ಚುನಾವಣಾ ಆಯೋಗದ ವೈಖರಿಗೆ ಎಚ್ಡಿಕೆ ಗರಂ
Team Udayavani, Apr 12, 2018, 6:35 AM IST
ಕೊಪ್ಪಳ: “ಚುನಾವಣಾ ಆಯೋಗದ ಅಧಿಕಾರಿಗಳು ಸುಮ್ಮನೆ ಎಲ್ಲೆಂದರಲ್ಲಿ ವಾಹನ ಹಿಡಿದು ತಪಾಸಣೆ ಮಾಡಿ ಜಪ್ತಿ ಮಾಡುತ್ತಿದ್ದಾರೆ. ನಾವು ಚುನಾವಣೆ ಮಾಡಬೇಕೋ? ಬೇಡವೋ? ಇದು ಯಾವ ನೀತಿ ಸಂಹಿತೆ’ ಎನ್ನುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಯೋಗದ ಕಾರ್ಯ ವೈಖರಿಯನ್ನು ಟೀಕಿಸಿದರು.
ಯಲಬುರ್ಗಾದಲ್ಲಿ ಮಾತನಾಡಿ, ಆಯೋಗದ ಅಧಿಕಾರಿಗಳು ಸಮಾವೇಶ, ಪ್ರಚಾರ ನಡೆಸಲು ಅನುಮತಿ ನೀಡುತ್ತಿಲ್ಲ. ನಮ್ಮ ವಾಹನ ಚಾಲಕರಿಗೆ ವೇತನ ಕೊಟ್ಟಿದ್ದೇವೆ. ಆ ಹಣವನ್ನೂ ಜಪ್ತಿ ಮಾಡಿ, ಇದಕ್ಕೆ ದಾಖಲೆ ಕೊಡಿ ಎನ್ನುತ್ತಿದ್ದಾರೆ. ಕೂಡ್ಲಗಿಯಲ್ಲಿ ನಮ್ಮ ಪ್ರಚಾರಕ್ಕೂ ಅವಕಾಶ ಕೊಡುತ್ತಿಲ್ಲ. ಆಯೋಗದ ಅಧಿಕಾರಿಗಳ ಕಾರ್ಯ ವೈಖರಿ ಸರಿಯಿಲ್ಲ. ನಾನು ಫೋನ್ ಮಾಡಿ ಕೇಳಿದರೆ, ನಮಗೆ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಮಾತನ್ನಾಡುತ್ತಿದ್ದಾರೆ. ಅಧಿಕಾರಿಗಳಿಗೆ ನಾನೇಕೆ ಬೆದರಿಕೆ ಹಾಕಲಿ. ಅವರಿಗೆ ಮನವಿ ಮಾಡಿದ್ದೇನೆ ಎಂದರು.
ಅಧಿಕಾರಿಗಳು ಜನರ ರಕ್ತ ಹೀರಿ ಬದುಕುತ್ತಿದ್ದೀರಿ. ನೀವೇನು ಸಾಚಾನಾ? ಜಿಲ್ಲಾ ಮಂತ್ರಿ,ಶಾಸಕ ಹೇಳಿದಂತೆ ನಡೆದುಕೊಳ್ಳಬಾರದು. ಅಧಿಕಾರ ಶಾಶ್ವತವಲ್ಲ. ನೋಡೋಣ ಎಷ್ಟು ದಿನ ಅಂತ ಇದೇ ರೀತಿ ವರ್ತಿಸುತ್ತೀರಿ ಎಂದು ಗುಡುಗಿದರು. ಹಾಸನ ಡಿಸಿ ರೋಹಿಣಿ ಸಿಂಧೂರಿ ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರಿಗೆ ಕಾನೂನಿನ ರಕ್ಷಣೆಯಿದೆ. ಯಾವುದೇ ಪಕ್ಷದ ರಕ್ಷಣೆಯಿಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು