ಪರಂ,ಮೊಯ್ಲಿ ಕೈ ಟಿಕೆಟ್ ಮಾರುತ್ತಿದ್ದಾರೆ: ಛಲವಾದಿ ಕಿಡಿ
Team Udayavani, Apr 20, 2018, 3:57 PM IST
ಬೆಂಗಳೂರು : ಪುಲಕೇಶಿ ನಗರ ಕಾಂಗ್ರೆಸ್ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಬಂಡಾಯವೆದ್ದಿದ್ದ ಛಲವಾದಿ ನಾರಾಯಣಸ್ವಾಮಿ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ಟಾಪ್ ಲೀಡರ್ಗಳಾದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಸಂಸದ ವೀರಪ್ಪ ಮೊಯಿಲಿ ಅವರು ಟಿಕೆಟ್ಗಳನ್ನು ಹಣ ಪಡೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣ ಸ್ವಾಮಿ ‘ಪರಮೇಶ್ವರ್ ಅವರು ಮಹದೇವಪುರ, ನೆಲಮಂಗಲ ಕ್ಷೇತ್ರದ ಟಿಕೆಟ್ ಸೇಲ್ ಮಾಡಿದ್ದು ದಲಿತ ವಿರೋಧಿಯಾಗಿರುವ ವೀರಪ್ಪ ಮೊಯ್ಲಿ ದೇವನಹಳ್ಳಿ, ಯಲಹಂಕ ಕ್ಷೇತ್ರದ ಟಿಕೆಟ್ಗಳನ್ನು ಸೇಲ್ ಮಾಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದರು.
‘ಪಕ್ಷದಲ್ಲಿ ನಾನು 40 ವರ್ಷಗಳಿಂದ ದುಡಿದಿದ್ದೇನೆ ಖರ್ಗೆ ಒಂದಿಬ್ಬರು ಸೇರಿ ಬೇರೆಲ್ಲಾ ನಾಯಕರು ಹೊರಗಿನಿಂದ ಬಂದವರು. ಖರ್ಗೆ ಅವರ ಮಾತಿಗೆ ಬೆಲೆ ಇಲ್ಲದಾಗಿದೆ. ಹೀಗಾಗಿ ನಾನು ಬಿಜೆಪಿ ಸೇರ್ಪಡೆಯಾಗಿದ್ದೇನೆ’ ಎಂದರು.
‘ನನ್ನ ಬತ್ತಳಿಕೆಯಲ್ಲಿ ಬಹಳಷ್ಟು ಅಸ್ತ್ರಗಳಿವೆ ಒಂದೊಂದಾಗಿ ಬಿಡುತ್ತೇನೆ’ಎಂದು ಬಾಂಬ್ ಸಿಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ