ಸಿಎಟಿ ಆದೇಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್
Team Udayavani, Apr 26, 2018, 6:40 AM IST
ಬೆಂಗಳೂರು: ಬೆಳಗಾವಿ ಪೊಲೀಸ್ ಆಯುಕ್ತ ಸ್ಥಾನದಿಂದ ರೈಲ್ವೆ ಡಿಐಜಿಪಿ ಹುದ್ದೆಗೆ ಡಾ.ಸಿ ರಾಜಪ್ಪ ಅವರ ವರ್ಗಾವಣೆಗೆ ತಡೆ ನೀಡಿದ್ದ ಕೇಂದ್ರೀಯ ಆಡಳಿತ ನ್ಯಾಯಮಂಡಳಿ (ಸಿಎಟಿ) ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಐಪಿಎಸ್ ಅಧಿಕಾರಿಗಳಾದ ರಾಜಪ್ಪ ಹಾಗೂ ಎಸಿಬಿ ಐಜಿಪಿ ಚಂದ್ರಶೇಖರ್ ವರ್ಗಾವಣೆ ಆದೇಶಕ್ಕೆ ಸಿಎಟಿ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಕೇಂದ್ರ ಚುನಾವಣಾ ಆಯೋಗ ಎರಡು ಪ್ರತ್ಯೇಕ ರಿಟ್ ಅರ್ಜಿಗಳನ್ನು ಸಲ್ಲಿಸಿತ್ತು. ಬುಧವರ ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಜಿ ರಮೇಶ್ ಹಾಗೂ ನ್ಯಾಯಮೂರ್ತಿ ಬಿ. ಶ್ರೀನಿವಾಸೇಗೌಡ ಅವರಿದ್ದ ವಿಭಾಗೀಯ ಪೀಠ, ಇಬ್ಬರೂ ಅಧಿಕಾರಿಗಳ ವರ್ಗಾವಣೆಗೆ ಸಿಎಟಿ ಏ.19ರಂದು ನೀಡಿದ್ದ ತಡೆ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು. ಜತೆಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ,ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಹಾಗೂ ಇನ್ನಿತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ