ಮೈಸೂರು ರಾಜವಂಶಸ್ಥರಿಗೆ ಬಿಗ್‌ ರಿಲೀಫ್


Team Udayavani, Apr 6, 2018, 6:35 AM IST

180405kpn84.jpg

ಮೈಸೂರು: ಆದಾಯ, ಸಂಪತ್ತು ತೆರಿಗೆ ನಿರ್ಧಾರ ವಿಚಾರದಲ್ಲಿ ಉಂಟಾಗಿದ್ದ ಗೊಂದಲದಿಂದಾಗಿ ನಾಲ್ಕು ದಶಕ ನಡೆಸಿದ ಕಾನೂನು ಹೋರಾಟದಲ್ಲಿ ಮೈಸೂರು ರಾಜಮನೆತನಕ್ಕೆ ಜಯ ಸಿಕ್ಕಿದೆ. ಕೈತಪ್ಪಿದ್ದ ಕೋಟ್ಯಂತರ ರೂ. ಮೌಲ್ಯದ ಆಸ್ತಿ, ಹೆಚ್ಚುವರಿ ಪಾವತಿಸಿದ್ದ ತೆರಿಗೆ ಹಣವನ್ನೂ ಆದಾಯ ತೆರಿಗೆ ಇಲಾಖೆ ಹಿಂತಿರುಗಿಸಿದೆ.

ನಗರದಲ್ಲಿನ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌, ತಮ್ಮ ಪತಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕಾಲದಿಂದ ಸಂಪತ್ತು ಹಾಗೂ ಆದಾಯ ತೆರಿಗೆ ವಿಚಾರದಲ್ಲಿ ಕಾನೂನು ಹೋರಾಟ ಮಾಡಲಾಗಿತ್ತು. ಇದೀಗ ಗೊಂದಲಗಳು ಬಗೆಹರಿದಿವೆ ಎಂದು ಸ್ಪಷ್ಟಪಡಿಸಿದರು.

ರಾಜಮನೆತನಕ್ಕೆ ಸೇರಿದ ಮೈಸೂರಿನ ಆಸ್ತಿಗಳ ಮೌಲ್ಯಮಾಪನ ಸರಿಯಾಗಿಲ್ಲ, ಆದ್ದರಿಂದ 1975ರಿಂದಲೂ ಇಲಾಖೆ ಕೇಳಿದಷ್ಟು ತೆರಿಗೆ ಪಾವತಿಸುತ್ತಲೇ ಬಂದಿದ್ದೇವೆ. ಆದರೆ, ಆದಾಯ ತೆರಿಗೆ ತಮ್ಮ ಆಸ್ತಿಗಳ ಮೌಲ್ಯ ನಿರ್ಧರಿಸಿರುವುದು ಮತ್ತು ತೆರಿಗೆ ವಸೂಲು ಮಾಡುತ್ತಿರುವುದು ಸರಿಯಲ್ಲ ಎಂದು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಅವರ ನಿಧನದ ಬಳಿಕ ಆ ಕಾನೂನು ಹೋರಾಟ ಮುಂದುವರಿಸಿದ್ದು, 2015ರಲ್ಲಿ ತಮ್ಮ ಪರ ತೀರ್ಪುಬಂದಿತ್ತು ಎಂದು ಹೇಳಿದರು.

ಆದರೆ, ಮುಟ್ಟುಗೋಲು ಹಾಕಿಕೊಂಡಿದ್ದ ಯಾವ್ಯಾವ ಆಸ್ತಿ ಹಿಂತಿರುಗಿಸಬೇಕು, ಕಳೆದ 40 ವರ್ಷಗಳಿಂದ ಹೆಚ್ಚುವರಿಯಾಗಿ ಎಷ್ಟು ತೆರಿಗೆ ಪಾವತಿಸಲಾಗಿದೆ ಎಂಬುದನ್ನು ನಿರ್ಧರಿಸಲು ಆದಾಯ ತೆರಿಗೆ ಇಲಾಖೆ ಎರಡು ವರ್ಷ ತೆಗೆದುಕೊಂಡಿತ್ತು. ಇದೀಗ ಹೆಚ್ಚುವರಿಯಾಗಿ ಕಟ್ಟಿದ್ದ ಆದಾಯ ಮತ್ತು ಸಂಪತ್ತು ತೆರಿಗೆಗೆ 40 ವರ್ಷಗಳ ಬಡ್ಡಿ ಸಮೇತ ಹಿಂತಿರುಗಿಸಿದೆ ಎಂದು ತಿಳಿಸಿದರು.

ದಸರಾ ವಸ್ತು ಪ್ರದರ್ಶನ ಮೈದಾನದ ಕೆಲಭಾಗ, ಎದುರಿನ ಜಾಗ, ಕರುಬಾರಹಳ್ಳಿ, ಗರಿಕೆಮಾಳದ ಆಸ್ತಿಗಳು ತಮ್ಮದಾಗಲಿವೆ ಎಂದು ಹೇಳಿದರು.

40 ವರ್ಷಗಳಿಂದ ಹೆಚ್ಚುವರಿಯಾಗಿ ಪಾವತಿಸಿದ್ದ ಆದಾಯ ಮತ್ತು ಸಂಪತ್ತು ತೆರಿಗೆಯ ಬಾಬ್ತು ಎಷ್ಟು ಹಣ ಬಂದಿದೆ ಎಂದು ಹೇಳಲು ಬಯಸುವುದಿಲ್ಲ. ಆದರೆ, ಹಲವಾರು ಲಕ್ಷ ರೂ. ಅನ್ನಬಹುದು.
– ಪ್ರಮೋದಾದೇವಿ ಒಡೆಯರ್‌, ಮೈಸೂರು ರಾಜವಂಶಸ್ಥೆ

ಶಾ ಅರಮನೆ ನೋಡಲು ಬಂದಿದ್ರು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರದ್ದು ಸೌಹಾರ್ದದ ಭೇಟಿ. ತಮ್ಮೊಂದಿಗೆ ರಾಜಕೀಯ ವಿಷಯ ಚರ್ಚಿಸಿಲ್ಲ. ಅರಮನೆ ನೋಡಲು ಬಂದಿದ್ದರು ಎಂದು ಪ್ರಮೋದಾದೇವಿ ಒಡೆಯರ್‌ ಸ್ಪಷ್ಟಪಡಿಸಿದರು. ತನಗೆ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ಬರುವುದೂ ಇಲ್ಲ ಎಂದು ಹಿಂದಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಅಮಿತ್‌ ಶಾ ಚುನಾವಣೆ ವೇಳೆ ಅರಮನೆಗೆ ಭೇಟಿ ನೀಡಿದ್ದರಿಂದ ಈ ರೀತಿಯ ಸುದ್ದಿಗಳು ಹರಡಿದೆ ಅಷ್ಟೇ. ಯದುವೀರ್‌ಗೆ ಇಚ್ಛೆ ಇದ್ದರೆ ರಾಜಕೀಯಕ್ಕೆ ಹೋಗಬಹುದು. ಅದಕ್ಕೆ ನನ್ನ ಅನುಮತಿ ಬೇಕಿಲ್ಲ. ಆದರೆ, ಯದುವೀರ್‌ ಅವರೇ ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.