ಮತಪತ್ರ ಗೊಂದಲ, ಕೈ, ಕಮಲಕ್ಕೆ ಜಯ


Team Udayavani, Mar 24, 2018, 6:00 AM IST

23BNP-(31).jpg

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಕೆಲವೊಂದು ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಯಿತು. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಸಚಿವ ಬಾಬೂರಾವ್‌ ಚಿಂಚನಸೂರ್‌ ಮತಗಳು ಅಸಿಂಧುಗೊಂಡ ಘಟನೆಗೂ ಸಾಕ್ಷಿಯಾಯಿತು. ಇದೇ ಮೊದಲು ಎಂಬಂತೆ ಜೆಡಿಎಸ್‌ ಚುನಾವಣೆ ಬಹಿಷ್ಕರಿಸಿದ ಪ್ರಸಂಗವೂ ನಡೆಯಿತು.

ಇದೆಲ್ಲದರ ನಡುವೆಯೇ ಕಾಂಗ್ರೆಸ್‌ನ ಎಲ್‌.ಹನುಮಂತಯ್ಯ, ನಾಸೀರ್‌ ಅಹಮದ್‌ ಹಾಗೂ ಜೆ.ಸಿ.ಚಂದ್ರಶೇಖರ್‌, ಬಿಜೆಪಿಯ ರಾಜೀವ್‌ ಚಂದ್ರಶೇಖರ್‌ ರಾಜ್ಯಸಭೆಗೆ ಆಯ್ಕೆಯಾದರು. ಜೆಡಿಎಸ್‌ ಅಭ್ಯರ್ಥಿ ಫ‌ರೂಕ್‌ ಸೋಲು ಅನುಭವಿಸಿದರು.

ಬಿಜೆಪಿಯ ರಾಜೀವ್‌ ಚಂದ್ರಶೇಖರ್‌ ಅತಿ ಹೆಚ್ಚು 50 ಮತ ಪಡೆದರು. ಬಿಜೆಪಿಗೆ ಇದ್ದ ಬೆಂಬಲ 48. ಇನ್ನೂ ಎರಡು ಮತ ಹೆಚ್ಚುವರಿಯಾಗಿ ಬಂದಿದ್ದು, ಇದು ಸಿ.ಪಿ. ಯೋಗೇಶ್ವರ್‌, ಎ.ಎಸ್‌.ಪಾಟೀಲ್‌ ನಡಹಳ್ಳಿ ಹಾಗೂ ಎಂಇಎಸ್‌ ಶಾಸಕ ಅರವಿಂದ ಪಾಟೀಲ್‌ ಮತ ಬಂದಿದೆ. ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳಿಗೆ 132 ಮತ ಬಂದಿದೆ.

ಕಾಂಗ್ರೆಸ್‌ಗೆ ಇದ್ದ ಬಲ 123. ಆ ಪೈಕಿ ಎರಡು ಅಸಿಂಧುಗೊಂಡಿವೆ. ಜೆಡಿಎಸ್‌ನ  ಏಳು ಬಂಡಾಯ ಶಾಸಕರು ಹಾಗೂ ಪಕ್ಷೇತರರು ಕಾಂಗ್ರೆಸ್‌ ಪರ ಮತ ಚಲಾಯಿಸಿದ್ದಾರೆ. 217 ಶಾಸಕರು ಮತದಾನ ಮಾಡಲು ಅರ್ಹತೆ ಹೊಂದಿದ್ದರೂ ಚುನಾವಣೆ ಬಹಿಷ್ಕರಿಸಿದ್ದರಿಂದ ಜೆಡಿಎಸ್‌ನ 28 ಸದಸ್ಯರು ಮತ ಚಲಾವಣೆ ಮಾಡಲಿಲ್ಲ. ಕಾಂಗ್ರೆಸ್‌ನ ರುದ್ರೇಶಗೌಡರು ಅನಾರೋಗ್ಯ ಕಾರಣ ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, 188 ಮತ ಚಲಾವಣೆಯಾಗಿ ಅದರಲ್ಲಿ ಎರಡು ಅಸಿಂಧು ಆಗಿವೆ. ಇನ್ನೆರಡು, ಮತ ಪತ್ರದಲ್ಲಿ ಸರಿಯಾಗಿ ಗುರುತು ಮಾಡದ ಕಾರಣ ತಡೆಹಿಡಿಯಲಾಗಿತ್ತು. ಈ ಎರಡೂ ಮತಗಳು ಪಕ್ಷೇತರರದ್ದು ಎಂದು ಹೇಳಲಾಗಿದೆ.

ಅಂತಿಮವಾಗಿ ಎಲ್‌.ಹನುಮಂತಯ್ಯ-44 ನಾಸೀರ್‌ ಅಹಮದ್‌-42  ಜೆ.ಸಿ.ಚಂದ್ರಶೇಖರ್‌-46  ರಾಜೀವ್‌ ಚಂದ್ರಶೇಖರ್‌ -50 ಮತ ಪಡೆದು ಜಯಶೀಲರಾದರು. ಬಿ.ಎಂ.ಫ‌ರೂಕ್‌ಗೆ 2 ಮತ ಲಭಿಸಿದವು.

ಇಂದು ರಾಜೀನಾಮೆ
ರಾಜ್ಯಸಭೆ ಚುನಾವಣೆ ಅಂತ್ಯಗೊಂಡಿದ್ದರಿಂದ ಏಳೂ ಜನ ಬಂಡಾಯ ಶಾಸಕರು ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾನುವಾರ ಮೈಸೂರಿನಲ್ಲಿ ನಡೆಯುವ ರಾಹುಲ್‌ ಗಾಂಧಿ ಜನಾಶೀರ್ವಾದ ಯಾತ್ರೆಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ. ಸಂಬಂಧ ಮತದಾನದ ಬಳಿಕ ಸಭೆ ಸೇರಿ ಚರ್ಚಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಆಧ್ಯಕ್ಷ ಡಾ.ಜಿ.ಪರಮೇಶ್ವರ್‌, ಸಚಿವ ಡಿ.ಕೆ.ಶಿವಕುಮಾರ್‌ ಜತೆಗೂ ಸಮಾಲೋಚನೆ ನಡೆಸಿದರು.

ನಿಯಮ ಬಾಹಿರವಾಗಿ ಚುನಾವಣೆ ನಡೆಸಿದ್ದು ಚುನಾವಣಾಧಿಕಾರಿ ಕಾಂಗ್ರೆಸ್‌ ಏಜೆಂಟರಂತೆ ವರ್ತಿಸಿದ್ದಾರೆ. ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್‌ ಪ್ರಜಾಪ್ರಭುತ್ವದ ಕಗ್ಗೊàಲೆ ಮಾಡಿದೆ. ಹೀಗಾಗಿ ನಾವು ಮತದಾನ ಬಹಿಷ್ಕರಿಸಿ ದೂರ ಉಳಿದಿದ್ದೆವು.
– ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ

ಜೆಡಿಎಸ್‌ನವರು ಹತಾಶರಾಗಿ ಅಕ್ರಮದ ಆರೋಪ ಮಾಡುತ್ತಿದ್ದಾರೆ. ಎರಡನೇಯ ಮತ ಪತ್ರ ಕೊಡಲು ನಿಯಮಗಳಲ್ಲಿ ಅವಕಾಶ ಇದೆ. ಜೆಡಿಎಸ್‌ ಬಹಿಷ್ಕಾರ ಮಾಡಿದ್ದ‌ರಿಂದ ತೊಂದರೆಯಿಲ್ಲ. ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಸಂತಸ ತಂದಿದೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ.

ನಮ್ಮ ಅಭ್ಯರ್ಥಿ ಗೆಲುವಿಗೆ ಎಲ್ಲ ಶಾಸಕರ ಬೆಂಬಲ ದೊರೆತಿದೆ. ರಾಜೀವ್‌ ಚಂದ್ರಶೇಖರ್‌ ಗೆಲುವಿಗೆ ಶ್ರಮಿಸಿದ ಶಾಸಕರಿಗೆ ಅಭಿನಂದನೆಗಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಂಕಾರದಿಂದ ಮೆರೆಯುತ್ತಿದ್ದಾರೆ. ಅವರು ಅಹಂಕಾರ ಬಿಡಲು ಯೋಚಿಸಲಿ.
– ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ.

ಸಂಖ್ಯಾಬಲ ಇಲ್ಲದಿದ್ದರೂ ರಾಜಕೀಯಕ್ಕೆ ಹೊಸಬರೂ ಅಮಾಯಕರೂ ಆಗಿರುವ ಫ‌ರೂಕ್‌ ಅವರನ್ನು ಕಣಕ್ಕಿಳಿಸಿ ಅವಮಾನ ಮಾಡಲಾಗಿದೆ. ಹಿಂದೆ ಜೆಡಿಎಸ್‌ಗೆ ಸಂಖ್ಯಾಬಲ ಇದ್ದಾಗ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ ಬದಲಿಗೆ ರಾಮಸ್ವಾಮಿ, ವಿಜಯಮಲ್ಯ, ಕುಪೇಂದ್ರರೆಡ್ಡಿ ಅವರನ್ನು ಆಯ್ಕೆ ಮಾಡಲಾಯಿತು. ಇದು ಜೆಡಿಎಸ್‌ಗೆ ಅಲ್ಪಸಂಖ್ಯಾತರ ಬಗ್ಗೆ ಇರುವ ಕಾಳಜಿಗೆ ಸಾಕ್ಷಿ.
– ಜಮೀರ್‌ ಅಹಮದ್‌, ಬಂಡಾಯ ಶಾಸಕ

ಕಾಗೋಡು ತಿಮ್ಮಪ್ಪ ಹಾಗೂ ಚಿಂಚನಸೂರ್‌ ಮತದಾನಕ್ಕೂ ಮೊದಲೇ ತಪ್ಪು ಸರಿಪಡಿಸಿರುವುದರಿಂದ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ. ಸೋಲಿನ ಹತಾಸೆಯಿಂದ ಜೆಡಿಎಸ್‌ನವರು ಆರೋಪ ಮಾಡಿದ್ದಾರೆ.
– ಡಾ.ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.