ತಮ್ಮ ವಿರುದ್ಧದ ಪ್ರತಿಭಟನೆಗೆ ಕುಮಾರಸ್ವಾಮಿ ಕಿಡಿ
Team Udayavani, Apr 19, 2018, 6:00 AM IST
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಕಲ್ಲಪ್ಪ ಹಂಡೀಬಾಗ್ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿದೆ ಮಾತನಾಡಿದ್ದೇನೆ ಎಂದು ರಾಜಕೀಯ ಕಾರಣಕ್ಕಾಗಿ ನನ್ನ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುರುಬ ಸಮುದಾಯದ ಕೆಲವು ಮುಖಂಡರು ಹಂಡೀಬಾಗ್ ಕುಟುಂಬ ಸಂಕಷ್ಟದಲ್ಲಿರುವಾಗ ಎಲ್ಲಿ ಹೋಗಿದ್ದರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನಾನು ಎಲ್ಲಾ ಸಮುದಾಯದವರನ್ನು ಗೌರವವಾಗಿ ಕಾಣುತ್ತೇನೆ. ಯಾರ ಬಗ್ಗೆಯೂ ಕೇವಲವಾಗಿ ಮಾತನಾಡುವುದಿಲ್ಲ. ಕಲ್ಲಪ್ಪ ಹಂಡೀಬಾಗ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ ಎಂಬುದನ್ನು ತಿಳಿದು ಅವರ ಮನೆಗೆ ಹೋಗಿ ಹಂಡೀಬಾಗ್ ಪತ್ನಿಯೊಂದಿಗೆ ಮಾತನಾಡಿದ್ದೆ. ಆ ಸಂದರ್ಭದಲ್ಲಿ ಕುಟುಂಬದ ಸಂಕಷ್ಟದ ಬಗ್ಗೆ ಮಾತನಾಡಿದ್ದೆ. ಇದನ್ನೇ ತಪ್ಪಾಗಿ ಅರ್ಥೈಸಿಕೊಂಡು ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ನನ್ನ ವಿರುದ್ಧ ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿರುವ ಸಮುದಾಯದ ಕೆಲವು ಮುಖಂಡರು ಕಲ್ಲಪ್ಪ ಹಂಡೀಬಾಗ್ ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಹೋಗಿದ್ದರು? ಅವರ ಕುಟುಂಬ ಸಂಕಷ್ಟದಲ್ಲಿದ್ದಾಗ ಏಕೆ ನೆರವಿಗೆ ಬರಲಿಲ್ಲ? ಅವರಿಗೆ ನಿಜವಾಗಿಯೂ ಆ ಕುಟುಂಬದ ಬಗ್ಗೆ ಗೌರವ ಇದ್ದರೆ ಕುಟುಂಬಕ್ಕೆ ನೆರವು ನೀಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕೇ ಹೊರತು ರಾಜಕೀಯ ಕಾರಣಕ್ಕಾಗಿ ನನ್ನ ವಿರುದ್ಧ ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ. ಇಂತಹ ಕೆಲವು ಮುಖಂಡರಿಂದ ಸಮುದಾಯಕ್ಕೇ ಅಗೌರವ ಉಂಟಾಗುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ ಎರಡಲ್ಲ,ನಾಲ್ಕು ಕ್ಷೇತ್ರಗಳಲ್ಲಿ ಬೇಕಾದರೂ ನಿಲ್ಲಲಿ.ಅದು ಅವರಿಗೆ ಸಂಬಂಧಿಸಿದ ವಿಚಾರ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಮೇಲಷ್ಟೇ ನನ್ನ ಗಮನ.
– ಎಚ್.ಡಿ.ಕುಮಾರಸ್ವಾಮಿ,ಜೆಡಿಎಸ್ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ