ಮತಪತ್ರ ಗೊಂದಲ, ಕೈ, ಕಮಲಕ್ಕೆ ಜಯ


Team Udayavani, Mar 24, 2018, 6:00 AM IST

23BNP-(31).jpg

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಕೆಲವೊಂದು ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಯಿತು. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಸಚಿವ ಬಾಬೂರಾವ್‌ ಚಿಂಚನಸೂರ್‌ ಮತಗಳು ಅಸಿಂಧುಗೊಂಡ ಘಟನೆಗೂ ಸಾಕ್ಷಿಯಾಯಿತು. ಇದೇ ಮೊದಲು ಎಂಬಂತೆ ಜೆಡಿಎಸ್‌ ಚುನಾವಣೆ ಬಹಿಷ್ಕರಿಸಿದ ಪ್ರಸಂಗವೂ ನಡೆಯಿತು.

ಇದೆಲ್ಲದರ ನಡುವೆಯೇ ಕಾಂಗ್ರೆಸ್‌ನ ಎಲ್‌.ಹನುಮಂತಯ್ಯ, ನಾಸೀರ್‌ ಅಹಮದ್‌ ಹಾಗೂ ಜೆ.ಸಿ.ಚಂದ್ರಶೇಖರ್‌, ಬಿಜೆಪಿಯ ರಾಜೀವ್‌ ಚಂದ್ರಶೇಖರ್‌ ರಾಜ್ಯಸಭೆಗೆ ಆಯ್ಕೆಯಾದರು. ಜೆಡಿಎಸ್‌ ಅಭ್ಯರ್ಥಿ ಫ‌ರೂಕ್‌ ಸೋಲು ಅನುಭವಿಸಿದರು.

ಬಿಜೆಪಿಯ ರಾಜೀವ್‌ ಚಂದ್ರಶೇಖರ್‌ ಅತಿ ಹೆಚ್ಚು 50 ಮತ ಪಡೆದರು. ಬಿಜೆಪಿಗೆ ಇದ್ದ ಬೆಂಬಲ 48. ಇನ್ನೂ ಎರಡು ಮತ ಹೆಚ್ಚುವರಿಯಾಗಿ ಬಂದಿದ್ದು, ಇದು ಸಿ.ಪಿ. ಯೋಗೇಶ್ವರ್‌, ಎ.ಎಸ್‌.ಪಾಟೀಲ್‌ ನಡಹಳ್ಳಿ ಹಾಗೂ ಎಂಇಎಸ್‌ ಶಾಸಕ ಅರವಿಂದ ಪಾಟೀಲ್‌ ಮತ ಬಂದಿದೆ. ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳಿಗೆ 132 ಮತ ಬಂದಿದೆ.

ಕಾಂಗ್ರೆಸ್‌ಗೆ ಇದ್ದ ಬಲ 123. ಆ ಪೈಕಿ ಎರಡು ಅಸಿಂಧುಗೊಂಡಿವೆ. ಜೆಡಿಎಸ್‌ನ  ಏಳು ಬಂಡಾಯ ಶಾಸಕರು ಹಾಗೂ ಪಕ್ಷೇತರರು ಕಾಂಗ್ರೆಸ್‌ ಪರ ಮತ ಚಲಾಯಿಸಿದ್ದಾರೆ. 217 ಶಾಸಕರು ಮತದಾನ ಮಾಡಲು ಅರ್ಹತೆ ಹೊಂದಿದ್ದರೂ ಚುನಾವಣೆ ಬಹಿಷ್ಕರಿಸಿದ್ದರಿಂದ ಜೆಡಿಎಸ್‌ನ 28 ಸದಸ್ಯರು ಮತ ಚಲಾವಣೆ ಮಾಡಲಿಲ್ಲ. ಕಾಂಗ್ರೆಸ್‌ನ ರುದ್ರೇಶಗೌಡರು ಅನಾರೋಗ್ಯ ಕಾರಣ ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, 188 ಮತ ಚಲಾವಣೆಯಾಗಿ ಅದರಲ್ಲಿ ಎರಡು ಅಸಿಂಧು ಆಗಿವೆ. ಇನ್ನೆರಡು, ಮತ ಪತ್ರದಲ್ಲಿ ಸರಿಯಾಗಿ ಗುರುತು ಮಾಡದ ಕಾರಣ ತಡೆಹಿಡಿಯಲಾಗಿತ್ತು. ಈ ಎರಡೂ ಮತಗಳು ಪಕ್ಷೇತರರದ್ದು ಎಂದು ಹೇಳಲಾಗಿದೆ.

ಅಂತಿಮವಾಗಿ ಎಲ್‌.ಹನುಮಂತಯ್ಯ-44 ನಾಸೀರ್‌ ಅಹಮದ್‌-42  ಜೆ.ಸಿ.ಚಂದ್ರಶೇಖರ್‌-46  ರಾಜೀವ್‌ ಚಂದ್ರಶೇಖರ್‌ -50 ಮತ ಪಡೆದು ಜಯಶೀಲರಾದರು. ಬಿ.ಎಂ.ಫ‌ರೂಕ್‌ಗೆ 2 ಮತ ಲಭಿಸಿದವು.

ಇಂದು ರಾಜೀನಾಮೆ
ರಾಜ್ಯಸಭೆ ಚುನಾವಣೆ ಅಂತ್ಯಗೊಂಡಿದ್ದರಿಂದ ಏಳೂ ಜನ ಬಂಡಾಯ ಶಾಸಕರು ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾನುವಾರ ಮೈಸೂರಿನಲ್ಲಿ ನಡೆಯುವ ರಾಹುಲ್‌ ಗಾಂಧಿ ಜನಾಶೀರ್ವಾದ ಯಾತ್ರೆಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ. ಸಂಬಂಧ ಮತದಾನದ ಬಳಿಕ ಸಭೆ ಸೇರಿ ಚರ್ಚಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಆಧ್ಯಕ್ಷ ಡಾ.ಜಿ.ಪರಮೇಶ್ವರ್‌, ಸಚಿವ ಡಿ.ಕೆ.ಶಿವಕುಮಾರ್‌ ಜತೆಗೂ ಸಮಾಲೋಚನೆ ನಡೆಸಿದರು.

ನಿಯಮ ಬಾಹಿರವಾಗಿ ಚುನಾವಣೆ ನಡೆಸಿದ್ದು ಚುನಾವಣಾಧಿಕಾರಿ ಕಾಂಗ್ರೆಸ್‌ ಏಜೆಂಟರಂತೆ ವರ್ತಿಸಿದ್ದಾರೆ. ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್‌ ಪ್ರಜಾಪ್ರಭುತ್ವದ ಕಗ್ಗೊàಲೆ ಮಾಡಿದೆ. ಹೀಗಾಗಿ ನಾವು ಮತದಾನ ಬಹಿಷ್ಕರಿಸಿ ದೂರ ಉಳಿದಿದ್ದೆವು.
– ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ

ಜೆಡಿಎಸ್‌ನವರು ಹತಾಶರಾಗಿ ಅಕ್ರಮದ ಆರೋಪ ಮಾಡುತ್ತಿದ್ದಾರೆ. ಎರಡನೇಯ ಮತ ಪತ್ರ ಕೊಡಲು ನಿಯಮಗಳಲ್ಲಿ ಅವಕಾಶ ಇದೆ. ಜೆಡಿಎಸ್‌ ಬಹಿಷ್ಕಾರ ಮಾಡಿದ್ದ‌ರಿಂದ ತೊಂದರೆಯಿಲ್ಲ. ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಸಂತಸ ತಂದಿದೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ.

ನಮ್ಮ ಅಭ್ಯರ್ಥಿ ಗೆಲುವಿಗೆ ಎಲ್ಲ ಶಾಸಕರ ಬೆಂಬಲ ದೊರೆತಿದೆ. ರಾಜೀವ್‌ ಚಂದ್ರಶೇಖರ್‌ ಗೆಲುವಿಗೆ ಶ್ರಮಿಸಿದ ಶಾಸಕರಿಗೆ ಅಭಿನಂದನೆಗಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಂಕಾರದಿಂದ ಮೆರೆಯುತ್ತಿದ್ದಾರೆ. ಅವರು ಅಹಂಕಾರ ಬಿಡಲು ಯೋಚಿಸಲಿ.
– ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ.

ಸಂಖ್ಯಾಬಲ ಇಲ್ಲದಿದ್ದರೂ ರಾಜಕೀಯಕ್ಕೆ ಹೊಸಬರೂ ಅಮಾಯಕರೂ ಆಗಿರುವ ಫ‌ರೂಕ್‌ ಅವರನ್ನು ಕಣಕ್ಕಿಳಿಸಿ ಅವಮಾನ ಮಾಡಲಾಗಿದೆ. ಹಿಂದೆ ಜೆಡಿಎಸ್‌ಗೆ ಸಂಖ್ಯಾಬಲ ಇದ್ದಾಗ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ ಬದಲಿಗೆ ರಾಮಸ್ವಾಮಿ, ವಿಜಯಮಲ್ಯ, ಕುಪೇಂದ್ರರೆಡ್ಡಿ ಅವರನ್ನು ಆಯ್ಕೆ ಮಾಡಲಾಯಿತು. ಇದು ಜೆಡಿಎಸ್‌ಗೆ ಅಲ್ಪಸಂಖ್ಯಾತರ ಬಗ್ಗೆ ಇರುವ ಕಾಳಜಿಗೆ ಸಾಕ್ಷಿ.
– ಜಮೀರ್‌ ಅಹಮದ್‌, ಬಂಡಾಯ ಶಾಸಕ

ಕಾಗೋಡು ತಿಮ್ಮಪ್ಪ ಹಾಗೂ ಚಿಂಚನಸೂರ್‌ ಮತದಾನಕ್ಕೂ ಮೊದಲೇ ತಪ್ಪು ಸರಿಪಡಿಸಿರುವುದರಿಂದ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ. ಸೋಲಿನ ಹತಾಸೆಯಿಂದ ಜೆಡಿಎಸ್‌ನವರು ಆರೋಪ ಮಾಡಿದ್ದಾರೆ.
– ಡಾ.ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.