ಸಿಎಂ ಬೆಂಬಲಿಸಿ ಆಣೆ ಮಾಡಿದ ವೀರಶೈವ ಮಹಾಸಭಾ ಅಧ್ಯಕ್ಷ!
Team Udayavani, Apr 10, 2018, 2:39 PM IST
ಮೈಸೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕೇಂದ್ರ ಕ್ಕೆ ಶಿಫಾರಸು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವೀರಶೈವ ಮುಖಂಡರು ಆಕ್ರೋಶ ಹೊರ ಹಾಕುತ್ತಿರುವಾಗಲೇ ಮೈಸೂರು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹಿನಕಲ್ ಬಸವರಾಜ್ ಬಹಿರಂಗ ಬೆಂಬಲ ಸೂಚಿಸಿ ಆಣೆಯನ್ನೂ ಮಾಡಿದ್ದಾರೆ. ಈ ವಿಡಿಯೋ ಬಹಿರಂಗಗೊಂಡಿದ್ದು, ಇದರ ವಿರುದ್ಧ ಸಂಘಟದ ಪದಾಧಿಕಾರಿಗಳು ಸಭೆ ನಡೆಸಿ ತೀವ್ರ ವಿರೋಧವನ್ನೂ ತೋರಿದ್ದಾರೆ.
ಕಾಂಗ್ರೆಸ್ ಮುಖಂಡರೊಬ್ಬರ ನಿವಾಸದಲ್ಲಿ ನಡೆದಿದೆ ಎನ್ನಲಾದ ಸಭೆಯಲ್ಲಿ ಹಿನಕಲ್ ಬಸವರಾಜ್ ಅವರು ಸಿಎಂ ಎದುರು ನಿಂತು ವೀರಾವೇಶದಿಂದಮಾತನಾಡಿ ವೀರಶೈವರೆಲ್ಲಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಮ್ಮನ್ನೇ ಬೆಂಬಲಿಸುವುದಾಗಿ ಆಣೆಯನ್ನೂ ಮಾಡಿದ್ದಾರೆ.
ಹಿನಕಲ್ ಘೋಷಣೆ ಮಾಡುತ್ತಿರುವ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕೈಕಟ್ಟಿ ಮೌನವಾಗಿ ಕುಳಿತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಈ ಹಿಂದೆ ಹಿನಕಲ್ ಬಸವರಾಜ್ ಸಿಎಂ ಸಿದ್ದರಾಮಯ್ಯ ಧರ್ಮ ಒಡೆದಿದ್ದಾರೆ ಎಂದು ಕಿಡಿಯನ್ನೂ ಕಾರಿದ್ದರು.
ಈ ಬಗ್ಗೆ ಮಂಗಳವಾರ ಸಭೆ ಸೇರಿರುವ ವೀರಶೈವ ಮಹಾಸಭಾ ದ ಸದಸ್ಯರು ಹಿನಕಲ್ ಬಸವರಾಜ್ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹಿನಕಲ್ ಬಸವರಾಜ್ ಸೇರಿದಂತೆ ಮೂವರು ಪದಾಧಿಕಾರಿಗಳನ್ನು ಸಂಘಟನೆಯಿಂದ ವಜಾ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ