ಅಧಿಕಾರಿಗಳು ಮೇಲಿಂದ ಬಂದವರೇನು: ರಾಯರಡ್ಡಿ
Team Udayavani, Mar 18, 2018, 6:35 AM IST
ಕೊಪ್ಪಳ: ಐಪಿಎಸ್ ಅಧಿಕಾರಿಗಳೇನು ಸರ್ಕಾರಕ್ಕಿಂತ ದೊಡ್ಡವರಾ? ಅವರೇನು ಮೇಲಿಂದ ಬಂದವರಾ? ಮಾಧ್ಯಮಗಳೇ ಅವರನ್ನು ಹೀರೋ ಮಾಡುತ್ತಿವೆ..-ಹೀಗಂದವರು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾವುದೇ ಪೊಲೀಸ್ ಅಧಿಕಾರಿಯನ್ನು ತಿಂಗಳಲ್ಲ, 9 ದಿನಕ್ಕೇ ವರ್ಗ ಮಾಡಿದರೂ ಅವರು ವರ್ಗಾವಣೆಯಾದ ಸ್ಥಳಕ್ಕೆ ತೆರಳಬೇಕು. ಸರ್ಕಾರ ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಅವಶ್ಯವಿರುವ ಕಡೆ ಅವರನ್ನು ವರ್ಗಾವಣೆ ಮಾಡಿರುತ್ತದೆ. ಸರ್ಕಾರಕ್ಕಿಂತ ಅವರೇನು ದೊಡ್ಡವರಲ್ಲ. ವರ್ಗಾವಣೆ ಪ್ರಶ್ನಿಸಿ ಬೇಕಿದ್ದರೆ ಸಿಎಟಿ ಮೊರೆ ಹೋಗಲು ಕಾನೂನಿನಲ್ಲಿ ಅವಕಾಶವಿದೆ ಎಂದರು.
ರಾಜ್ಯದಲ್ಲಿ ಈ ಬಾರಿ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆಯಲ್ಲ. ಜಾತಿ ಕಾರ್ಡ್ ವಕೌìಟ್ ಆಗಲ್ಲ. ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆಯುತ್ತದೆ ಎಂದು ಎಲ್ಲರೂ ಸುಮ್ಮನೆ ಮಾತನಾಡುತ್ತಿದ್ದಾರೆ. ನನ್ನ ಕ್ಷೇತ್ರದಲ್ಲಂತೂ ಈ ಬಾರಿ ಜಾತಿ ಲೆಕ್ಕಾಚಾರ ನಡೆಯಲ್ಲ. ಯಾವ ವ್ಯಕ್ತಿಯೂ ಜಾತಿ ಹಾಗೂ ಹಣ ಕೇಳಲ್ಲ. ಸುಮ್ಮನೆ ನಮ್ಮಂತಹ ರಾಜಕಾರಣಿಗಳು ಜನರಿಗೆ ಹಣ, ಹೆಂಡ ಕೊಟ್ಟು ಅವರನ್ನು ನಾವೇ ಕೆಡಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ