ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಮಾರಾಮಾರಿ


Team Udayavani, Mar 12, 2018, 6:30 AM IST

Ban120318.jpg

ಬೆಳಗಾವಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಒಳಬೇಗುದಿ ಭುಗಿಲೆದ್ದಿದೆ. ಶನಿವಾರ ಕಲಬುರಗಿಯಲ್ಲಿ ಕಾರ್ಯಕರ್ತರ ಮಾರಾಮಾರಿ ನಡೆದ ಬೆನ್ನಲ್ಲೇ ಭಾನುವಾರ ನಗರದಲ್ಲಿ ನಡೆದ ಬಿಜೆಪಿ ಬೂತ್‌ಮಟ್ಟದ ಸಭೆಯಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಪಿ.ಡಿ. ಧೋತ್ರೆ ಹಾಗೂ ಮುಖಂಡ ಸುನೀಲ ಚೌಗಲೆ ಮೇಲೆ ಮಾಜಿ ಶಾಸಕ ಹಾಗೂ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ.

ಅನಗೋಳದ ಭಾಗ್ಯನಗರ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ನವಶಕ್ತಿ ಸಮಾವೇಶದಲ್ಲಿ ಬಿಜೆಪಿ ಮುಖಂಡರೇ ಒಬ್ಬರಿಗೊಬ್ಬರೂ ಹೊಡೆದಾಡಿಕೊಂಡು ಬೀದಿಗೆ ಬಂದಿದ್ದು,  ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬೂತ್‌ಮಟ್ಟದ ಸಭೆಯಲ್ಲಿ ಮಾಜಿ ಶಾಸಕ ಅಭಯ ಪಾಟೀಲ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಸಭೆ ನಡೆಯುತ್ತಿದ್ದಂತೆ ಬಿಜೆಪಿ ಮುಖಂಡ ಹಾಗೂ ಟಿಕೆಟ್‌ ಆಕಾಂಕ್ಷಿ ಪಿ.ಡಿ. ಧೋತ್ರೆ ಸಭೆಗೆ ಬಂದಿದ್ದಾರೆ. ಆಗ ಸಭೆಗೆ ಏಕೆ ಬಂದಿದ್ದೀಯಾ ಎಂದು ಮಾಜಿ ಶಾಸಕರ ಬೆಂಬಲಿಗರು ಪ್ರಶ್ನಿಸಿದ್ದಾರೆ. ಆಗ ಧೋತ್ರೆ ಅವರು ಸಮಾವೇಶಕ್ಕೆ ಬರುವಂತೆ ಸಂದೇಶ ಬಂದಿದೆ. ಹೀಗಾಗಿ  ಬಂದಿರುವುದಾಗಿ ತಿಳಿಸುತ್ತಿದ್ದಂತೆ ಮಾಜಿ ಶಾಸಕ ಅಭಯ ಪಾಟೀಲ್‌ ಹಾಗೂ ಧೋತ್ರೆ ನಡುವೆ ಮಾತಿನ ಚಕಮಕಿ ನಡೆದಿದೆ. ಮಧ್ಯೆ ಪ್ರವೇಶಿಸಿದ ಅಭಯ ಪಾಟೀಲ್‌ ಬೆಂಬಲಿಗರು ಹಾಗೂ ಧೋತ್ರೆ ನಡುವೆ ಗುದ್ದಾಟ ಆರಂಭವಾಗುತ್ತಿದ್ದಂತೆ ಪರಸ್ಪರ  ಹೊಡೆದಾಡಿಕೊಂಡಿದ್ದಾರೆ. ಆಗ ಧೋತ್ರೆ ಅವರಿಗೆ  ಹಿಗ್ಗಾಮುಗ್ಗಾ ಥಳಿಸಲಾಗಿದೆ. ಸುನೀಲ ಚೌಗಲೆ  ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಸಮಾವೇಶದಲ್ಲಿ ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸಹ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ಸೇರಿ ಪಕ್ಷದ ಪದಾಧಿಕಾರಿಗಳು ಇದ್ದರು. ಇವರ ಸಮ್ಮುಖದಲ್ಲೇ ಗಲಾಟೆ ನಡೆದಿದ್ದು ತೀವ್ರ ಇರಸುಮುರಸು ಉಂಟು ಮಾಡಿದೆ. ಗಾಯಗೊಂಡ ಪಿ.ಡಿ. ಧೋತ್ರೆ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ನಂತರ  ಬಿಜೆಪಿ ಪದಾಧಿಕಾರಿಗಳು, ಮುಖಂಡರು ಆಗಮಿಸಿ ಆರೋಗ್ಯ ವಿಚಾರಿಸಿದರು. ಆವರಣದ ಸುತ್ತ ಕಾರ್ಯಕರ್ತರು ಜಮಾಯಿಸಿದ್ದರು. ಕೆಲಕಾಲ ಈ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸುದ್ದಿ ಹರಡುತ್ತಿದ್ದಂತೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಹಾಗೂ ನೇಕಾರರ ನಾಯಕ ಎಂ.ಡಿ. ಲಕ್ಷ್ಮೀನಾರಾಯಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಧೋತ್ರೆ ಅವರ ಆರೋಗ್ಯ ವಿಚಾರಿಸಿದರು.

ಯಾರ ಮೇಲೂ ನಾವು ಹಲ್ಲೆ ನಡೆಸಿಲ್ಲ. ಸುಳ್ಳು ಆರೋಪ ಹೊರಿಸಿ ಎಂಇಎಸ್‌ನವರಿಗೆ ಬೆಂಬಲ ನೀಡುವ ಕುತಂತ್ರ ಇದಾಗಿದೆ. ರಾಜಕೀಯವಾಗಿ ನಮ್ಮನ್ನು ತುಳಿಯುವ ಪ್ರಯತ್ನ ಇದಾಗಿದೆ. ಎಂಇಎಸ್‌ ಬೆಂಬಲಿಗರ ಹೊಸ ನಾಟಕ ಇದಾಗಿದೆ. ಹಲ್ಲೆ ಮಾಡುವಂಥ ಪ್ರವೃತ್ತಿಗೆ ನಾವು ಇಳಿಯುವುದಿಲ್ಲ.
– ಅಭಯ ಪಾಟೀಲ, ಮಾಜಿ ಶಾಸಕ

ನೇಕಾರರ ಮುಖಂಡ ಧೋತ್ರೆ ಅವರ ಮೇಲೆ ಹಲ್ಲೆ ನಡೆಸಿರುವ ಮಾಜಿ ಶಾಸಕರ ಗೂಂಡಾವರ್ತನೆಯನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಗೃಹ ಸಚಿವರು ಹಾಗೂ ಐಜಿಪಿ ಗಮನಕ್ಕೆ ತಂದು ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಲಾಗುವುದು. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
– ಎಂ.ಡಿ. ಲಕ್ಷ್ಮೀನಾರಾಯಣ, ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.