ತಿವಾರಿ ಸಾವಿನ ಪ್ರಕರಣ: ಮಡಿಕೇರಿಗೆ ತನಿಖಾ ತಂಡ
Team Udayavani, Mar 26, 2018, 6:15 AM IST
ಮಡಿಕೇರಿ: ರಾಜ್ಯ ಆಹಾರ ಇಲಾಖೆಯ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ನಿಗೂಢ ಸಾವಿನ ಬಗ್ಗೆ ವಿಚಾರಣೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ತಂಡ ತನಿಖೆಯ ಭಾಗವಾಗಿ ಮಡಿಕೇರಿಗೆ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದೆ.
ಜಿಲ್ಲಾಧಿಕಾರಿಯಾಗಿದ್ದಾಗ ಅವರೊಂದಿಗೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ, ಗನ್ ಮ್ಯಾನ್ ಹಾಗೂ ಜಿಲ್ಲಾಧಿಕಾರಿ ನಿವಾಸದ ಅಡುಗೆ ಸಿಬ್ಬಂದಿ ಮತ್ತು ಇನ್ನೂ ಕೆಲವರಿಂದ ಮಾಹಿತಿ ಪಡೆದಿದ್ದಾರೆಂದು ತಿಳಿದು ಬಂದಿದೆ. ಉತ್ತರ ಪ್ರದೇಶ ಮೂಲದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಬೀದರ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಆಹಾರ ಇಲಾಖೆ ಆಯುಕ್ತರಾಗಿ ವರ್ಗಾವಣೆ ಆಗಿದ್ದರು. ಅವರು 2013ರ ಆಗಸ್ಟ್ ನಿಂದ 2015ರ ಜೂನ್ವರೆಗೆ ಕೊಡಗು ಜಿಲ್ಲಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. 2017ರ ಮೇ 17ರಂದು ತರಬೇತಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶಕ್ಕೆ ತೆರಳಿದ್ದ ಅವರು ಲಕ್ನೋದಲ್ಲಿ ಸಾವಿಗೀಡಾಗಿದ್ದರು.
ಮರಣೋತ್ತರ ವರದಿಯಲ್ಲಿ ದೇಹದ ಮೇಲೆ ಗಾಯದ ಗುರುತು ಕಂಡು ಬಂದಿದ್ದರಿಂದ ಹಲವು ಅನುಮಾನಗಳು ಉಂಟಾಗಿದ್ದವು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ