ಚಟುವಟಿಕೆಯ ಕೇಂದ್ರವಾದ ರಾಜಭವನ
Team Udayavani, May 17, 2018, 6:00 AM IST
ಬೆಂಗಳೂರು: ಅತಂತ್ರ ವಿಧಾನಸಭೆ ಹಿನ್ನೆಲೆಯಲ್ಲಿ ರಾಜಭವನ ಬುಧವಾರ ಇಡೀ ದಿನ ಬಿರುಸಿನ ರಾಜಕೀಯ ಚಟುವಟಿಕೆಯ ಕೇಂದ್ರವಾಗಿತ್ತು. ಬೆಳಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಯಡಿಯೂರಪ್ಪ ನೇಮಕವಾದ ಬಳಿಕ, ರಾಜಭವನಕ್ಕೆ ಬಂದ ಕೇಂದ್ರ ಸಚಿವರಾದ ಅನಂತಕುಮಾರ್, ಪ್ರಕಾಶ್ ಜಾಬ್ಡೇಕರ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ವಾಲಾ ಅವರನ್ನು ಭೇಟಿ ಮಾಡಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿತು. ಬಳಿಕ ಯಡಿಯೂರಪ್ಪ ಮಾತನಾಡಿ, ರಾಜ್ಯಪಾಲರು ಅವಕಾಶ ನೀಡುವ ನಿರೀಕ್ಷೆಯಿದ್ದು, ಸರ್ಕಾರ ರಚಿಸುವುದು ನಿಶ್ಚಿತ ಎಂದು ಹೇಳಿದರು.
ಮಧ್ಯಾಹ್ನದ ವೇಳೆಗೆ ಕೇಂದ್ರ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ರಾಜಭವನಕ್ಕೆ ಭೇಟಿ ನೀಡಿದರು. ಸಂಜೆ ವೇಳೆಗೆ, ಕಾಂಗ್ರೆಸ್, ಜೆಡಿಎಸ್ ನಾಯಕರ ದಂಡು ರಾಜಭವನದತ್ತ ದೌಡಾಯಿಸಿತು. ಕುಮಾರಸ್ವಾಮಿ ನೇತೃತ್ವದಲ್ಲಿ ಸಾಕಷ್ಟು ಜೆಡಿಎಸ್ ಶಾಸಕರು ಸಂಜೆ 5 ಗಂಟೆ ಹೊತ್ತಿಗೆ ರಾಜಭವನಕ್ಕೆ ಬಂದು ಪರೇಡ್ಗೆ ಯತ್ನಿಸಿದರಾದರೂ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ರಮೇಶ್ಬಾಬು ಸೇರಿದಂತೆ 10 ಮಂದಿಗಷ್ಟೇ ರಾಜ್ಯಪಾಲರ ಭೇಟಿಗೆ ಅವಕಾಶ ನೀಡಲಾಯಿತು. ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಡಿ.ಕೆ. ಶಿವಕುಮಾರ್ ಇತರರು ರಾಜಭವನಕ್ಕೆ ಭೇಟಿ ನೀಡಿದರು. ಪರಮೇಶ್ವರ್, ಕೃಷ್ಣ ಬೈರೇಗೌಡ ಸೇರಿದಂತೆ 10 ಮಂದಿ ರಾಜ್ಯಪಾಲರನ್ನು ಭೇಟಿಯಾದರು.
ರಾಜ್ಯಪಾಲರ ಭೇಟಿ ಜಂಟಿ ಹೇಳಿಕೆ ನೀಡಿದ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಎಸ್ ಬೆಂಬಲಿಸಲು ನಿರ್ಣಯ
ಕೈಗೊಳ್ಳಲಾಗಿದ್ದು, ಈ ಸಂಬಂಧ ಸರ್ಕಾರ ರಚನೆಗೆ ಅವಕಾಶ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ, ರಾಜಭವನದ ಎದುರು ಜಮಾಯಿಸಿದ್ದ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ