ಶ್ರೀರಾಮುಲುಗೆ ಮುತ್ತಿಗೆ, ಕಾರಿಗೆ ಕಲ್ಲು
Team Udayavani, Apr 14, 2018, 6:00 AM IST
ನಾಯಕನಹಟ್ಟಿ(ಚಿತ್ರದುರ್ಗ): ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಶುಕ್ರವಾರ ಇಲ್ಲಿನ ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಬಂದಿದ್ದ ಶ್ರೀರಾಮುಲುಗೆ ಟಿಕೆಟ್ ವಂಚಿತ ಎಸ್.ತಿಪ್ಪೇಸ್ವಾಮಿ ಅವರ 350ಕ್ಕೂ ಹೆಚ್ಚು ಬೆಂಬಲಿಗರು ಮುತ್ತಿಗೆ ಹಾಕಲು ಯತ್ನಿಸಿ, ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದರು.
50ಕ್ಕೂ ಹೆಚ್ಚು ಮಹಿಳೆಯರು ಕೈಯಲ್ಲಿ ಪೊರಕೆ ಹಿಡಿದು “ಶ್ರೀರಾಮುಲು ವಾಪಸ್ ಹೋಗಿ’ ಎಂಬ ಘೋಷಣೆ ಕೂಗಿದರು. ಈ ವೇಳೆ, ಪರಿಸ್ಥಿತಿಯನ್ನು ತಹಬದಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಶ್ರೀರಾಮುಲು ದೇಗುಲದ ಮುಂಭಾಗಕ್ಕೆ ಆಗಮಿಸುತ್ತಿದ್ದಂತೆ ತಿಪ್ಪೇಸ್ವಾಮಿ ಬೆಂಬಲಿಗರು ಘೋಷಣೆ ಕೂಗುತ್ತಾ, ಕಾರಿನ ಮುಂದೆ ನುಗ್ಗಿದರು. ಪೊಲೀಸರು ಅವರನ್ನು ಚದುರಿಸಿದರು. ನಂತರ, ಶ್ರೀರಾಮುಲು ದೇವಾಲಯದಿಂದ ಹೊರಬಂದಾಗಲೂ ತಿಪ್ಪೇಸ್ವಾಮಿ ಬೆಂಬಲಿಗರು ಮತ್ತೆ ದಾಂಧಲೆ ಆರಂಭಿಸಿ, ಕಾರು ಹತ್ತಲು ಅವಕಾಶ ನೀಡದೇ ಅಡ್ಡಿಪಡಿಸಿದರು. ಕೆಲವರು ಚಪ್ಪಲಿಗಳನ್ನೂ ಎಸೆದರು. ಪೊಲೀಸರು ಮತ್ತೆ ಲಾಠಿ ಪ್ರಹಾರ ನಡೆಸಿದರು.
ಪ್ರತಿಭಟನಾಕಾರರು ಇಟ್ಟಿಗೆ, ಕಲ್ಲು ಹಾಗೂ ಖಾಲಿ ಬಾಟಲಿಗಳನ್ನು ಎಸೆದಿದ್ದರಿಂದ ಶ್ರೀರಾಮುಲು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲ ಸೇರಿ ಐದು ಕಾರುಗಳ ಗಾಜುಗಳು ಪುಡಿ ಪುಡಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ