ಪ್ರಜ್ವಲ್ಗೆ ಟಿಕೆಟ್ ಕೊಡಲೇಬೇಕು:HDD ನಿವಾಸದ ಎದುರು ಪ್ರತಿಭಟನೆ
Team Udayavani, Apr 7, 2018, 12:25 PM IST
ಬೆಂಗಳೂರು: ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ರಾಜರಾಜೇಶ್ವರಿನಗರದ ಜೆಡಿಎಸ್ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡರ ನಿವಾಸದ ಎದುರು ಶನಿವಾರ ಪ್ರತಿಭಟನೆ ನಡೆಸಲಾಗಿದೆ.
ಪದ್ಮನಾಭನಗರ ನಿವಾಸದ ಎದುರು ನೂರಾರು ಮಂದಿ ಪ್ರಜ್ವಲ್ ಅಭಿಮಾನಿ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ.
ದೇವೇಗೌಡ ಅವರ ಕಾರಿಗೆ ಮುತ್ತಿಗೆ ಹಾಕಿ ಘೋಷಣೆಗಳನ್ನು ಕೂಗಿದ್ದಾರೆ. ಆದರೆ ದೇವೇಗೌಡ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.
ಪೊಲೀಸರು ಚುನಾವಣಾ ನೀತಿ ಸಂಹಿತೆಯ ಕುರಿತು ಪ್ರತಿಭಟನಾ ನಿರತರಿಗೆ ಎಚ್ಚರಿಕೆ ನೀಡಿದರು.
ಪೋಸ್ಟರ್ಗಳನ್ನುಹಿಡಿದಿದ್ದ ಜೆಡಿಎಸ್ ಕಾರ್ಯಕರ್ತರು ರಾಜರಾಜೇಶ್ವರಿ ಕ್ಷೇತ್ರದಲ್ಲಿ ಪ್ರಜ್ವಲ್ಗೆ ಟಿಕೆಟ್ ನೀಡಿದರೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಪ್ರಜ್ವಲ್ಗೆ ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ಹಲವು ದಿನಗಳಿಂದ ಜೆಡಿಎಸ್ನೊಳಗೆ ಹಗ್ಗಜಗ್ಗಾಟ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ