ಕಾರಜೋಳ ಪುತ್ರ ಹೆಸರಲ್ಲಿ ವಿವಾದಾತ್ಮಕ ಸ್ಟೇಟಸ್
Team Udayavani, Apr 14, 2018, 6:50 AM IST
ಬಾಗಲಕೋಟೆ: ಮುಧೋಳದ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಅವರ ಪುತ್ರ ಉಮೇಶ ಕಾರಜೋಳ ಅವರ ಹೆಸರಿನಲ್ಲಿರುವ ಫೇಸ್ಬುಕ್ನಲ್ಲಿ “ಮೋದಿ ಓಕೆ, ಬಿಎಸ್ವೈ ಯಾಕೆ?’ ಎಂಬ ಬರಹ ಈಗ ವಿರೋಧ ಪಕ್ಷಗಳ ಟೀಕೆಗೆ ಆಹಾರವಾಗಿದೆ. ಕಾರಜೋಳರ ಕ್ಷೇತ್ರ ಮುಧೋಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರುವ ದಿನವೇ ಈ ಸ್ಟೇಟಸ್ ಬಗ್ಗೆ ವಿರೋಧ ಪಕ್ಷದವರು ಫೇಸ್ಬುಕ್ನಲ್ಲೇ ಟೀಕೆ ಮಾಡಿದ್ದಾರೆ.
ಏ.12ರಂದು ಉಮೇಶ ಕಾರಜೋಳ ಹೆಸರಿನಲ್ಲಿ ಇರುವ ಫೇಸ್ಬುಕ್ನಲ್ಲಿ ಮೋದಿ ಓಕೆ, ಬಿಎಸ್ವೈ ಯಾಕೆ? ಎಂಬ ಬರಹ ಹಾಕಲಾಗಿತ್ತು. ರಾಯಚೂರು ಜಿಲ್ಲೆಯ ಲಿಂಗಸಗೂರು ಕ್ಷೇತ್ರದ ಆಕಾಂಕ್ಷಿ ಆಗಿರುವ ಉಮೇಶ ಅವರಿಗೆ ಅಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡು ಈ ರೀತಿ ಹಾಕಿದ್ದಾರೆಂದು ಹೇಳಲಾಗಿದೆ. ಆದರೆ, ಸಂಜೆಯ ಹೊತ್ತಿಗೆ ಉಮೇಶ ಕಾರಜೋಳ ಹೆಸರಿನ ಅದೇ ಫೇಸ್ಬುಕ್ನಲ್ಲಿ, ನಾನು ಯಾವುದೇ ಸ್ಟೇಟಸ್ ಹಾಕಿಲ್ಲ. ಕಿಡಿಗೇಡಿಗಳು ನನ್ನ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾಡಿದ್ದಾರೆಂದು ಮತ್ತೂಂದು ಸ್ಟೇಟಸ್ ಹಾಕಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ