300 ಕೋಟಿ ರೂ. “ಮಹಾದೋಖಾ’ ಬೆಳಕಿಗೆ


Team Udayavani, Mar 12, 2018, 6:00 AM IST

compay-FRraud.jpg

ಬೆಂಗಳೂರು: ಹಣ ದ್ವಿಗುಣಗೊಳಿಸುವ ವಿಮೆ ಹಾಗೂ ಷೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಹೆಸರಿನಲ್ಲಿ ಖ್ಯಾತನಾಮರಿಗೆ ಕೋಟಿ ಕೋಟಿ ರೂ. ವಂಚನೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಖ್ಯಾತ ಮಾಜಿ ಕ್ರಿಕೆಟಿಗ, ಹಾಲಿ ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಇನ್ನೂ ಕೆಲ ಕ್ರೀಡಾಪಟುಗಳು, ಉದ್ಯಮಿಗಳು, ಗಣ್ಯವ್ಯಕ್ತಿಗಳಿಂದ ಹಣ ಕಟ್ಟಿಸಿಕೊಂಡು 300 ಕೋಟಿ. ರೂಗಳಿಗೂ ಅಧಿಕ ಹಣ ಲಪಟಾಯಿಸಿರುವ ವಿಕ್ರಂ ಇನ್‌ವೆಸ್ಟ್‌ಮೆಂಟ್‌ ಕಂಪೆನಿಯ ವಂಚನೆ ಇದೀಗ ಜಗಜ್ಜಾಹೀರಾಗಿದೆ.

ಬಾಲಾಜಿ ಅಗರಬತ್ತಿ ಕಂಪೆನಿಗೆ 11.74 ಕೋಟಿ ವಂಚನೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಬನಶಂಕರಿ ಠಾಣೆ ಪೊಲೀಸರಿಗೆ, ವಿಕ್ರಂ ಇನ್‌ವೆಸ್ಟ್‌ಮೆಂಟ್‌ ಕಂಪೆನಿಯ ಒಂದೊಂದೇ ವಂಚನೆಗಳು ಪತ್ತೆಯಾಗಿವೆ. ಪ್ರಾಥಮಿಕ ತನಿಖೆಯಲ್ಲಿ  ಸುಮಾರು 400ಕ್ಕೂ ಅಧಿಕ ಮಂದಿಗೆ 300 ಕೋಟಿಗೂ ಹೆಚ್ಚಿನ ಮೊತ್ತದಷ್ಟು ಹಣ ವಂಚಿಸಿರುವುದು ಕಂಡು ಬಂದಿದೆ. ಅಲ್ಲದೆ, ಈಗಾಗಲೇ ಹಣ ಕಳೆದುಕೊಂಡ ಹಲವು ಮಂದಿ ಪೊಲೀಸ್‌ ಠಾಣೆ ಮೆಟ್ಟಿಲೇರುತ್ತಿದ್ದು, ಹೈಟೆಕ್‌ ಹಗರಣದ ಮೊತ್ತ ದುಪ್ಪಟ್ಟಾಗುವ ಸಾಧ್ಯತೆಯಿದೆ.

ಪ್ರಕರಣ ಸಂಬಂಧ ಈಗಾಗಲೇ ಕಂಪೆನಿಯ ಮಾಲೀಕ ರಾಘವೇಂದ್ರ, ಏಜೆಂಟರುಗಳಾದ ನರಸಿಂಹಮೂರ್ತಿ, ಪ್ರಹ್ಲಾದ, ನಾಗರಾಜ್‌ ಕೆ.ಎಸ್‌. ಸೂತ್ರಂ ರಮೇಶ್‌ ಎಂಬುವವರನ್ನು ಬಂಧಿಸಲಾಗಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಮಾರ್ಚ್‌ 17ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದು, ವಿಚಾರಣೆ ಮುಂದುವರಿದಿದೆ.

ದ್ರಾವಿಡ್‌ ಹೂಡಿಕೆ ಇತ್ತು
2008ರಲ್ಲಿ ಕಂಪೆನಿ ಸ್ಥಾಪಿಸಿರುವ ಆರೋಪಿಗಳು ಖ್ಯಾತ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಅವರನ್ನು ಕೆಲ ವರ್ಷಗಳ ಹಿಂದೆ ಸಂಪರ್ಕಿಸಿದ್ದ  ಆರೋಪಿಗಳು, ಪಾಲಿಸಿ ಕಟ್ಟುವಂತೆ ದುಂಬಾಲು ಬಿದ್ದಿದ್ದರು. ಈಗಾಗಲೇ ದ್ರಾವಿಡ್‌ ಹೆಸರಿನಲ್ಲಿ 1 ಕೋಟಿ.ರೂ.ಗೂ ಅಧಿಕ ಹಣ ಕಂಪೆನಿಗೆ ಪಾವತಿಯಾಗಿದೆ. ಆದರೆ, ಅವರಿಗೆ ಹಣ ವಾಪಾಸ್‌ ನೀಡಿಲ್ಲ. ಇನ್ನುಳಿದಂತೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ  ಅವರಿಂದಲೂ ಪ್ರೀಮಿಯಂ ಕಟ್ಟಿಸಿಕೊಂಡಿದ್ದು, ಪ್ರೀಮಿಯಂ ಪಾವತಿಸಿದ್ದಾರೆ. ಆದರೆ, ವಂಚನೆ ಸುಳಿವು ಕಂಡು ಬಂದಿದ್ದರಿಂದ ಹಣ ವಾಪಾಸ್‌ ಪಡೆದುಕೊಂಡು, ಪ್ರೀಮಿಯಂ ಕ್ಯಾನ್ಸಲ್‌ ಮಾಡಿಸಿದ್ದಾರೆ ಎಂದು ಅಧಿಕಾರಿ ಖಚಿತಪಡಿಸಿದರು.

ಹಣ ಸ್ವಂತಕ್ಕೆ ಬಳಕೆ ಆರೋಪ
ಆರೋಪಿಗಳು ಗ್ರಾಹಕರಿಂದ ಹಣ ಕಟ್ಟಿಸಿಕೊಂಡಿದ್ದರೂ, ಕಳೆದ ಎರಡೂವರೆ ವರ್ಷದಿಂದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರಲಿಲ್ಲ. ಸ್ವಂತಕ್ಕೆ ಬಳಸಿಕೊಂಡಿರುವುದರಿಂದ ನಷ್ಟ ಅನುಭವಿಸಿದ್ದಾರೆ. ಉದ್ಯಮಿಗಳು, ಕ್ರೀಡಾಪಟುಗಳು ಹಲವು ಮಂದಿ ಗಣ್ಯರಿಗೆ  ವಂಚಿಸಿರುವ ಸಾಧ್ಯತೆ ಇದೆ. ಈಗಾಗಲೇ ಆರೋಪಿಗಳ ಕಂಪೆನಿಯ ಕಚೇರಿ, ಆವರ ನಿವಾಸಗಳಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಐವರೂ ಪ್ರತ್ಯೇಕ ಬ್ಯಾಂಕ್‌ ಖಾತೆಗಳನ್ನು ಹೊಂದಿದ್ದಾರೆ. ಕಂಪೆನಿ ಒಂದೇ ಅಕೌಂಟ್‌ ಹೊಂದಿದ್ದು, ಎಲ್ಲಾ ಖಾತೆಗಳಲ್ಲೂ ಹಣದ ವಹಿವಾಟು ನಡೆಸಿದ್ದಾರೆ. ಈಗಾಗಲೇ ಕಂಪೆನಿಯ ಬಾಗಿಲು ಮುಚ್ಚಿಸಲಾಗಿದ್ದು, ಎಲ್ಲರ ಬ್ಯಾಂಕ್‌ ಅಕೌಂಟ್‌ ಸೀಜ್‌ ಮಾಡಿಸಲಾಗಿದೆ. ಎರಡು ಕಾರು,  ಬಾಂಡ್‌ ಪತ್ರಗಳುಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ನಂಬಿಕೆ, ನಂತರ ದೋಖಾ!
ಕಂಪೆನಿಯ ಮಾಲೀಕ ರಾಘವೇಂದ್ರ, ಷೇರು ಮಾರುಕಟ್ಟೆ ಮಾದರಿಯಲ್ಲಿ ಚಿನ್ನಾಭರಣ, ಕಾಪರ್‌ ಹಾಗೂ ತಾಳೆ ಎಣ್ಣೆ  ಕಂಪೆನಿಯಲ್ಲಿ ಹೂಡಿಕೆ ಮಾಡಿದರೆ ಕೆಲವೇ ತಿಂಗಳಲ್ಲಿ ಹೆಚ್ಚಿನ ಲಾಭಾಂಶ ನೀಡುತ್ತೇವೆ ಎಂದು ಗ್ರಾಹಕರಿಗೆ ನಂಬಿಸಿದ್ದರು. ನಾಲ್ವರು ಆರೋಪಿಗಳಲ್ಲಿ ಕೆಲವರು ಎಲ್‌ಐಸಿ ಏಜೆಂಟರು ಹಾಗೂ ಮಾಜಿ ಪತ್ರಕರ್ತರಾಗಿದ್ದಾರೆ. ಹೀಗಾಗಿ ಬಹುತೇಕ ಹೈ ಪ್ರೊಫೈಲ್‌ ಗ್ರಾಹಕರನ್ನೇ ಟಾರ್ಗೆಟ್‌ ಮಾಡಿಕೊಂಡು ವಿವಿಧ ಸ್ಕೀಂಗಳ ಅನ್ವಯ ಲಕ್ಷ ರೂ.ಗಳಿಂದ ಆರಂಭವಾಗಿ ಕೋಟಿ ರೂ.ಗಳವರೆಗೆ ಹಣ ಕಟ್ಟಿಸಿಕೊಂಡಿದ್ದಾರೆ. ಆರಂಭದಲ್ಲಿ ನೀಡಿದ್ದ ಭರವಸೆಯಂತೆ ಗ್ರಾಹಕರಿಗೆ ಹೆಚ್ಚಿನ ಲಾಭಾಂಶ ನೀಡುತ್ತಿದ್ದರು.

ಈ ವಿಚಾರ ಗೊತ್ತಿದ್ದರಿಂದ ಬಾಲಾಜಿ ಅಗರಬತ್ತಿ ಕಂಪೆನಿ ಮಾಲೀಕರನ್ನು  2016ರಲ್ಲಿ ಹಣಕಟ್ಟುವಂತೆ ಪುಸಲಾಯಿಸಿದ್ದರು. ಆರೋಪಿಗಳ ಮಾತು ನಂಬಿದ್ದ ಬಾಲಾಜಿ ಕಂಪೆನಿಯ ಮಾಲೀಕ ಸಹೋದರರಿಬ್ಬರು ಒಟ್ಟು 11.74 ಕೋಟಿ ರೂ. ಹೂಡಿಕೆ ಮಾಡಿದ್ದರು. ಹಣ ಕಟ್ಟಿಸಿಕೊಂಡ ಬಳಿಕ ಕಂಪೆನಿ ಯಾವುದೇ ರೀತಿಯ ಲಾಭಾಂಶದ ಬಗ್ಗೆ ಮಾಹಿತಿ ನೀಡುತ್ತಿರಲಿಲ್ಲ. ಹೀಗಾಗಿ ಹಣ ವಾಪಾಸ್‌ ನೀಡುವಂತೆ ಕೇಳಿದರೂ ಇನ್ನಿಲ್ಲದ ಸಬೂಬು ಹೇಳಿ ಕಳುಹಿಸಿದ್ದರು. ಇದರಿಂದ ಬೇಸತ್ತು ಕಡೆಗೂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು  ಬಂಧಿಸಿ ವಿಚಾರಣೆಗೊಳಪಡಿಸಿದಾಗ ಇಡೀ ಹಗರಣ ಬೆಳಕಿಗೆ ಬಂದಿದೆ ಎಂದು ಹಿರಿಯ  ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಈ ಪ್ರಕರಣದಲ್ಲಿ ಆರೋಪಿಗಳು ಗ್ರಾಹಕರಿಗೆ ನೂರಾರು ಕೋಟಿ ವಂಚಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ದೊರೆಯಲಿದೆ. ಪ್ರಕರಣದ ಕೂಲಂಕಶ ತನಿಖೆಗಾಗಿ ಆರೋಪಿಗಳ ವಿಚಾರಣೆ  ಮುಂದುವರಿಸಲಾಗಿದೆ.
– ಡಾ.ಎಸ್‌.ಡಿ.ಶರಣಪ್ಪ, ದಕ್ಷಿಣ ವಿಭಾಗದ ಡಿಸಿಪಿ

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.