ಹೆಂಗಿದಿಯಪ್ಪ ಬೋರೇಗೌಡ,ನಾನ್ಯಾರ ಮಗ ಗೊತ್ತಾ?


Team Udayavani, Apr 1, 2018, 6:00 AM IST

Ban01041801Medn-REVISED.jpg

ಮೈಸೂರು: ನಂಸ್ಕಾರ ಬೋರೇಗೌಡ್ರೆ… ಹೆಂಗಿದ್ದೀರಿ, ನಿನ್ನೆ-ಮೊನ್ನೆ ಏನಾರ ಮಳೆ ಆಯ್ತ, ಏನಮ್ಮ ತಾಯಿ ನಂಸ್ಕಾರ ಕಣಮ್ಮ.. ಹಸ್ತದ ಗುರುತಿಗೆ ಓಟ್‌ ಹಾಕು..ನಾನ್ಯಾರ ಮಗಾ ಗೊತ್ತಾ ಹಂಗಿದ್ರೆ ನನ್ನೆಸರೇಲ್ಲಾ ಮಗಾ..

ಇವು ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಇಲವಾಲ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಶನಿವಾರ ರೋಡ್‌ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಂದಿನ ಶೈಲಿಯಲ್ಲಿ ಗ್ರಾಮಸ್ಥರನ್ನು ಹೆಸರಿಡಿದು ಮಾತನಾಡಿಸಿ ಅವರ ಯೋಗಕ್ಷೇಮ ವಿಚಾರಿಸಿದ ಪರಿ.

ಗುರುವಾರ ರಮ್ಮನಹಳ್ಳಿ ಭಾಗದ ವಿವಿಧ ಗ್ರಾಮಗಳಲ್ಲಿ ರೋಡ್‌ ಶೋ ನಡೆಸಿದ್ದ ಸಿದ್ದರಾಮಯ್ಯ ಅಂದು ರಾತ್ರಿಯೇ ಬಂಡೀಪುರ ಸಮೀಪದ ಖಾಸಗಿ ರೆಸಾರ್ಟ್‌ಗೆ ತೆರಳಿ ಶುಕ್ರವಾರ ಇಡೀ ದಿನ ವಿಶ್ರಾಂತಿ ಪಡೆದಿದ್ದರು. ಶನಿವಾರ ಬೆಳಗ್ಗೆ ಮೈಸೂರಿನ ಟಿ.ಕೆ.ಲೇಔಟ್‌ ಬಡಾವಣೆಯ ಮನೆಯಿಂದ ಹೊರಟು ಮೈಸೂರಿನಲ್ಲಿ ಉಪಾಹಾರ ಸವಿದು ಮತಬೇಟೆಗೆ ಮುಂದಾದರು.

ಮೈದನಹಳ್ಳಿ, ಮೇಗಳಾಪುರ, ಮಲ್ಲೇಗೌಡನಕೊಪ್ಪಲು, ಉಂಡವಾಡಿ, ಚಿಕ್ಕನಹಳ್ಳಿ ಸೇರಿ 22 ಗ್ರಾಮಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು.

ಭವ್ಯ ಸ್ವಾಗತ: ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ನಾಯಕರ ದಂಡು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಮಹಿಳೆಯರು ಆರತಿ ಎತ್ತಿ ಬರಮಾಡಿಕೊಂಡರೆ, ಯುವಕರು ಪಟಾಕಿ ಸಿಡಿಸಿ, ಜೈಕಾರ ಕೂಗಿ ಸ್ವಾಗತಿಸಿದರು. 12ವರ್ಷಗಳ ನಂತರ ಈ ಗ್ರಾಮಗಳಿಗೆ ಭೇಟಿ ನೀಡಿದ್ದರೂ ಪ್ರತಿಯೊಂದು ಗ್ರಾಮದಲ್ಲೂ ಅಲ್ಲಿನ ಕೆಲ ಹಿರಿಯ ಮುಖಂಡರನ್ನು ಹೆಸರಿಡಿದು ಮಾತನಾಡಿಸುವ ಮೂಲಕ ಸಿದ್ದರಾಮಯ್ಯ ಅವರು ಆಪ್ತತೆ ಮೆರೆದದ್ದು, ಮುಖಂಡರ ಸಂತಸಕ್ಕೆ ಕಾರಣವಾಗಿತ್ತು. ಆನಂದೂರಿಗೆ ಆಗಮಿಸಿದ ಸಿದ್ದರಾಮಯ್ಯ, ಗ್ರಾಮ ಪ್ರವೇಶಿಸುವ ಮುನ್ನ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು. ಬಳಿಕ ತಮ್ಮ ಕಾರನ್ನೇರಿ ಗ್ರಾಮಸ್ಥರತ್ತ ಕೈ ಬೀಸುತ್ತಾ ಮುನ್ನಡೆದರೆ, ಹಿಂದಿನಿಂದ ಮತ್ತೂಂದು ವಾಹನದಲ್ಲಿ ಸ್ಥಳೀಯ ಮುಖಂಡರು, ಘೋಷಣೆ ಕೂಗುತ್ತಾ ಸಾಗಿದರು.

ಬೇಡಿಕೆಗೆ ಪುರಸ್ಕಾರ:
ಆನಂದೂರಿನಲ್ಲಿ ಹಾಕಲಾಗಿದ್ದ ಶಾಮಿಯಾನದಡಿ ಸ್ಥಳೀಯ ಮುಖಂಡರೊಂದಿಗೆ ಕುಳಿತು ಮಾತನಾಡುವಾಗ, ಈ ಮಧ್ಯೆ ಗ್ರಾಮಸ್ಥರೊಬ್ಬರು “ಸಾರ್‌ ರಾಮೇಗೌಡ್ರು ನಿಮ್‌ ಪರವಾಗಿ ಹೋರಾಟ ಮಾಡ್ತಾ ಬಂದವೆ, ಅವರಿಗೇನಾರ ಮಾಡಿಕೊಡಿ’ ಎಂದು ಬೇಡಿಕೆ ಇಟ್ಟರು.

ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ರಾಮೇಗೌಡಂಗೆ ಅದೃಷ್ಟ ಬರೋವಂಗೆ ಈ ಸಾರಿ ಏನಾರ ಮಾಡನಾ ಬುಡು’ ಅಂದರು, ಅಷ್ಟರಲ್ಲಿ ಅವರಿಗೆ ವಯಸ್ಸಾಗೋಗಿರ್ತದೆ, ಎಂದು ಹೇಳಿದಾಗ,  “ರಾಮಗೌಡಂಗೆ ಎಂಥಾ ವಯಸ್ಸಾದದು, ನನಗಿಂತ ಚಿಕ್ಕವನು ಮುಂದೆ ವಿಶೇಷ ಗಮನ ಕೊಡ್ತೀನಿ ಬುಡು’ ಅಂದರು.

ಮತಯಾಚನೆ: “ಈ ಕಾಮನಕೆರೆ ಹುಂಡಿ ನರೇಂದ್ರ ಅವನೆಲ್ಲಿ ಹೋದಾನು, ಈ ಝಡ್‌ಪಿ ಮೆಂಬರು ಅರುಣ್‌ ಕುಮಾರ ಇವರೆಲ್ಲ ನನ್ನ ಪರ ಓಡಾಡ್ತಾರೆ, 12ನೇ ತಾರೀಖು ಎಲ್ಲರೂ ಮತಗಟ್ಟೆಗೆ ಹೋಗಿ ಹಸ್ತದ ಗುರುತಿಗೆ ಮತಹಾಕಿ ನನ್ನನ್ನು ಗೆಲ್ಲಿಸಿಕೊಡಿ’ ಎಂದು ಮನವಿ ಮಾಡಿದರು.

ಉಪಕಾರ ಸ್ಮರಿಸಿದ ಸಿದ್ದು
ಆನಂದೂರಿನಲ್ಲಿ ಹಾಕಲಾಗಿದ್ದ ಶಾಮಿಯಾನದಡಿ ಸ್ಥಳೀಯ ಮುಖಂಡರೊಂದಿಗೆ ಕುಳಿತು ಗ್ರಾಮದ ಹಿರಿಯರಾದ ಬೋರೆಗೌಡರನ್ನು ಉದ್ದೇಶಿಸಿ, “ನಮಸ್ಕಾರ ಬೋರೇಗೌಡ್ರೆ, ಹಿಂದೆಲ್ಲಾ ನನ್ನ ನೋಡಿದ್ದೀರಿ, ಏನಾರ ಬದಲಾಗಿದ್ದೀನಾ, ಆನಂದೂರಿಗೆ ಅನೇಕ ಸಾರಿ ಬಂದಿದ್ದೇನೆ. ಈಗ್ಗೆ ಕೆಲ ವರ್ಷಗಳಿಂದ ಬರಲಾಗಿಲ್ಲ. ನಮ್ಮ ರಾಮೇಗೌಡ ಮೊದಲಿಂದು ನಮ್ಮ ಜತೆ ಹೋರಾಟ ಮಾಡ್ತಾ ಅವೆ, ಬಾಳ ಜನ ಹಳಬ್ರು ನಮ್‌ ಜತೆ ಇಲ್ಲಾ, ಆದ್ರೂ ಕೆಲವ್ರ ಗುರುತು ಸಿಗುತ್ತೆ, ಏನಾ ಮಗ ನಿಮ್ಮಪ್ಪಗಂಗಣ್ಣ ಎಲೆಕ್ಷನ್‌ ಬಂದ್ರೆ ಸಾಕು ಮೋಟಾರ್‌ ಬೈಕ್‌ ಹಾಕ್ಕೊಂಡು ಊರೂರು ಸುತ್ತೋನು, ಈ ಚಿಕ್ಕೇಗೌಡ ಅವರಲ್ಲ 1983ರ ನನ್ನ ಮೊದಲನೆ ಎಲೆಕ್ಷನ್‌ ತಕ್ಕಡಿ ಗುರುತಿಂದ ನಿಂತಿದ್ನಲ್ಲ ಆಗ, 1985ರ ಎಲೆಕ್ಷನ್‌ನಲ್ಲೂ ಸಹಾಯ ಮಾಡವೆÅ, ಉಪಕಾರ ಮಾಡಿರೋವ್ರನ್ನ ಸ್ಮರಿಸದೆ ಇರೋಕಾಗುತ್ತಾ’ ಎಂದರು.

ಸಿದ್ರಾಮಯ್ಯ ಎಂದ ಮಗು
ಚಿಕ್ಕನಹಳ್ಳಿಯಲ್ಲಿ ಅಜ್ಜಿಯ ಸೊಂಟದ ಮೇಲಿದ್ದ ಪುಟ್ಟ ಬಾಲಕನನ್ನು ಕೈಹಿಡಿದು ನಾನ್ಯಾರಾÉ ಎಂದು ಮುಖ್ಯಮಂತ್ರಿ ಕೇಳಿದರು. ಆ ಮಗು ಥಟ್ಟನೆ ಸಿದ್ರಾಮಯ್ಯ ಎಂದಾಗ ಖುಷಿಯಿಂದ ಕೆನ್ನೆ ಸವರಿ ಮುನ್ನಡೆದರು.

– ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.