ತಿದ್ದುಪಡಿ, ವಿಳಾಸ ಬದಲಾವಣೆಗೆ ಪ್ರತ್ಯೇಕ ಅರ್ಜಿ


Team Udayavani, Apr 2, 2018, 6:55 AM IST

Ban02041806Medn.jpg

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.14ರವರೆಗೆ ಅವಕಾಶ ಇರುವಂತೆ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು, ತಿದ್ದುಪಡಿ ಮಾಡಲು, ಹೆಸರು ಮತ್ತು ವಿಳಾಸ ಬದಲಾವಣೆಗೆ ಇನ್ನೂ 13 ದಿನ ಸಮಯವಿದೆ. ಆದರೆ, ಮತದಾರರು ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ,ಇದಕ್ಕಾಗಿ ಕೇವಲ ಫಾರಂ ಭರ್ತಿ ಮಾಡಿಕೊಟ್ಟು ನಮ್ಮ ಜವಾಬ್ದಾರಿ ಮಗಿಯಿತು ಎಂದು ತಿಳಿದು ಕೈಕಟ್ಟಿ ಕುಳಿತುಕೊಳ್ಳುವಂತಿಲ್ಲ. ತಿದ್ದುಪಡಿ, ವಿಳಾಸ ಬದಲಾವಣೆಗೆ ಅದರದೇ ಆದ ಪ್ರತ್ಯೇಕವಾದ ಅರ್ಜಿ ನಮೂನೆ ಭರ್ತಿ ಮಾಡಬೇಕು.

ಬೆಂಗಳೂರು: ಬರೀ ಅರ್ಜಿ ಸಲ್ಲಿಸುವುದರಿಂದ ಪರಿಹಾರ ಸಿಗುವುದಿಲ್ಲ. ತಿದ್ದುಪಡಿ, ವಿಳಾಸ ಬದಲಾವಣೆಗೆ ಅದರದೇ ಆದ ಪ್ರತ್ಯೇಕ ಅರ್ಜಿ ನಮೂನೆಗಳಿವೆ. ಆ ಅರ್ಜಿ ನಮೂನೆಗಳ ಸಲ್ಲಿಕೆಗೆ ಅದರದೇ ಆದ ಪ್ರಕ್ರಿಯೆ ಇರುತ್ತದೆ. ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಇಲ್ಲದಿದ್ದರೆ, ನಾವು ಅರ್ಜಿ ತುಂಬಿದ್ದೇವೆ ಎಂದು ಈಗ ಸುಮ್ಮನೆ ಕುಳಿತುಕೊಂಡರೆ, ಮತದಾನದ ದಿನ ಸಮಸ್ಯೆ ಎದುರಿಸುವುದು ಅಥವಾ ಮತದಾನದಿಂದ ವಂಚಿತರಾಗುವುದು ನೀವೆ. ಈ ಕೊನೆ ಘಳಿಗೆಯಲ್ಲಿ ಯಾವ ಅಧಿಕಾರಿಯೂ ನಿಮ್ಮ ನೆರವಿಗೆ ಬರಲು ಸಾಧ್ಯವಿಲ್ಲ.

ಮುಖ್ಯವಾಗಿ ವಿಳಾಸ ಬದಲಾವಣೆ ವೇಳೆ ಅರ್ಜಿ ನಮೂನೆ- 7ರ ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದೇ ಹೋದರೆ ವಿಳಾಸ ಬದಲಾವಣೆ ಆಗುವುದಿಲ್ಲ. ಮತದಾರನು ಬೇರೆ ಮತಕ್ಷೇತ್ರಕ್ಕೆ ಸ್ಥಳಾಂತರ ಅಥವಾ ವರ್ಗಾವಣೆ ಆಗಿದ್ದರೆ,  ಆಗ ನೀವು ಅರ್ಜಿ ನಮೂನೆ-7 ಬಳಸಬೇಕು. ಬಳಿಕ ತಾವು ಈ ಹಿಂದೆ ವಾಸವಾಗಿದ್ದ ಕ್ಷೇತ್ರದ ಸಂಬಂಧಪಟ್ಟ ಚುನಾವಣಾ ಕಚೇರಿ ಅಥವಾ ಚುನಾವಣಾಧಿಕಾರಿಗಳಿಂದ ಸ್ವೀಕೃತಿ ಪತ್ರ ಪಡೆದು ಅಗತ್ಯ ದಾಖಲೆಗಳೊಂದಿಗೆ ನೀವು ವರ್ಗಾವಣೆಗೊಂಡಿರುವ ಮತಕ್ಷೇತ್ರದ ಸಂಬಂಧಪಟ್ಟ ಚುನಾವಣಾ ಕಚೇರಿ ಅಥವಾ ಚುನಾವಣಾಧಿಕಾರಿಗಳಿಗೆ ಫಾರಂ ಸಂಖ್ಯೆ 9 ಭರ್ತಿ ಮಾಡಿಕೊಡಬೇಕು. ಆಗ ಹಳೆಯ ಕ್ಷೇತ್ರದ ಪಟ್ಟಿಯಲ್ಲಿ ನಿಮ್ಮ ಹೆಸರು ಮತ್ತು ವಿಳಾಸ ತೆಗೆದು ಹಾಕಿ, ಹೊಸ ಕ್ಷೇತ್ರದ ಮತದಾರ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಮರಣ ಹೊಂದಿದ್ದರೆ ಅಥವಾ ಹೆಸರು ಮತ್ತು ವಿಳಾಸ ತಪ್ಪು ನಮೂದು ಆಗಿದ್ದರೂ ಫಾರಂ 7 ಬಳಸಬೇಕು.

ನಿಮ್ಮ ಮನೆ ಬೇರೆ ಮತ ಕ್ಷೇತ್ರಕ್ಕೆ ಬದಲಾಯಿಸಿದರೆ, ಆಗ ಮತದಾರರ ಪಟ್ಟಿಯಲ್ಲಿ ನಿಮ್ಮ ವಿವರ ಆ ಪ್ರದೇಶಕ್ಕೆ ವರ್ಗಾಯಿಸಲು ಅರ್ಜಿ ನಮೂನೆ 9  ಬಳಸಬೇಕು. ಇದರ ಜೊತೆಗೆ ವಿಳಾಸ ಪುರಾವೆಗೆ ಅರ್ಜಿದಾರ ಬ್ಯಾಂಕ್‌, ಅಂಚೆ ಕಚೇರಿಯ ಪ್ರಸ್ತುತ ಪಾಸ್‌ ಬುಕ್‌, ಪಡಿತರ ಚೀಟಿ ಅಥವಾ ಡ್ರೈವಿಂಗ್‌ ಲೈಸೆನ್ಸ್‌, ಆದಾಯ ಪ್ರಮಾಣ ಪತ್ರ ಅಥವಾ ಅರ್ಜಿದಾರ ಅಥವಾ ಅವರ ಪೋಷಕರ ಹೆಸರಲ್ಲಿರುವ ಆ ವಿಳಾಸದ ಇತ್ತೀಚಿನ ನೀರು, ದೂರವಾಣಿ, ವಿದ್ಯುತ್ಛಕ್ತಿ, ಗ್ಯಾಸ್‌ ಸಂಪರ್ಕದ ಬಿಲ್‌ ಸಲ್ಲಿಸಬೇಕು. ಮತದಾರರ ಪಟ್ಟಿ ಅಥವಾ ಮತದಾರ ಗುರುತಿನ ಚೀಟಿಯಲ್ಲಿ ತಪ್ಪು ಆಗಿದ್ದರೆ, ಅದನ್ನು ಸರಿಪಡಿಸಲಿಕ್ಕೆ ಫಾರಂ 8 ಬಸಳಬೇಕು.ಒಂದೇ ಕ್ಷೇತ್ರದಲ್ಲಿ ಮನೆ ಬದಲಾಯಿಸಿದ್ದರೆ ಸಂಬಂಧಪಟ್ಟ ಮತಗಟ್ಟೆಯಲ್ಲಿ ಹೆಸರು ಸೇರಿಸಲು ಅರ್ಜಿ ಮಮೂನೆ 8ಎ ಸಲ್ಲಿಸಬೇಕು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.