ಸಿದ್ಧರಾಮಯ್ಯ ಸೋಲಿಸಲು BJP-JDS 3 ತಿಂಗಳ ಹಿಂದೆಯೇ ಒಪ್ಪಂದ: ಡಿಕೆಶಿ
Team Udayavani, Apr 16, 2018, 4:22 PM IST
ಬೆಂಗಳೂರು: ”ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೂರು ತಿಂಗಳ ಹಿಂದೆಯೇ ಒಪ್ಪಂದವಾಗಿದೆ” ಎಂಬ ಸ್ಫೋಟಕ ವಿಷಯವನ್ನು ರಾಜ್ಯ ವಿದ್ಯುತ್ ಸಚಿವ ಡಿ ಕೆ ಶಿವಕುಮಾರ್ ಬಹಿರಂಗಪಡಿಸಿದ್ದಾರೆ.
ಟಿಕೆಟ್ ಸಿಗದ ಕೆಲವು ಕಾಂಗ್ರೆಸ್ ಶಾಸಕರು ಇಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಮಾಡಿ ತಮ್ಮ ಅಳಲನ್ನು ತೋಡಿಕೊಂಡರು. ಟಿಕೆಟ್ ಹಂಚಿಕೆ ಮಾಡುವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಂಹಪಾಲನ್ನು ತನ್ನವರಿಗಾಗಿ ಉಳಿಸಿಕೊಂಡಿದ್ದಾರೆ ಎಂಬ ಬಗ್ಗೆ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಅಂಜನಮೂರ್ತಿ ಅವರ ಬೆಂಬಲಿಗರು ಇಂದು ನೆಲಮಂಗಲ ಹೆದ್ದಾರಿಗೆ ಸಮೀಪ ರಸ್ತೆಯಲ್ಲಿ ಟೈರ್ ಸುಟ್ಟು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿದರು.
ಚಿತ್ರ ನಟ ಅಂಬರೀಷ್ ಅವರಿಗೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡಲಾಗಿರುವುದನ್ನು ಪ್ರತಿಭಟಿಸಿ ಪಕ್ಷದ ನಾಯಕ ರವಿ ಕುಮಾರ್ ಅವರ ಬೆಂಬಲಿಗರು ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಧಾಂಧಲೆ ನಡೆಸಿದರು. ಕುರ್ಚಿ ಹಾಗೂ ಬಾಗಿಲುಗಳನ್ನು ಧ್ವಂಸಗೊಳಿಸಿದರು. ಟಿಕೆಟ್ ನೀಡಿಕೆ ಪಟ್ಟಿಯನ್ನು ಬದಲಾಯಿಸಿ ಮಂಡ್ಯದಿಂದ ರವಿ ಕುಮಾರ್ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಅವರು ಆಗ್ರಹಿಸಿದರು.
ಚುನಾವಣಾ ಆಯೋಗದ ಆಣತಿಯಂತೆ ಆದಾಯ ತೆರಿಗೆ ಇಲಾಖಾಧಿಕಾರಿಗಳ ಇಂದು ಕಾಂಗ್ರೆಸ್ ಶಾಸಕ ಬಿ ಶಿವಣ್ಣ ಅವರ ನಿವಾಸದ ಮೇಲೆ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಶಾಸಕ ಶಿವಣ್ಣ ಅವರ ಮನೆಯಲ್ಲಿ ಭಾರೀ ಪ್ರಮಾಣದ ನಗದನ್ನು ಸಂಗ್ರಹಿಸಿಡಲಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣಾ ಆಯೋಗ ಐಟಿ ಅಧಿಕಾರಿಗಳಿಗೆ ಅದನ್ನು ತಿಳಿಸಿ ದಾಳಿ ನಡೆಸುವಂತೆ ಕೋರಿದರು ಎನ್ನಲಾಗಿದೆ.
ಆ ಪ್ರಕಾರ ನಸುಕಿನ 5.30ರ ಹೊತ್ತಿಗೆ ಐಟಿ ಅಧಿಕಾರಿಗಳ ಶಿವಣ್ಣ ಅವರ ಮನೆಗೆ ದಾಳಿ ನಡೆಸಿ ಬೆಳಗ್ಗೆ 9.30ರ ಹೊತ್ತಿಗೆ ನಿರ್ಗಮಿಸಿದರು. ಆದರೆ ದಾಳಿಯಲ್ಲಿ ಅವರಿಗೆ ಏನೂ ಸಿಗಲಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ