ಕಾರಜೋಳ ಪುತ್ರ ಹೆಸರಲ್ಲಿ ವಿವಾದಾತ್ಮಕ ಸ್ಟೇಟಸ್
Team Udayavani, Apr 14, 2018, 6:50 AM IST
ಬಾಗಲಕೋಟೆ: ಮುಧೋಳದ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಅವರ ಪುತ್ರ ಉಮೇಶ ಕಾರಜೋಳ ಅವರ ಹೆಸರಿನಲ್ಲಿರುವ ಫೇಸ್ಬುಕ್ನಲ್ಲಿ “ಮೋದಿ ಓಕೆ, ಬಿಎಸ್ವೈ ಯಾಕೆ?’ ಎಂಬ ಬರಹ ಈಗ ವಿರೋಧ ಪಕ್ಷಗಳ ಟೀಕೆಗೆ ಆಹಾರವಾಗಿದೆ. ಕಾರಜೋಳರ ಕ್ಷೇತ್ರ ಮುಧೋಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರುವ ದಿನವೇ ಈ ಸ್ಟೇಟಸ್ ಬಗ್ಗೆ ವಿರೋಧ ಪಕ್ಷದವರು ಫೇಸ್ಬುಕ್ನಲ್ಲೇ ಟೀಕೆ ಮಾಡಿದ್ದಾರೆ.
ಏ.12ರಂದು ಉಮೇಶ ಕಾರಜೋಳ ಹೆಸರಿನಲ್ಲಿ ಇರುವ ಫೇಸ್ಬುಕ್ನಲ್ಲಿ ಮೋದಿ ಓಕೆ, ಬಿಎಸ್ವೈ ಯಾಕೆ? ಎಂಬ ಬರಹ ಹಾಕಲಾಗಿತ್ತು. ರಾಯಚೂರು ಜಿಲ್ಲೆಯ ಲಿಂಗಸಗೂರು ಕ್ಷೇತ್ರದ ಆಕಾಂಕ್ಷಿ ಆಗಿರುವ ಉಮೇಶ ಅವರಿಗೆ ಅಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡು ಈ ರೀತಿ ಹಾಕಿದ್ದಾರೆಂದು ಹೇಳಲಾಗಿದೆ. ಆದರೆ, ಸಂಜೆಯ ಹೊತ್ತಿಗೆ ಉಮೇಶ ಕಾರಜೋಳ ಹೆಸರಿನ ಅದೇ ಫೇಸ್ಬುಕ್ನಲ್ಲಿ, ನಾನು ಯಾವುದೇ ಸ್ಟೇಟಸ್ ಹಾಕಿಲ್ಲ. ಕಿಡಿಗೇಡಿಗಳು ನನ್ನ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾಡಿದ್ದಾರೆಂದು ಮತ್ತೂಂದು ಸ್ಟೇಟಸ್ ಹಾಕಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ