ಬಡ್ತಿ ಮೀಸಲು: ಬೇಕಿನ್ನು ಆರು ತಿಂಗಳು?


Team Udayavani, Mar 18, 2018, 6:00 AM IST

Govt-KAr.jpg

ಬೆಂಗಳೂರು: ಬಡ್ತಿ ಮೀಸಲಾತಿ ಸಂಬಂಧಿಸಿದ ಅರ್ಜಿ ವಿಚಾರಣೆ ಮಾರ್ಚ್‌ 20ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಈ ಮಧ್ಯೆ ರಾಜ್ಯ ಸರ್ಕಾರ ನ್ಯಾಯಾಲಯದ ಆದೇಶ ಪಾಲಿಸಲು ಇನ್ನೂ ಆರು ತಿಂಗಳು ಕಾಲಾವಕಾಶ ಬೇಕೆಂದು ಕೋರಿ ಶನಿವಾರ ದಿಢೀರ್‌ ಮನವಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

ಮಾ.15 ರೊಳಗೆ ಎಲ್ಲ ಇಲಾಖೆಗಳ ಜೇಷ್ಠತಾ ಪಟ್ಟಿ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಈ ಹಿಂದಿನ ತೀರ್ಪಿನಲ್ಲಿ ತಿಳಿಸಲಾಗಿತ್ತು. ಮಾ. 20ರಂದು ಸರ್ಕಾರ ನ್ಯಾಯಾಲಯಕ್ಕೆ ಹಿಂಬಡ್ತಿ ಹಾಗೂ ಮುಂಬಡ್ತಿ ಪಟ್ಟಿ ಸಮೇತ ಸಲ್ಲಿಸಬೇಕಿತ್ತು. ಆದರೆ, ಇನ್ನೂ ಆರು ತಿಂಗಳು ಕಾಲಾವಕಾಶ ಕೋರಿ ಮನವಿ ಸಲ್ಲಿಸಿದ್ದು, ವಿಧಾನಸಭೆ ಚುನಾವಣೆವರೆಗೂ ಪ್ರಕರಣ ತಳ್ಳುವ ಲೆಕ್ಕಾಚಾರ ಎಂದೇ ಹೇಳಲಾಗುತ್ತಿದೆ. ಮಾ.20ರಂದು ನ್ಯಾಯಾಲಯ ಯಾವ ನಿರ್ದೇಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಆಕ್ರೋಶ: ಈ ಮಧ್ಯೆ, ರಾಜ್ಯ ಸರ್ಕಾರದ ಕ್ರಮದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ “ಅಹಿಂಸಾ’ ಸಂಘಟನೆ ಅಧ್ಯಕ್ಷ ಎಂ.ನಾಗರಾಜ್‌, ನ್ಯಾಯಾಲಯದ ಆದೇಶ ಉಲ್ಲಂ ಸಿದರೆ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಹೊಣೆಗಾರರಾಗಬೇಕಾಗುತ್ತದೆ. ನ್ಯಾಯಾಲಯವು ರಾಜ್ಯಪಾಲರ ಮೂಲಕ ತನ್ನ ಆದೇಶ ಪಾಲನೆಗೂ ಮುಂದಾಗಬಹುದು ಎಂದು ಹೇಳಿದ್ದಾರೆ.

“ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೆಲವು ಇಲಾಖೆಗಳಲ್ಲಿ ಇನ್ನೂ ಜೇಷ್ಠತಾ ಪಟ್ಟಿ ಸಿದ್ಧಪಡಿಸಿಲ್ಲ. ಇನ್ನೂ ಕೆಲವು ಇಲಾಖೆಗಳಲ್ಲಿ ಹಿಂಬಡ್ತಿಯಿಂದ ಖಾಲಿಯಾಗುವ ಹುದ್ದೆಗಳಿಗೆ ಮುಂಬಡ್ತಿ ಯಾರಿಗೆ ಕೊಡಬೇಕು ಎಂಬುದರ ಪಟ್ಟಿಯನ್ನೂ ಸಿದ್ಧಪಡಿಸಿಲ್ಲ. ಇದು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾರ್ಚ್‌ 15 ರೊಳಗೆ ಜೇಷ್ಠತಾ ಪಟ್ಟಿ ಸಿದ್ಧಪಡಿಸಿಕೊಡಿ ಎಂದರೂ ಕೇಳದೇ ನ್ಯಾಯಾಲಯಕ್ಕೆ ಸಡ್ಡು ಹೊಡೆಯುವ ಕೆಲಸ ಸರ್ಕಾರ ಮಾಡುತ್ತಿದೆ. ರಾಜ್ಯ ಸರ್ಕಾರ ನ್ಯಾಯಾಲಯದ ಆದೇಶ ಪಾಲಿಸದಿದ್ದರೆ, 12 ಲಕ್ಷ ನೌಕರರು ಹಾಗೂ ಅವರ ಕುಟುಂಬದವರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವಿರುದ್ಧವಾಗಿ ಮತ ಚಲಾಯಿಸಬೇಕೆಂದು ಸಂಘದ ಸಮಾವೇಶದಲ್ಲಿ ನಿರ್ಣಯವಾಗಿದೆ ಎಂದರು.

63 ಇಲಾಖೆ, 130 ನಿಗಮ ಮತ್ತು ಮಂಡಳಿಗಳಲ್ಲಿ ಜೇಷ್ಠತಾ ಪಟ್ಟಿ ಮಾಡಬೇಕಿದೆ. ಸರಿಯೋ ತಪ್ಪೋ ಬಹುತೇಕ ಇಲಾಖೆಗಳಲ್ಲಿ ಶೇ. 90ರಷ್ಟು ಮುಗಿದಿದೆ. ಆದರೆ, ಜಲಸಂಪನ್ಮೂಲ, ಲೋಕೋಪಯೋಗಿ ಇಲಾಖೆಯ ಪಟ್ಟಿ ಅಪೂರ್ಣವಾಗಿದೆ. ರಾಜ್ಯ ಸರ್ಕಾರ ಏನೇ ಮಾಡಿದರೂ ನಾವು ಮಾತ್ರ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.