ಚುನಾವಣಾ ಆಯೋಗದ ವೈಖರಿಗೆ ಎಚ್ಡಿಕೆ ಗರಂ
Team Udayavani, Apr 12, 2018, 6:35 AM IST
ಕೊಪ್ಪಳ: “ಚುನಾವಣಾ ಆಯೋಗದ ಅಧಿಕಾರಿಗಳು ಸುಮ್ಮನೆ ಎಲ್ಲೆಂದರಲ್ಲಿ ವಾಹನ ಹಿಡಿದು ತಪಾಸಣೆ ಮಾಡಿ ಜಪ್ತಿ ಮಾಡುತ್ತಿದ್ದಾರೆ. ನಾವು ಚುನಾವಣೆ ಮಾಡಬೇಕೋ? ಬೇಡವೋ? ಇದು ಯಾವ ನೀತಿ ಸಂಹಿತೆ’ ಎನ್ನುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಯೋಗದ ಕಾರ್ಯ ವೈಖರಿಯನ್ನು ಟೀಕಿಸಿದರು.
ಯಲಬುರ್ಗಾದಲ್ಲಿ ಮಾತನಾಡಿ, ಆಯೋಗದ ಅಧಿಕಾರಿಗಳು ಸಮಾವೇಶ, ಪ್ರಚಾರ ನಡೆಸಲು ಅನುಮತಿ ನೀಡುತ್ತಿಲ್ಲ. ನಮ್ಮ ವಾಹನ ಚಾಲಕರಿಗೆ ವೇತನ ಕೊಟ್ಟಿದ್ದೇವೆ. ಆ ಹಣವನ್ನೂ ಜಪ್ತಿ ಮಾಡಿ, ಇದಕ್ಕೆ ದಾಖಲೆ ಕೊಡಿ ಎನ್ನುತ್ತಿದ್ದಾರೆ. ಕೂಡ್ಲಗಿಯಲ್ಲಿ ನಮ್ಮ ಪ್ರಚಾರಕ್ಕೂ ಅವಕಾಶ ಕೊಡುತ್ತಿಲ್ಲ. ಆಯೋಗದ ಅಧಿಕಾರಿಗಳ ಕಾರ್ಯ ವೈಖರಿ ಸರಿಯಿಲ್ಲ. ನಾನು ಫೋನ್ ಮಾಡಿ ಕೇಳಿದರೆ, ನಮಗೆ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಮಾತನ್ನಾಡುತ್ತಿದ್ದಾರೆ. ಅಧಿಕಾರಿಗಳಿಗೆ ನಾನೇಕೆ ಬೆದರಿಕೆ ಹಾಕಲಿ. ಅವರಿಗೆ ಮನವಿ ಮಾಡಿದ್ದೇನೆ ಎಂದರು.
ಅಧಿಕಾರಿಗಳು ಜನರ ರಕ್ತ ಹೀರಿ ಬದುಕುತ್ತಿದ್ದೀರಿ. ನೀವೇನು ಸಾಚಾನಾ? ಜಿಲ್ಲಾ ಮಂತ್ರಿ,ಶಾಸಕ ಹೇಳಿದಂತೆ ನಡೆದುಕೊಳ್ಳಬಾರದು. ಅಧಿಕಾರ ಶಾಶ್ವತವಲ್ಲ. ನೋಡೋಣ ಎಷ್ಟು ದಿನ ಅಂತ ಇದೇ ರೀತಿ ವರ್ತಿಸುತ್ತೀರಿ ಎಂದು ಗುಡುಗಿದರು. ಹಾಸನ ಡಿಸಿ ರೋಹಿಣಿ ಸಿಂಧೂರಿ ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರಿಗೆ ಕಾನೂನಿನ ರಕ್ಷಣೆಯಿದೆ. ಯಾವುದೇ ಪಕ್ಷದ ರಕ್ಷಣೆಯಿಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ