕಾವೇರಿ ಹಾಗೂ ಮಹದಾಯಿ ನೀರಿನ ವಿಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಅಭಿಪ್ರಾಯಪಟ್ಟರು. ಪ್ರಸ್‌ಕ್ಲಬ್‌ನಲ್ಲಿ ಶನಿವಾರ “ಉದಯವಾಣಿ’ಯ ಉಪಮುಖ್ಯ ವರದಿಗಾರ ಎಸ್‌.ಲಕ್ಷ್ಮೀ ನಾರಾಯಣ ಅವರ “ಕರ್ನಾಟಕ ರಾಜಕೀಯ ಪ್ರಯೋಗಶಾಲೆ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾವೇರಿ ವಿಚಾರ ಬಂದಾಗ ತಮಿಳುನಾಡಿನ ಎಲ್ಲ ಪಕ್ಷಗಳು ಒಂದಾಗುತ್ತವೆ. ಅದೇ ರೀತಿ ರಾಜ್ಯದಲ್ಲಿಯೂ ಕಾವೇರಿ ಹಾಗೂ ಮಹದಾಯಿ ವಿಚಾರದಲ್ಲಿ ಎಲ್ಲ ಪಕ್ಷಗಳು ಒಂದಾಗಿ ಹೋರಾಡಬೇಕಿದೆ ಎಂದು ಕರೆ ನೀಡಿದರು.

ಸುಪ್ರೀಂಕೋರ್ಟ್‌ ಇತ್ತೀಚೆಗೆ ನೀಡಿರುವ ಆದೇಶ ದಿಂದಾಗಿ ಮುಂದಿನ 15 ವರ್ಷಗಳ ಕಾಲ ರಾಜ್ಯದ ಜನತೆ ನೋವು ಅನುಭವಿಸುವಂತಾಗಿದೆ. ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೋರ್ಟ್‌ ಹೇಳಿದ್ದು, ಇದರಿಂದ ರಾಜ್ಯಕ್ಕೆ ದೊಡ್ಡ ಹೊಡೆತ ಬೀಳಲಿದೆ. ಪರಿಣಾಮ ರಾಜ್ಯದಲ್ಲಿನ ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳು ನಮ್ಮದಾಗಿ ಉಳಿಯವು. ಹೀಗಾಗಿ, ಎಲ್ಲ
ರಾಜಕೀಯ ಪಕ್ಷಗಳು ಒಂದಾಗಿ ಹೋರಾಡಬೇಕಿದೆ ಎಂದರು. ಕಾವೇರಿ ನ್ಯಾಯಾಧಿಕರಣದ ತೀರ್ಪನ್ನು ಪ್ರಶ್ನಿಸಿ 2007ರಲ್ಲಿ ಮೇಲ್ಮನವಿ ಅರ್ಜಿ ಹಾಕಿದ್ದರಿಂದ ರಾಜ್ಯಕ್ಕೆ ಸದ್ಯ 14.7 ಟಿಎಂಸಿ ಹೆಚ್ಚುವರಿ ನೀರು ಲಭ್ಯವಾಗಿದೆ. ಕಾವೇರಿ ವಿಚಾರದಲ್ಲಿ ರಾಜ್ಯ ಹಲವು ಬಾರಿ ಎಡವಿದ್ದು, ಅದನ್ನು ಸುಪ್ರೀಂಕೋರ್ಟ್‌ ತನ್ನ ಆದೇಶದಲ್ಲಿ ಉಲ್ಲೇಖೀಸಿದೆ. ಆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ತೀರ್ಪಿನಿಂದ ರಾಜ್ಯಕ್ಕೆ ಎದುರಾಗುವ ಸಂಕಷ್ಟಗಳನ್ನು ನಿವಾರಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರನ್ನು ಕೋರಲಾಗಿದೆ ಎಂದು ಹೇಳಿದರು.

“ರಾಜ್ಯದಲ್ಲಿರುವ ಎರಡು ರಾಷ್ಟ್ರೀಯ ಪಕ್ಷಗಳ ಹೊರತಾಗಿಯೂ ಕಾವೇರಿ ವಿಚಾರದಲ್ಲಿ ದನಿ ಎತ್ತುವುದು ಪ್ರಾದೇಶಿಕ ಪಕ್ಷದ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ನನಗೆ 85 ವರ್ಷವಾದರೂ ಕಾವೇರಿ ವಿಚಾರದಲ್ಲಿ ಹೋರಾಟದ ಹಾದಿ ತುಳಿದಿರುವುದರಲ್ಲಿ ಯಾವುದೇ
ಸ್ವಾರ್ಥವಿಲ್ಲ. ರಾಜ್ಯದ ಸಮಸ್ಯೆಗಳ ಕುರಿತು ಸಂಸತ್‌ನಲ್ಲಿ ಚರ್ಚಿಸೋಣ ಎಂದರೆ, ಕೇವಲ 3 ನಿಮಿಷ ಅವಕಾಶ ನೀಡುತ್ತಾರೆ. ಜತೆಗೆ ಸಭೆಯಲ್ಲಿ ನಾನು ಮಾತನಾಡುವುದು ಮಾಧ್ಯಮಗಳಲ್ಲಿ ಬರದಂತೆ ನೋಡಿಕೊಳ್ಳುತ್ತಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ಹಿತಾಸಕ್ತಿಯ ವಿಷಯದಲ್ಲಿ ಕೆಲವೊಮ್ಮೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ ವಾಗಿದೆ. ಪ್ರಾದೇಶಿಕ ಪಕ್ಷಗಳು ಬಲವಾಗಿರುವ ಕಾರಣದಿಂದ ಕೇಂದ್ರದಲ್ಲಿ ಯಾವುದೇ ಸರ್ಕಾರಗಳು ಬಂದರೂ ಅವು ತಮಿಳುನಾಡಿನ ಪಕ್ಷಗಳ ಬಾಗಿಲ
ಮುಂದೆ ಹೋಗಿ ನಿಲ್ಲುತ್ತವೆ. ಹೀಗಾಗಿ, ಕಾವೇರಿ ವಿಚಾರದಲ್ಲಿ ದೊಡ್ಡ ಪಕ್ಷ, ಸಣ್ಣ ಪಕ್ಷ ಎಂಬ ಸಂಕುಚಿತ ಮನೋಭಾವನೆ ಬಿಟ್ಟು ಹೋರಾಡಬೇಕಿದೆ ಎಂದು ಕರೆ ನೀಡಿದರು.

ಲಕ್ಷ್ಮಿನಾರಾಯಣ ಅವರು ಉತ್ತಮ ಅಂಕಣಕಾರ ರಾಗಿದ್ದು, “ಕರ್ನಾಟಕ ರಾಜಕೀಯ ಪ್ರಯೋಗ ಶಾಲೆ’ ಕೃತಿಯಲ್ಲಿ ಪ್ರಾದೇಶಿಕ ಪಕ್ಷಗಳ ಮಹತ್ವ, ಅವು ಎದುರಿಸುತ್ತಿರುವ ಸವಾಲು ಸೇರಿ ಹಲವಾರು ವಾಸ್ತವಾಂಶಗಳನ್ನು ಉಲ್ಲೇಖೀಸಿದ್ದಾರೆ. ಅವರಿಂದ
ಇನ್ನಷ್ಟು ಪುಸ್ತಕಗಳು ಹೊರಬರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಸಕ ಬಿ.ಎನ್‌.ವಿಜಯ ಕುಮಾರ್‌, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು, ಬೆಂಗಳೂರು ಪ್ರಸ್‌ಕ್ಲಬ್‌ ಅಧ್ಯಕ್ಷ ಸದಾಶಿವ ಶೆಣೈ, ಅನು ಪ್ರಕಾಶನದ ಬಿ.ಎನ್‌.ರಮೇಶ್‌ ಇದ್ದರು.

ದೇವರಾಜ ಅರಸು ಶ್ರೇಷ್ಠ ವ್ಯಕ್ತಿ ರಾಜ್ಯ ರಾಜಕಾರಣದಲ್ಲಿ ನಾನು ಕಂಡ ಶ್ರೇಷ್ಠ ವ್ಯಕ್ತಿ ಎಂದರೆ ಅದು ದಿ.ದೇವರಾಜ ಅರಸು. ನಾನು,
ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿದ್ದ ವೇಳೆ ಯಾವುದೇ ಪ್ರಶ್ನೆ ಕೇಳಿದರೂ, ಉತ್ತರ ನೀಡದೆ ಅವರು ಸದನದಿಂದ ಹೊರ ಹೋಗುತ್ತಿರಲಿಲ್ಲ. ಜತೆಗೆ, ಅವರ ತಪ್ಪು ನಿರ್ಣಯಗಳ ಕುರಿತು ಗಮನ ಸೆಳೆದಾಗ, ಪ್ರಾಮಾಣಿಕವಾಗಿ ತಪ್ಪು ಒಪ್ಪಿಕೊಂಡು
ಕ್ಷಮೆಯಾಚಿಸುವಂತಹ ದೊಡ್ಡಗುಣ ಹೊಂದಿದ್ದರು. ಅವರ ನಂತರ ಅಂತಹ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯನ್ನು ನಾನು ನೋಡಿಲ್ಲ. ಮುಂದೆ ನೋಡುವೆನೋ, ಇಲ್ಲವೋ ಗೊತ್ತಿಲ್ಲ ಎಂದು ದೇವೇಗೌಡರು ಸ್ಮರಿಸಿದರು.

ಕರ್ನಾಟಕದ ಪರಂಪರೆ ಹಾಗೂ ಇತಿಹಾಸ ರಾಷ್ಟ್ರ ರಾಜಕಾರಣದ ಮೇಲೆ ಪರಿಣಾಮ ಬೀರುವುದರೊಂದಿಗೆ, ಹಲವಾರು ಬದಲಾವಣೆಗಳಿಗೂ ಕಾರಣವಾಗಿದೆ. ಪ್ರಜಾಪ್ರಭುತ್ವದ ನಿಜವಾದ  ಗುರಿಯನ್ನು ತಲುಪಲು ಇನ್ನಷ್ಟು ಪ್ರಯತ್ನಗಳು ನಡೆಯಬೇಕಿದೆ.
ರಾಜಕಾರಣದಲ್ಲಿಂದು ಎಲ್ಲ ವರ್ಗದ ಜನರಿದ್ದು, ಮೊದಲು ಇತಿಹಾಸ ಹಾಗೂ ಪರಂಪರೆಯನ್ನು ತಿಳಿಯಬೇಕಿದೆ.

● ವಿ.ಆರ್‌.ಸುದರ್ಶನ್‌, ಮಾಜಿ ಸಭಾಪತಿ

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.