ಮಾರ್ಚ್‌ 16 ರಿಂದ ಚಿತ್ರ ಪ್ರದರ್ಶನ ಬಂದ್‌ 


Team Udayavani, Mar 11, 2018, 7:30 AM IST

22.jpg

ಬೆಂಗಳೂರು: ಯುಎಫ್ಓ ಮತ್ತು ಕ್ಯೂಬ್‌ನೊಂದಿಗೆ ಮಾತುಕತೆ ಮುರಿದು ಬಿದ್ದ ಹಿನ್ನೆಲೆಯಲ್ಲಿ ಮಾ.16 ರಿಂದ ಯಾವುದೇ ಚಿತ್ರ ಪ್ರದರ್ಶನ ಮಾಡದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀರ್ಮಾನಿಸಿದೆ.

ಕನ್ನಡ ಸೇರಿದಂತೆ ಯಾವುದೇ ಭಾಷೆಯ ಚಿತ್ರಗಳನ್ನೂ ಸಹ ಪ್ರದರ್ಶಿಸಬಾರದು ಎಂದು ಪ್ರದರ್ಶಕ ಹಾಗೂ ವಿತರಕರಿಗೆ ಮಂಡಳಿ ಮನವಿ ಮಾಡಿದೆ. ಈ ತೀರ್ಮಾನಕ್ಕೆ ತಮಿಳು ನಿರ್ಮಾಪಕರ ಸಂಘ ಕೂಡ ಬದ್ಧವಾಗಿದ್ದು, ಹೋರಾಟಕ್ಕೆ ಕೈ ಜೋಡಿಸಿದೆ. ಸಮಸ್ಯೆ ಬಗೆಹರಿಯುವವರೆಗೂ ಯಾವ ಸಿನಿಮಾ ಪ್ರದರ್ಶನವನ್ನೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ಶನಿವಾರ ತಮಿಳುನಾಡು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ವಿಶಾಲ್‌ ಹಾಗೂ ಉಪಾಧ್ಯಕ್ಷ ಪ್ರಕಾಶ್‌ ರಾಜ್‌ ಜೊತೆ ಪತ್ರಿಕಾಗೋಷ್ಠಿ  ಯಲ್ಲಿ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, “ಇನ್ನು ಮುಂದೆ ಭೂಮಿ ನಮ್ಮದೆ ಫ‌ಸಲೂ ನಮ್ಮದೆ ಮತ್ತು ರೈತರು ನಮ್ಮವರೇ. ಯುಎಫ್ಓ ಮತ್ತು ಕ್ಯೂಬ್‌ ಸಂಸ್ಥೆಯವರು ನಮ್ಮ ಮನವಿಗೆ ಸ್ಪಂದಿಸಿಲ್ಲ. ಅವರಿಗೆ ಅಷ್ಟೊಂದು ಹಣ ಸಂದಾಯವಾಗುತ್ತೆ ಎಂದು ಯೋಚಿಸಿಯೂ ಇರಲಿಲ್ಲ. ಈಗ ನಾವು ದೊಡ್ಡ ಪಾಠ ಕಲಿತಿದ್ದೇವೆ. 

ಯುಎಫ್ಓ, ಕ್ಯೂಬ್‌ ಸಂಸ್ಥೆ ಪ್ರತಿ ವರ್ಷ ಸುಮಾರು 500 ಕೋಟಿ ರೂ. ಲಾಭ ಮಾಡುತ್ತಿದೆ. ನಾವು ಕೇಳಿದ್ದು ಶೇ.25 ರಷ್ಟು ಕಡಿಮೆ ಮಾಡಿಕೊಳ್ಳಿ ಎಂದು. ಆದರೆ, ನಮ್ಮ ಮನವಿಗೆ ಕಿವಿಗೊಟ್ಟಿಲ್ಲ. ಆ ಸಂಸ್ಥೆಯಿಂದ ಎಷ್ಟೋ ಚಿತ್ರಮಂದಿರಗಳು ಬಾಗಿಲು ಹಾಕಿ, ಕೆಲವು ಕಲ್ಯಾಣ ಮಂಟಪ, ಗೋದಾಮುಗಳಾಗಿ ಪರಿವರ್ತನೆಯಾಗಿವೆ. ನಾವು ಅವರ ಜೊತೆ ಕಳೆದ ಮೂರು ತಿಂಗಳಿನಿಂದಲೂ ಮಾತುಕತೆ ನಡೆಸುತ್ತಿದ್ದೇವೆ. ಆದರೆ, ಬಗೆಹರಿಯಲಿಲ್ಲ. ಹೀಗಾಗಿ ನಾವೊಂದು ತೀರ್ಮಾನ ಮಾಡಿಕೊಂಡಿದ್ದು, ಮುಂಬರುವ ದಿನಗಳಲ್ಲಿ ನಾವೇ ಸ್ವಂತದ್ದಾಗಿ ಪ್ರೊಜೆಕ್ಟರ್‌ ಮತ್ತು ಸರ್ವರ್‌ ಜೋಡಿಸಿ ನಿರ್ಮಾಪಕರ ಸಹಾಯಕ್ಕೆ ನಿಲ್ಲುವ ಬಗ್ಗೆ ಚಿಂತನೆ ನಡೆಸಿದ್ದೇವೆ’ ಎಂದು ಸಾ.ರಾ.ಗೋವಿಂದು ಹೇಳಿದರು.

ನಿರ್ಮಾಪಕರಿಗೆ ತೊಂದರೆ: ಯುಎಫ್ಓ ಮತ್ತು ಕ್ಯೂಬ್‌ನ ವರ್ತನೆಯಿಂದ ನಿರ್ಮಾಪಕರಿಗೆ ತೊಂದರೆ ಆಗಿದೆ. ನಾವು ನಮ್ಮ ನಿಲುವಿನಿಂದ ಹಿಂದಕ್ಕೆ ಸರಿಯದೆ, ಅನಿರ್ದಿಷ್ಟಾವಧಿ ಯಾವುದೇ ಚಿತ್ರ ಬಿಡುಗಡೆ ಮಾಡಬಾರದು ಎಂಬ ತೀರ್ಮಾನ 
ತೆಗೆದುಕೊಂಡಿದ್ದೇವೆ.  ಕೇವಲ ಕನ್ನಡ ಚಿತ್ರ ಮಾತ್ರವಲ್ಲ, ಎಲ್ಲಾ ಭಾಷೆಯ ಚಿತ್ರಗಳೂ ಕೂಡ ಇದೇ ತೀರ್ಮಾನಕ್ಕೆ ಬದ್ಧವಾಗಿವೆ. ಈ ತೀರ್ಮಾನದಿಂದ ನಿರ್ಮಾಪಕರಿಗೆ ಕಷ್ಟ ಆಗುತ್ತೆ. ಆದರೆ, ಎಲ್ಲರೂ ಸಹಿಸಿಕೊಳ್ಳಬೇಕು. ಇದು ಚಿತ್ರರಂಗದ ಒಳಿತಿಗಾಗಿ ಅಷ್ಟೆ ಎಂದರು. 

ಪರ್ಯಾಯ ವ್ಯವಸ್ಥೆಗೆ ಯೋಚನೆ: ಈ ಸಮಸ್ಯೆಯಿಂದ ಹೊರ ಬರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘ ಒಂದು ತೀರ್ಮಾನ ಮಾಡಿಕೊಂಡಿದೆ. ಜಂಟಿಯಾಗಿ ಪ್ರೊಜೆಕ್ಟರ್‌ ಹಾಗು ಸರ್ವರ್‌ ಹಾಕಿಕೊಂಡು ನಾವೇ
ನಿರ್ಮಾಪಕರ ಸಹಾಯಕ್ಕೆ ನಿಲ್ಲುತ್ತೇವೆ. ಇದಕ್ಕೆ ಈಗಾಗಲೇ ರಾಕ್‌ಲೈನ್‌ ವೆಂಕಟೇಶ್‌ ಒಂದು ಹೊಸ ಪ್ಲಾನ್‌ ಕೂಡ ಮಾಡಿದ್ದಾರೆ. ನಾವೇ ಹೂಡಿಕೆ ಮಾಡಲು ತೀರ್ಮಾನಿಸಿರುವ ಒಂದು ಪ್ರೊಜೆಕ್ಟರ್‌ಗೆ ಸುಮಾರು 8 ಲಕ್ಷ ರೂ.ನಷ್ಟು ವೆಚ್ಚ ತಗುಲಲಿದೆ. ರಾಜ್ಯಾದ್ಯಂತ
ಸುಮಾರು 100 ಚಿತ್ರಮಂದಿರಗಳಿಗೆ ಈ ವ್ಯವಸ್ಥೆ ಮಾಡುತ್ತೇವೆ. ಇದಕ್ಕೆ ಸುಮಾರು 8 ಕೋಟಿ ಬೇಕಾಗುತ್ತದೆ ಎಂದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೆಗೆದುಕೊಂಡಿರುವ ಈ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ತಮಿಳುನಾಡು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ವಿಶಾಲ್‌ ಹಾಗೂ ಉಪಾಧ್ಯಕ್ಷ ಪ್ರಕಾಶ್‌ ರಾಜ್‌ ಕೂಡ ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಕ್‌ಲೈನ್‌ ವೆಂಕಟೇಶ್‌, ಮುನಿರತ್ನ ಸೇರಿದಂತೆ ಮಂಡಳಿ ಪದಾಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.