ಕಾರಜೋಳ ಪುತ್ರ ಹೆಸರಲ್ಲಿ ವಿವಾದಾತ್ಮಕ ಸ್ಟೇಟಸ್
Team Udayavani, Apr 14, 2018, 6:50 AM IST
ಬಾಗಲಕೋಟೆ: ಮುಧೋಳದ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಅವರ ಪುತ್ರ ಉಮೇಶ ಕಾರಜೋಳ ಅವರ ಹೆಸರಿನಲ್ಲಿರುವ ಫೇಸ್ಬುಕ್ನಲ್ಲಿ “ಮೋದಿ ಓಕೆ, ಬಿಎಸ್ವೈ ಯಾಕೆ?’ ಎಂಬ ಬರಹ ಈಗ ವಿರೋಧ ಪಕ್ಷಗಳ ಟೀಕೆಗೆ ಆಹಾರವಾಗಿದೆ. ಕಾರಜೋಳರ ಕ್ಷೇತ್ರ ಮುಧೋಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರುವ ದಿನವೇ ಈ ಸ್ಟೇಟಸ್ ಬಗ್ಗೆ ವಿರೋಧ ಪಕ್ಷದವರು ಫೇಸ್ಬುಕ್ನಲ್ಲೇ ಟೀಕೆ ಮಾಡಿದ್ದಾರೆ.
ಏ.12ರಂದು ಉಮೇಶ ಕಾರಜೋಳ ಹೆಸರಿನಲ್ಲಿ ಇರುವ ಫೇಸ್ಬುಕ್ನಲ್ಲಿ ಮೋದಿ ಓಕೆ, ಬಿಎಸ್ವೈ ಯಾಕೆ? ಎಂಬ ಬರಹ ಹಾಕಲಾಗಿತ್ತು. ರಾಯಚೂರು ಜಿಲ್ಲೆಯ ಲಿಂಗಸಗೂರು ಕ್ಷೇತ್ರದ ಆಕಾಂಕ್ಷಿ ಆಗಿರುವ ಉಮೇಶ ಅವರಿಗೆ ಅಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡು ಈ ರೀತಿ ಹಾಕಿದ್ದಾರೆಂದು ಹೇಳಲಾಗಿದೆ. ಆದರೆ, ಸಂಜೆಯ ಹೊತ್ತಿಗೆ ಉಮೇಶ ಕಾರಜೋಳ ಹೆಸರಿನ ಅದೇ ಫೇಸ್ಬುಕ್ನಲ್ಲಿ, ನಾನು ಯಾವುದೇ ಸ್ಟೇಟಸ್ ಹಾಕಿಲ್ಲ. ಕಿಡಿಗೇಡಿಗಳು ನನ್ನ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾಡಿದ್ದಾರೆಂದು ಮತ್ತೂಂದು ಸ್ಟೇಟಸ್ ಹಾಕಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…